ಪ್ರಥಮ ಹಾಗೂ ದ್ವಿತೀಯ ಪಿಯು ದಾಖಲಾತಿ ಅವಧಿ ವಿಸ್ತರಣೆ
ಬೆಂಗಳೂರು, ಸೆಪ್ಟೆಂಬರ್ 1: ಪದವಿ ಪೂರ್ವ ಶಿಕ್ಷಣ ಇಲಾಖೆಯು ಪ್ರಥಮ ಹಾಗೂ ದ್ವಿತೀಯ ಪಿಯು ಕಾಲೇಜುಗಳಲ್ಲಿ ದಾಖಲಾತಿ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಿದೆ.
ಈ ಹಿಂದೆ ಪ್ರಥಮ ಪಿಯು ದಾಖಲಾತಿಗೆ ಸೆಪ್ಟೆಂಬರ್ 1 ರವರೆಗೆ ಅವಕಾಶ ನೀಡಲಾಗಿತ್ತು. ಮತ್ತು ದ್ವಿತೀಯ ಪಿಯುಗೆ ಆ.30 ರವರೆಗೆ ಅವಕಾಶ ನೀಡಲಾಗಿತ್ತು. ಇದೀಗ ಪ್ರಥಮ ಮತ್ತು ದ್ವಿತೀಯ ಪಿಯುಸಿ ಕೋರ್ಸ್ಗಳಿಗೆ ಸೆಪ್ಟೆಂಬರ್ 11 ರವರೆಗೆ ದಂಡ ಶುಲ್ಕವಿಲ್ಲದೆ ಪ್ರವೇಶ ಪಡೆಯಬಹುದಾಗಿದೆ.
ಅದೇ ರೀತಿ 670 ರೂ. ದಂಡ ಶುಲ್ಕದೊಂದಿಗೆ ಪ್ರವೇಶ ಪಡೆಯಲು ಸೆ.13 ರಿಂದ 25 ರವರೆಗೆ, ಇನ್ನು 2890 ರೂ. ವಿಶೇಷ ದಂಡ ಶುಲ್ಕದೊಂದಿಗೆ ಸೆ.27 ರಿಂದ ಅ.5 ರವರೆಗೆ ಪ್ರಥಮ ಹಾಗೂ ದ್ವಿತೀಯ ಪಿಯುಸಿ ದಾಖಲಾತಿ ಪಡೆಯಬಹುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

2021- 22ನೇ ಸಾಲಿನ ಪ್ರಥಮ ಪಿಯು ಪ್ರವೇಶದಲ್ಲಿ ಹೆಚ್ಚುವರಿಯಾಗಿ 20 ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರತಿ ಕಾಲೇಜುಗಳಿಗೆ ಅನುಮತಿ ನೀಡಿದೆ.
ಪಿಯು ತರಗತಿ ಆರಂಭಕ್ಕೆ ಮಾರ್ಗಸೂಚಿ ಪ್ರಕಟ
ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿ ಆರಂಭಕ್ಕೆ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟ ಮಾಡಿದೆ. ಕಾಲೇಜು ಆರಂಭಿಸುವ ಕುರಿತು ಶಿಕ್ಷಣ ಇಲಾಖೆ ಮತ್ತು ಆರೋಗ್ಯ ಇಲಾಖೆಯಿಂದ ಕೆಲವು ಗೈಡ್ಲೈನ್ಸ್ ಬಿಡುಗಡೆ ಆಗಿದೆ.
ವಾರದ ಮೊದಲ 3 ದಿನ ಶೇಕಡಾ 50ರಷ್ಟು ವಿದ್ಯಾರ್ಥಿಗಳಿಗೆ ಕ್ಲಾಸ್ ಮಾಡಬೇಕು. ಶೇಕಡಾ 50ರಷ್ಟು ವಿದ್ಯಾರ್ಥಿಗಳು ಭೌತಿಕ ತರಗತಿಗಳಿಗೆ ಹಾಜರಾಗಬೇಕು.
ಪಿಯು ಕಾಲೇಜು ಆರಂಭಕ್ಕೆ ಸೂಚಿಸಿದ ಮಾರ್ಗಸೂಚಿಯ ಇತರೆ ಅಂಶಗಳು ಇಲ್ಲಿದೆ:
* ತರಗತಿಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ 100ಕ್ಕಿಂತ ಕಡಿಮೆ ಇರಬೇಕು.
* ವಿಶಾಲ ಕೊಠಡಿಗಳಿದ್ದರೆ ವಾರದ ಎಲ್ಲಾ ದಿನ ಭೌತಿಕ ತರಗತಿ ನಡೆಸಬಹುದು.
* ಕಾಲೇಜು ಆವರಣದಲ್ಲಿ ದೈಹಿಕ ಅಂತರ ಕಡ್ಡಾಯವಾಗಿರುತ್ತದೆ.
* ಪ್ರಾಂಶುಪಾಲರು, ಅಧ್ಯಾಪಕರು ಹಾಗೂ ಕಾಲೇಜು ಸಿಬ್ಬಂದಿ ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದಿರಬೇಕು.
* ವಿದ್ಯಾರ್ಥಿಗಳು ಕಾಲೇಜಿಗೆ ಬರಲು ಪೋಷಕರ ಒಪ್ಪಿಗೆ ಇರಬೇಕು.
* ತರಗತಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೊವಿಡ್- 19 ನೆಗೆಟಿವ್ ವರದಿ ಕಡ್ಡಾಯ.
* ಕಾಲೇಜಿನ ಉಪನ್ಯಾಸಕರು ಹಾಗೂ ಪ್ರಾಂಶುಪಾಲರು ವಿದ್ಯಾರ್ಥಿಗಳಿಂದ ಕೋವಿಡ್ ನಿಯಮಗಳ ಉಲ್ಲಂಘನೆಯಾಗದಂತೆ ಗಮನಿಸಬೇಕು.
* ಮಾಸ್ಕ್ ಹಾಗೂ ಸ್ಯಾನಿಟೈಸರ್ ಕಡ್ಡಾಯ ಬಳಕೆ .
* ಕೆಮ್ಮುವಾಗ, ಸೀನುವಾಗ ಕರವಸ್ತ್ರ ಬಳಸಬೇಕು, ಎಲ್ಲೆಂದರಲ್ಲಿ ಉಗುಳಬಾರದು.
* ಕಾಲೇಜು ಆರಂಭಕ್ಕೆ ಮುನ್ನ ಇಡೀ ಆವರಣ ಹಾಗೂ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಬೇಕು.
Recommended Video
* ಕೋವಿಡ್ ಸೋಂಕಿತರಿಗೆ ಬಳಸಿದ ಕಟ್ಟಡಗಳನ್ನು ಎರೆಡೆರಡು ಬಾರಿ ಸ್ಯಾನಿಟೈಸ್ ಮಾಡಬೇಕು.
* ಸಾಮೂಹಿಕ ಪ್ರಾರ್ಥನೆ, ಕ್ರೀಡೆ ಎಲ್ಲಾ ಚಟುವಟಿಕೆಗಳಿಗೆ ಕೋವಿಡ್ ನಿಯಮ ಕಡ್ಡಾಯ.
* ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ಯಾನರ್ ಹಾಗೂ ಸ್ಯಾನಿಟೈಸರ್ ಕಡ್ಡಾಯವಾಗಿ ಇರಬೇಕು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications