ಬೆಂಗಳೂರಿನಲ್ಲಿ ಬಲೂನ್ಗಳಿಗೆ ತುಂಬಿಸುವ ಗ್ಯಾಸ್ ಸ್ಫೋಟ; ಸಂಭ್ರಮದ ಮನೆಯಲ್ಲಿ ಸೂತಕ!
ಬೆಂಗಳೂರು, ಜುಲೈ 04: ಸಿಲಿಕಾನ್ ಸಿಟಿಯಲ್ಲಿ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಮನೆಯಲ್ಲಿ ದಿಢೀರ್ ಸೂತಕದ ಛಾಯೆ ಆವರಿಸಿದೆ. ಬರ್ತ್ ಡೇ ಆಚರಿಸುವುದಕ್ಕಾಗಿ ಬಲೂನ್ ಗಳಿಗೆ ತುಂಬಿಸುತ್ತಿದ್ದ ಗ್ಯಾಸ್ ಸ್ಫೋಟಗೊಂಡು ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಅಪಾರ್ಟ್ ಮೆಂಟ್ ವೊಂದರಲ್ಲಿ ನಡೆದಿದೆ.
ಬೆಂಗಳೂರು ಪರಪ್ಪನ ಅಗ್ರಹಾರದ ನಿವಾಸಿ 19 ವರ್ಷದ ದಿನೇಶ್ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿಯು ಹುಟ್ಟುಹಬ್ಬ ಹಾಗೂ ವಿವಿಧ ಸಭೆ ಸಮಾರಂಭಗಳಿಗೆ ಗ್ಯಾಸ್ ತುಂಬಿಸಿದ ಬಲೂನ್ ಮಾರಾಟ ಮಾಡುತ್ತಿದ್ದನು ತಿಳಿದು ಬಂದಿದೆ. ಕಳೆದ ನಾಲ್ಕು ವರ್ಷಗಳಿಂದ ದಿನೇಶ್ ಬಲೂನ್ಗಳಿಗೆ ಗ್ಯಾಸ್ ತುಂಬಿಸುವ ಉದ್ಯೋಗವನ್ನು ಮಾಡಿಕೊಂಡಿದ್ದರು. ಆನ್ ಲೈನ್ ಮೂಲಕ ಆರ್ಡರ್ ತೆಗೆದುಕೊಳ್ಳುತ್ತಿದ್ದರು ಎನ್ನಲಾಗಿದೆ.
ಅಪಾರ್ಟ್ ಮೆಂಟ್ ವೊಂದರಲ್ಲಿ ನಡೆಯುತ್ತಿದ್ದ ಹುಟ್ಟುಹಬ್ಬಕ್ಕೆ ಗ್ಯಾಸ್ ತುಂಬಿಸಿದ ಬಲೂನ್ ನೀಡುವುದಕ್ಕೆ ದಿನೇಶ್ ಒಪ್ಪಂದ ಮಾಡಿಕೊಂಡಿದ್ದನು. ಭಾನುವಾರ ತನ್ನ ಸಹಚರ ಮಹದೇಶ್ ಎಂಬುವವರ ಜೊತೆ ದಿನೇಶ್ ಅಪಾರ್ಟ್ ಮೆಂಟ್ ತಲುಪಿದ್ದರು. ತಾವು ಬೈಕ್ ನಿಲ್ಲಿಸಿದ ಸ್ಥಳದಲ್ಲೇ ಮಾಹದೇಶ್ ಹಾಗೂ ದಿನೇಶ್ ಇಬ್ಬರೂ ಬಲೂನ್ ಗಳಿಗೆ ಗ್ಯಾಸ್ ತುಂಬಿಸುವಲ್ಲಿ ನಿರತರಾಗಿದ್ದರು. ಈ ಮಧ್ಯೆ ಮಹದೇಶ್ ನೀರು ತರುವುದಕ್ಕಾಗಿ ಅಪಾರ್ಟ್ ಮೆಂಟ್ ಒಳಗೆ ಹೋಗಿದ್ದ ಸಂದರ್ಭದಲ್ಲಿ ಗ್ಯಾಸ್ ಸ್ಫೋಟಗೊಂಡು ದಿನೇಶ್ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾನೆ.

ಹುಟ್ಟುಹಬ್ಬಕ್ಕಾಗಿ 200 ಬಲೂನ್ ಆರ್ಡರ್:
ಅಪಾರ್ಟ್ ಮೆಂಟ್ ನಿವಾಸಿಯೊಬ್ಬರು ತಮ್ಮ ಮನೆಯಲ್ಲಿ ನಡೆಯುತ್ತಿದ್ದ ಬರ್ತ್ ಡೇ ಪಾರ್ಟಿಗಾಗಿ 200 ಬಲೂನ್ ನೀಡುವಂತೆ ಆರ್ಡರ್ ಕೊಟ್ಟಿದ್ದರು. ಈ ಪೈಕಿ 100 ಬಲೂನ್ ಅನ್ನು ಮೊದಲೇ ಸರಬರಾಜು ಮಾಡಲಾಗಿತ್ತು. ಬಾಕಿ ಉಳಿದ 100 ಬಲೂನ್ ನೀಡುವುದಕ್ಕೆ ಬಂದಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications