ದೆಹಲಿಯಿಂದ ಬೆಂಗಳೂರಿಗೆ ಬಂತು ಮೊದಲ ಪ್ರಯಾಣಿಕ ರೈಲು
ಬೆಂಗಳೂರು, ಮೇ 14 : ನವದೆಹಲಿಯಿಂದ ಬೆಂಗಳೂರಿಗೆ ಮೊದಲ ಪ್ರಯಾಣಿಕ ರೈಲು ಆಗಮಿಸಿದೆ. 55 ದಿನಗಳ ಬಳಿಕ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಪ್ರಯಾಣಿಕರು ದೆಹಲಿಯಿಂದ ಆಗಮಿಸಿದರು.
ಮಂಗಳವಾರ ರಾತ್ರಿ 9.15ಕ್ಕೆ ನವದೆಹಲಿಯಿಂದ ಹೊರಟಿದ್ದ ಎಸಿ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲು ಮೂರನೇ ದಿನ ಬೆಂಗಳೂರಿಗೆ ಆಗಮಿಸಿದೆ. ಮಂಗಳವಾರದಿಂದ ಪ್ರತಿದಿನ ದೆಹಲಿ- ಬೆಂಗಳೂರು ನಡುವೆ ರೈಲು ಸಂಚಾರ ಆರಂಭವಾಗಿದೆ.
ನೈಋತ್ಯ ರೈಲ್ವೆ ಪ್ರಯಾಣಿಕರನ್ನು ಬರಮಾಡಿಕೊಳ್ಳಲು ಸಿದ್ಧತೆ ನಡೆಸಿತ್ತು. ರೈಲು ಬರುತ್ತಿದ್ದಂತೆ ಎಲ್ಲರನ್ನೂ ಇಳಿಸಿ ಥರ್ಮಲ್ ಸ್ಕ್ಯಾನಿಂಗ್ ಮಾಡಲಾಯಿತು. ಆರೋಗ್ಯ ತಪಾಸಣೆ ಮಾಡದೇ ಯಾರನ್ನೂ ಸಹ ರೈಲು ನಿಲ್ದಾಣದಿಂದ ಹೊರ ಬಿಡುತ್ತಿಲ್ಲ.
ಬೆಂಗಳೂರು ನಗರದಿಂದ ಪ್ರತಿದಿನ ರಾತ್ರಿ 8.30ಕ್ಕೆ ನವದೆಹಲಿಗೆ ರೈಲು ಸಂಚಾರ ನಡೆಸಲಿದೆ. ಲಾಕ್ ಡೌನ್ ಪರಿಣಾಮ ಪ್ರಯಾಣಿಕ ರೈಲು ಸಂಚಾರ ರದ್ದುಗೊಳಿಸಿದ ಮೇಲೆ ಇದೇ ಮೊದಲ ರೈಲು ದೆಹಲಿ-ಬೆಂಗಳೂರು ನಡುವೆ ಸಂಚಾರ ನಡೆಸಿದೆ.

ಥರ್ಮಲ್ ಸ್ಕ್ಯಾನಿಂಗ್
ಕೇಂದ್ರ ಗೃಹ ಇಲಾಖೆ ಮಾರ್ಗಸೂಚಿ ಅನ್ವಯ ರೈಲು ಹತ್ತುವ ಮತ್ತು ಇಳಿದ ಮೇಲೆ ಎಲ್ಲಾ ಪ್ರಯಾಣಿಕರಿಗೂ ಥರ್ಮಲ್ ಸ್ಕ್ಯಾನಿಂಗ್ ಕಡ್ಡಾಯವಾಗಿ ಮಾಡಬೇಕು. ನೈಋತ್ಯ ರೈಲ್ವೆ ಥರ್ಮಲ್ ಸ್ಕ್ಯಾನಿಂಗ್ ಮಾಡಲು ನಿಲ್ದಾಣದಲ್ಲಿ ಹಲವಾರು ಕೌಂಟರ್ಗಳನ್ನು ಮಾಡಿದೆ.

1076 ಜನರ ಪ್ರಯಾಣ
ನವದೆಹಲಿ-ಬೆಂಗಳೂರು ನಡುವಿನ ಎಸಿ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲಿನಲ್ಲಿ 1076 ಜನರು ಸಂಚಾರ ನಡೆಸಬಹುದಾಗಿದೆ. ಸೋಮವಾರ ಟಿಕೆಟ್ ಬುಕ್ಕಿಂಗ್ ಆರಂಭಿಸಿದ ಅರ್ಧಗಂಟೆಯಲ್ಲಿ ಮೊದಲ ರೈಲಿನ ಎಲ್ಲಾ ಟಿಕೆಟ್ ಸೋಲ್ಡ್ ಔಟ್ ಆಗಿತ್ತು.

ಎಲ್ಲೆಲ್ಲಿ ರೈಲು ನಿಲುಗಡೆ?
ನವದೆಹಲಿ-ಬೆಂಗಳೂರು ಮಾರ್ಗದ ಎಸಿ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲು ಅನಂತಪುರ, ಗುಂತಕಲ್ ಜಂಕ್ಷನ್, ಸಿಕಂದರಾಬಾದ್, ನಾಗ್ಪುರ, ಭೋಪಾಲ್ ಮತ್ತು ಝಾನ್ಸಿಯಲ್ಲಿ ನಿಲುಗಡೆಗೊಳ್ಳಲಿದೆ.

ವೇಳಾಪಟ್ಟಿ
* ಬೆಂಗಳೂರು ನಗರದಿಂದ ಪ್ರತಿದಿನ ರಾತ್ರಿ 8.30ಕ್ಕೆ ರೈಲು ಹೊರಡಲಿದೆ. ಮೂರನೇ ದಿನ ಬೆಳಗ್ಗೆ 5.55ಕ್ಕೆ ನವದೆಹಲಿಯನ್ನು ತಲುಪುತ್ತದೆ.
* ನವದೆಹಲಿಯಿಂದ ಪ್ರತಿದಿನ ರಾತ್ರಿ 9.15ಕ್ಕೆ ರೈಲು ಹೊಡಲಿದ್ದು, ಮೂರನೇ ದಿನ ಬೆಳಗ್ಗೆ 6.40ಕ್ಕೆ ಬೆಂಗಳೂರನ್ನು ತಲುಪಲಿದೆ.
-
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
ಏಪ್ರಿಲ್ 11ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು












Click it and Unblock the Notifications