ಆರ್ಟಿಇ : 1.58 ಲಕ್ಷ ಸೀಟಿಗೆ 2.28ಲಕ್ಷ ಅರ್ಜಿ ಸಲ್ಲಿಕೆ
ಬೆಂಗಳೂರು, ಮಾರ್ಚ್ 30: ಆರ್ಟಿಇ ಕಾಯ್ದೆಯಡಿ ರಾಜ್ಯಾದ್ಯಂತ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಈ ವರ್ಷ 1.58ಲಕ್ಷ ಮಕ್ಕಳಿಗೆ ಸೀಟು ನೀಡಲಾಗುತ್ತಿದೆ. ಅದಕ್ಕಾಗಿ ಈಗಾಗಲೇ ಎರಡೂವರೆ ಲಕ್ಷಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿವೆ.
2017-18ಕ್ಕೆ ಹೋಲಿಸಿದರೆ ಸರಿಸುಮಾರು 30ಸಾವಿರಗಳಷ್ಟು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಸೀಟುಗಳು ಅಧಿಕಗೊಂಡಿದ್ದು, ಬೇಡಿಕೆಗಳು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇದೆ.
ಆರ್ಟಿಇ ಕಾಯ್ದೆಯ ಅಡಿಯಲ್ಲಿ ರಾಜ್ಯದ ಪ್ರತಿಯೊಂದು ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರದಿಂದ ಪಡೆಯುವ ಅನುದಾನದ ಶೇ,20ರಷ್ಟು ಸೀಟುಗಳನ್ನು ಆರ್ಟಿಇ ಕಾಯ್ದೆಯಡಿ ಬಡ ಹಾಗೂ ಆರ್ಥಿಕವಾಗಿ ಹಿಂದುಳಿದ ಹಾಗೂ ಮೀಸಲಾತಿ ಅನುಸಾರ ಸೀಟುಗಳನ್ನು ನೀಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಕಳೆದ ವರ್ಷಕ್ಕಿಂತ ಈ ವರ್ಷ ಅರಿಸುಮಾರು 30ಸಾವಿರಗಳಷ್ಟು ಹೆಚ್ಚು ಸೀಟುಗಳು ಆರ್ಟಿಇ ಕಾಯ್ದೆಯಡಿ ಶಿಕ್ಷಣ ಸಂಸ್ಥೆಗಳು ನೀಡುತ್ತಿವೆ.

ರಾಜ್ಯ ಸರ್ಕಾರದ ನಿಯಮಾನುಸಾರ ಈಗಾಗಲೇ 1.58ಲಕ್ಷ ಸೀಟುಗಳನ್ನು ಆರ್ಟಿಇ ಅಡಿ ಖಾಸಗಿ ಶಿಕ್ಷಣ ಸಂಸ್ಥೆಗಳು ನೀಡುತ್ತಿದ್ದರೂ ಕೂಡ 2.28ಲಕ್ಷ ಅರ್ಜಿಗಳು ಬಂದಿರುವುದರಿಂದ ಶಿಕ್ಷಕರು ತಮ್ಮ ಮಕ್ಕಳಿಗೆ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಸೀಟುಗಳು ಸಿಗುತ್ತದೆಯೇ ಎಂಬುದರ ಬಗ್ಗೆ ಚಿಂತಿತರಾಗಿದ್ದಾರೆ.
ತಪ್ಪು ದಾಖಲೆ ನೀಡಿ ಆರ್ಟಿಇ ಸೀಟುಗಳನ್ನು ತಪ್ಪಿಸಿ ನೈಜ ಫಲಾನುಭವಿಗಳಿಗೆ ದೊರಕುವಂತೆ ಮಾಡಲು ಈ ಬಾರಿ ಶಿಕ್ಷಣ ಇಲಾಖೆಯು ಆಧಾರ್ ಕಾರ್ಡ್, ವಿದ್ಯಾರ್ಥಿ ಅಥವಾ ಪೋಷಕರ ಆಧಾರ್ ನಂಬರ್ ಜತೆಗೆ ಜಾತಿ ಹಾಗೂ ಆದಾಯವನ್ನು ತಾಳೆ ಮಾಡುತ್ತಿದ್ದು ಇದರಿಂದ ಆರ್ಟಿಇ ಸೀಟುಗಳಿಗೆ ನಕಲಿ ಅರ್ಜಿ ಸಲ್ಲಿಸುವವರನ್ನು ಶಿಕ್ಷಣ ಇಲಾಖೆ ರದ್ದುಗೊಳಿಸಲು ಸಾಧ್ಯವಾಗಿದೆ.
ಒಂದಕ್ಕಿಂತ ಹೆಚ್ಚು ಶಾಲೆಗಳಲ್ಲಿ ಅರ್ಜಿ ಸಲ್ಲಿಸಿದ ಹಾಗೂ ವಿದ್ಯಾರ್ಥಿಯು ವಾಸವಾಗಿರುವ ಪ್ರದೇಶದಿಂದ ಹೊರಗಿನ ಪ್ರದೇಶದ ಶಾಲೆಗೆ ಅರ್ಜಿ ಸಲ್ಲಿಸಿದಲ್ಲಿ ಆಧಾರ್ ನಂಬರ್ ಆಧರಿತವಾಗಿ ವಿದ್ಯಾರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುತ್ತಿದೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ












Click it and Unblock the Notifications