ಪ್ರಥಮ ಹಾಗೂ ದ್ವಿತೀಯ ಪಿಯು ದಾಖಲಾತಿ ಅವಧಿ ವಿಸ್ತರಣೆ
ಬೆಂಗಳೂರು, ಸೆಪ್ಟೆಂಬರ್ 1: ಪದವಿ ಪೂರ್ವ ಶಿಕ್ಷಣ ಇಲಾಖೆಯು ಪ್ರಥಮ ಹಾಗೂ ದ್ವಿತೀಯ ಪಿಯು ಕಾಲೇಜುಗಳಲ್ಲಿ ದಾಖಲಾತಿ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಿದೆ.
ಈ ಹಿಂದೆ ಪ್ರಥಮ ಪಿಯು ದಾಖಲಾತಿಗೆ ಸೆಪ್ಟೆಂಬರ್ 1 ರವರೆಗೆ ಅವಕಾಶ ನೀಡಲಾಗಿತ್ತು. ಮತ್ತು ದ್ವಿತೀಯ ಪಿಯುಗೆ ಆ.30 ರವರೆಗೆ ಅವಕಾಶ ನೀಡಲಾಗಿತ್ತು. ಇದೀಗ ಪ್ರಥಮ ಮತ್ತು ದ್ವಿತೀಯ ಪಿಯುಸಿ ಕೋರ್ಸ್ಗಳಿಗೆ ಸೆಪ್ಟೆಂಬರ್ 11 ರವರೆಗೆ ದಂಡ ಶುಲ್ಕವಿಲ್ಲದೆ ಪ್ರವೇಶ ಪಡೆಯಬಹುದಾಗಿದೆ.
ಅದೇ ರೀತಿ 670 ರೂ. ದಂಡ ಶುಲ್ಕದೊಂದಿಗೆ ಪ್ರವೇಶ ಪಡೆಯಲು ಸೆ.13 ರಿಂದ 25 ರವರೆಗೆ, ಇನ್ನು 2890 ರೂ. ವಿಶೇಷ ದಂಡ ಶುಲ್ಕದೊಂದಿಗೆ ಸೆ.27 ರಿಂದ ಅ.5 ರವರೆಗೆ ಪ್ರಥಮ ಹಾಗೂ ದ್ವಿತೀಯ ಪಿಯುಸಿ ದಾಖಲಾತಿ ಪಡೆಯಬಹುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

2021- 22ನೇ ಸಾಲಿನ ಪ್ರಥಮ ಪಿಯು ಪ್ರವೇಶದಲ್ಲಿ ಹೆಚ್ಚುವರಿಯಾಗಿ 20 ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರತಿ ಕಾಲೇಜುಗಳಿಗೆ ಅನುಮತಿ ನೀಡಿದೆ.
ಪಿಯು ತರಗತಿ ಆರಂಭಕ್ಕೆ ಮಾರ್ಗಸೂಚಿ ಪ್ರಕಟ
ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿ ಆರಂಭಕ್ಕೆ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟ ಮಾಡಿದೆ. ಕಾಲೇಜು ಆರಂಭಿಸುವ ಕುರಿತು ಶಿಕ್ಷಣ ಇಲಾಖೆ ಮತ್ತು ಆರೋಗ್ಯ ಇಲಾಖೆಯಿಂದ ಕೆಲವು ಗೈಡ್ಲೈನ್ಸ್ ಬಿಡುಗಡೆ ಆಗಿದೆ.
ವಾರದ ಮೊದಲ 3 ದಿನ ಶೇಕಡಾ 50ರಷ್ಟು ವಿದ್ಯಾರ್ಥಿಗಳಿಗೆ ಕ್ಲಾಸ್ ಮಾಡಬೇಕು. ಶೇಕಡಾ 50ರಷ್ಟು ವಿದ್ಯಾರ್ಥಿಗಳು ಭೌತಿಕ ತರಗತಿಗಳಿಗೆ ಹಾಜರಾಗಬೇಕು.
ಪಿಯು ಕಾಲೇಜು ಆರಂಭಕ್ಕೆ ಸೂಚಿಸಿದ ಮಾರ್ಗಸೂಚಿಯ ಇತರೆ ಅಂಶಗಳು ಇಲ್ಲಿದೆ:
* ತರಗತಿಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ 100ಕ್ಕಿಂತ ಕಡಿಮೆ ಇರಬೇಕು.
* ವಿಶಾಲ ಕೊಠಡಿಗಳಿದ್ದರೆ ವಾರದ ಎಲ್ಲಾ ದಿನ ಭೌತಿಕ ತರಗತಿ ನಡೆಸಬಹುದು.
* ಕಾಲೇಜು ಆವರಣದಲ್ಲಿ ದೈಹಿಕ ಅಂತರ ಕಡ್ಡಾಯವಾಗಿರುತ್ತದೆ.
* ಪ್ರಾಂಶುಪಾಲರು, ಅಧ್ಯಾಪಕರು ಹಾಗೂ ಕಾಲೇಜು ಸಿಬ್ಬಂದಿ ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದಿರಬೇಕು.
* ವಿದ್ಯಾರ್ಥಿಗಳು ಕಾಲೇಜಿಗೆ ಬರಲು ಪೋಷಕರ ಒಪ್ಪಿಗೆ ಇರಬೇಕು.
* ತರಗತಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೊವಿಡ್- 19 ನೆಗೆಟಿವ್ ವರದಿ ಕಡ್ಡಾಯ.
* ಕಾಲೇಜಿನ ಉಪನ್ಯಾಸಕರು ಹಾಗೂ ಪ್ರಾಂಶುಪಾಲರು ವಿದ್ಯಾರ್ಥಿಗಳಿಂದ ಕೋವಿಡ್ ನಿಯಮಗಳ ಉಲ್ಲಂಘನೆಯಾಗದಂತೆ ಗಮನಿಸಬೇಕು.
* ಮಾಸ್ಕ್ ಹಾಗೂ ಸ್ಯಾನಿಟೈಸರ್ ಕಡ್ಡಾಯ ಬಳಕೆ .
* ಕೆಮ್ಮುವಾಗ, ಸೀನುವಾಗ ಕರವಸ್ತ್ರ ಬಳಸಬೇಕು, ಎಲ್ಲೆಂದರಲ್ಲಿ ಉಗುಳಬಾರದು.
* ಕಾಲೇಜು ಆರಂಭಕ್ಕೆ ಮುನ್ನ ಇಡೀ ಆವರಣ ಹಾಗೂ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಬೇಕು.
Recommended Video
* ಕೋವಿಡ್ ಸೋಂಕಿತರಿಗೆ ಬಳಸಿದ ಕಟ್ಟಡಗಳನ್ನು ಎರೆಡೆರಡು ಬಾರಿ ಸ್ಯಾನಿಟೈಸ್ ಮಾಡಬೇಕು.
* ಸಾಮೂಹಿಕ ಪ್ರಾರ್ಥನೆ, ಕ್ರೀಡೆ ಎಲ್ಲಾ ಚಟುವಟಿಕೆಗಳಿಗೆ ಕೋವಿಡ್ ನಿಯಮ ಕಡ್ಡಾಯ.
* ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ಯಾನರ್ ಹಾಗೂ ಸ್ಯಾನಿಟೈಸರ್ ಕಡ್ಡಾಯವಾಗಿ ಇರಬೇಕು.
-
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ನಿಮ್ಮ ಮನೆಯ ಸಮೀಪ ಸರ್ಕಾರಿ ಪಿಯು ಕಾಲೇಜು ಎಲ್ಲಿದೆ ಗೊತ್ತೇ? ಅವರಿವರನ್ನು ಕೇಳಿ ದಿಕ್ಕುತಪ್ಪಬೇಡಿ, ಇಲ್ಲಿದೆ ಮಾಹಿತಿ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ -
ದ್ವಿತೀಯ PUC ಪರೀಕ್ಷೆ-2: ನೋಂದಣಿ ಆರಂಭ, ಯಾರಿಗೆ ಶುಲ್ಕ ವಿನಾಯಿತಿ? ಇಲ್ಲಿದೆ ಮಾಹಿತಿ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್












Click it and Unblock the Notifications