LPG Good News: ಬೆಂಗಳೂರು ಹೋಟೆಲ್ಗಳಿಗೆ 17,5000 ಸಿಲಿಂಡರ್ ವಿತರಣೆ: ಕೆಎಚ್ ಮುನಿಯಪ್ಪ
ಬೆಂಗಳೂರು: ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆಯ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಇದರಿಂದ ನಾಗರಿಕರು, ಹೋಟೆಲ್ ಉದ್ಯಮಿಗಳು ಸಂಕಷ್ಟ ಎದುರಿಸುವಂತಾಗಿದೆ. ಇದೀಗ ಬೆಂಗಳೂರು ಹೋಟೆಲ್ ಮಾಲೀಕರಿಗೆ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಅವರು ಗುಡ್ ನ್ಯೂಸ್ ನೀಡಿದ್ದಾರೆ. ನಾಳೆ ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಪೂರೈಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಅವರು, 10,000 ಕ್ಕೆ ಬದಲಾಗಿ ಹೆಚ್ಚುವರಿಯಾಗಿ 17,500 ವಾಣಿಜ್ಯ ಸಿಲಿಂಡರ್ ವಿತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಈ ಪ್ರಕ್ರಿಯೆಗೆ ಕೊಂಚ ಸಮಯ ಹಿಡಿಯಬಹುದು ಎಲ್ಲರು ಸಹಿಕರಿಸುವಂತೆ ಅವರು ತಿಳಿಸಿದ್ದಾರೆ. ನಾಳೆಯಿಂದ ಸಮಸ್ಯೆ ಬಗೆಹರಿಯಲಿದೆ. ದೇಶಿಯ ಸಿಲಿಂಡರ್ ವಿತರಣೆಯಲ್ಲೂ ಸಮಸ್ಯೆ ಆಗುತ್ತಿದ್ದು, ಗ್ರಾಹಕರು ಡಿಸ್ಟ್ರಿಬ್ಯೂಟರ್ಗಳ ಕಚೇರಿ, ಏಜೆನ್ಸಿಗಳ ಮುಂದೆ ಹೋಗದಂತೆ ಸಚಿವರು ಮನವಿ ಮಾಡಿಕೊಂಡಿದ್ದಾರೆ.

ಸದ್ಯ ವಾಣಿಜ್ಯ ಸಿಲಿಂಡರ್ ಇಲ್ಲದೇ ಪರತಪಿಸುತ್ತಿದ್ದ ಬೆಂಗಳೂರು ಹೋಟೆಲ್ ಉದ್ಯಮಿಗಳು ಅಗತ್ಯ ಸಿಲಿಂಡರ್ ಪಡೆಯಲಿದ್ದಾರೆ. ಇಷ್ಟು ಸಿಲಿಂಡರ್ ಒಂದೇ ದಿನದಲ್ಲಿ ಪೂರೈಕೆ ಮಾಡಲು ಆಗುವುದಿಲ್ಲ. ಕ್ರಮೇಣ ಪೂರೈಕೆ ಆಗಲಿದೆ. ಇದರಿಂದ ಊಟ-ತಿಂಡಿ ಬಿಲ್ಗಳಲ್ಲಿ ಸೇರಿಸಲಾಗಿದ್ದ ಗ್ಯಾಸ್ ಬಿಲ್ ಕೈಬಿಡುವ ಸಾಧ್ಯತೆ ಇದೆ. ಇದು ಗ್ರಾಹಕರಿಗೆ ಗುಡ್ನ್ಯೂಸ್ ಕೊಟ್ಟಂತಾಗಿದೆ.
ನಗರ ಪ್ರದೇಶಗಳಲ್ಲಿ ಮನೆ ಬಳಕೆ ಗ್ಯಾಸ್ ಸಿಲಿಂಡರ್ ಬುಕ್ ಆದ ನಂತರದ 25 ದಿನಕ್ಕೆ ಬುಕಿಂಗ್ ಮಾಡಲು ಅವಕಾಶ ನೀಡಲಾಗಿದೆ. ಗ್ರಾಮೀಣ ಭಾಗಗಳಲ್ಲಿ 45 ದಿನಗಳಿಗೆ ಈ ಅವಧಿ ಸಿಮೀತಗೊಳಿಸಲಾಗಿದೆ. ಒಂದು ವೇಳೆ ಮನೆ ಬಳಿಕ ಸಿಲಿಂಡರ್ ಅನ್ನು ವಾಣಿಜ್ಯ ಬಳಕೆಗೆ ಬಳಸಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಕೆ.ಎಚ್.ಮುನಿಯಪ್ಪ ಎಚ್ಚರಿಕೆ ಕೊಟ್ಟಿದ್ದಾರೆ.
ಸೌದೆ, ಸ್ಟೌ ಬಳಸಲು ಸಚಿವರ ಮನವಿ
ಯುದ್ಧದ ಪರಿಸ್ಥಿತಿ ಇದ್ದು, ಎಲ್ಪಿಜಿ ಸಿಲಿಂಡರ್ ಕೊರತೆ ಉಂಟಾಗಿದೆ. ಹಿಗಾಗಿ ನರದ ಜನರು ಎಲೆಕ್ಟ್ರಿಕ್ ಸ್ಟೌ ಉಪಯೋಗಿಸಬೇಕು. ಹಳ್ಳಿ ಭಾಗದ ಜನರು ಇನ್ನಷ್ಟು ದಿನ ಸೌದೆ ಬಳಸುವಂತೆ ಸಚಿವರು ಮನವಿ ಮಾಡಿದ್ದಾರೆ. ಸದ್ಯ ತೈಲ ಹಡಗುಗಳು ಭಾರತಕ್ಕೆ ಬರುತ್ತಿವೆ. ಆದಷ್ಟು ಶೀಘ್ರವೇ ಈ ಎಲ್ಪಿಜಿ ಸಿಲಿಂಡರ್ ಸಮಸ್ಯೆ ನೀಗಲಿದೆ ಎಂದು ಅವರು ಭರವಸೆ ನೀಡಿದ್ದಾರೆ.
-
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ













Click it and Unblock the Notifications