ಬೆಂಗಳೂರಿನ ಪ್ರಮುಖ ಯೋಜನೆಗೆ 2,410 ಎಕರೆ ಭೂಸ್ವಾಧೀನ: ಈ ಭಾಗದ ಆಸ್ತಿದಾರರಿಗೆ ಸಂಕಷ್ಟ!
ಬೆಂಗಳೂರಿನ ಪ್ರಮುಖ ಯೋಜನೆಯೊಂದಕ್ಕೆ ಬರೋಬ್ಬರಿ 2,410 ಎಕರೆ ಭೂಸ್ವಾಧೀನ ಮಾಡಿಕೊಳ್ಳುವುದಕ್ಕೆ ರಾಜ್ಯ ಸರ್ಕಾರವು ಮುಂದಾಗಿದೆ. ಆದರೆ ಈ ಯೋಜನೆಯು ಕಳೆದ ಎರಡು ದಶಕಗಳಿಂದ ಅಂದರೆ ಬರೋಬ್ಬರಿ 20 ವರ್ಷಗಳಿಂದ ನೆನೆಗುದಿಗೆ ಬಿದ್ದಿತ್ತು. ಸುಮಾರು 20 ವರ್ಷಗಳಿಂದ ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ಯೋಜನೆ (ಬಿಬಿಸಿ) ತಲೆನೋವಾಗಿತ್ತು. ಆದರೆ ಇದೀಗ ಭೂಸ್ವಾಧೀನ ಪ್ರಕ್ರಿಯೆಗಳು ಜೋರಾಗಿದೆ. ಆದರೆ, ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ನಿಗದಿ ಮಾಡಿರುವ ದರವು ತೀರ ಕಡಿಮೆ ಇದೆ ಎಂದು ಆಸ್ತಿದಾರರು ದೂರಿದ್ದಾರೆ.
ಬೆಂಗಳೂರಿನ ಪ್ರಮುಖ ಯೋಜನೆಗಳಲ್ಲಿ ಒಂದಾಗಿರುವ ಹಾಗೂ ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ಯೋಜನೆಗೆ ಸಂಬಂಧಿಸಿದಂತೆ ಗೊಂದಲಗಳು ಸದ್ಯಕ್ಕೆ ಮುಗಿಯುವ ಲಕ್ಷಣಗಳು ಕಾಣಿಸುತ್ತಿಲ್ಲ. ಇದೀಗ ಈ ಯೋಜನೆಗೆ ಭೂಮಿ ಬಿಟ್ವುದಕ್ಕೆ ಭೂಮಾಲೀಕರು ಹಿಂದೇಟು ಹಾಕುತ್ತಿದ್ದಾರೆ. ಈ ಯೋಜನೆಗೆ ಭೂಮಾಲೀಕರು ಮೊದಲಿನಿಂದಲೂ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಯೋಜನೆಯ 73 ಕಿ.ಮೀ ಉದ್ದದ ಯೋಜನೆಗೆ ಅಧಿಕೃತ ಅಧಿಸೂಚನೆ ನೀಡಿದೆ.

ಈ ಯೋಜನೆಯಲ್ಲಿ ಆಸ್ತಿದಾರರು ಆಸ್ತಿಯನ್ನು ಮಾರಾಟ ಮಾಡಲು, ಅಭಿವೃದ್ಧಿಪಡಿಸಲು ಅಥವಾ ವರ್ಗಾಯಿಸಲು ನಿರ್ಬಂಧಗಳನ್ನು ಎದುರಿಸುತ್ತಿದ್ದಾರೆ. ಇದು ಅವರ ಆರ್ಥಿಕ ಸಾಮರ್ಥ್ಯಕ್ಕೆ ಸಂಕಷ್ಟವನ್ನು ಸಹ ಎದುರಿಸುತ್ತಿದ್ದಾರೆ. ತಮ್ಮ ಭೂಮಿಯನ್ನು ಅಧಿಸೂಚನೆಗೆ ಒಳಪಡಿಸಿರುವುದರಿಂದ, ಮಾಲೀಕರು ತಮ್ಮ ಭೂಮಿಯನ್ನು ಅಭಿವೃದ್ಧಿಪಡಿಸಲು ಇರುವ ಎಲ್ಲಾ ಹಾಗೂ ಪ್ರಮುಖ ಅವಕಾಶಗಳನ್ನು ಕಳೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.
ಯೋಜನಾ ಪ್ರದೇಶದಲ್ಲಿ ಸುಮಾರು ಒಂದು ಎಕರೆ ಜಮೀನನ್ನು ಹೊಂದಿರುವ ಕಾಡುಗೋಡಿಯ ರೈತರು ನಮ್ಮ ಭೂಮಿಯನ್ನು ಅಧಿಸೂಚನೆ ಹೊರಡಿಸಿದಾಗಿನಿಂದ, 'ಪಹಣಿ' (ಭೂ ದಾಖಲೆ) ಅವರ ಹೆಸರಿನಲ್ಲಿ ಗುರುತಿಸಲಾಗಿದೆ. ಶಿಕ್ಷಣ ಅಥವಾ ಮದುವೆಯಂತಹ ಅಗತ್ಯಗಳಿಗಾಗಿ ನಾವು ಭೂಮಿಯನ್ನು / ಪ್ರಾಪರ್ಟಿಯನ್ನು ಮಾರಾಟ ಮಾಡಲು ಸಾಧ್ಯವಾಗುತ್ತಿಲ್ಲ. ಅಲ್ಲದೇ ಈ ಪ್ರಾಪರ್ಟಿಯನ್ನು ಯಾರಿಗೂ ವರ್ಗಾಯಿಸಲು ಸಹ ಸಾಧ್ಯವಿಲ್ಲ ಎಂದು ಹೇಳಿದ್ದಾರೆ ಎಂದು The New India Express ವರದಿ ಮಾಡಿದೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮಾರುಕಟ್ಟೆ ಮೌಲ್ಯದಲ್ಲಿ ಪರಿಹಾರವನ್ನು ನೀಡಬೇಕೆಂದು ಅಥವಾ ಕನಿಷ್ಠ ಮೆಟ್ರೋ ಭೂ ಸ್ವಾಧೀನಕ್ಕೆ ಪಾವತಿಸಿದ ದರಕ್ಕೆ ಹೊಂದಿಕೆಯಾಗುವಂತೆ ಮಾಡಬೇಕೆಂದು ಅವರು ಒತ್ತಾಯಿಸಿದ್ದಾರೆ. ಸರ್ಕಾರಿ ಸಬ್-ರಿಜಿಸ್ಟ್ರಾರ್ ಕಚೇರಿಯಲ್ಲಿ, ಕಳೆದ ವರ್ಷ ಈ ಪ್ರದೇಶದಲ್ಲಿ ಭೂಮಿಯ ಮಾರ್ಗಸೂಚಿ ಮೌಲ್ಯವು ತುಂಬಾ ಹೆಚ್ಚಾಗಿತ್ತು. ಆದರೆ ಈ ವರ್ಷ ಇದ್ದಕ್ಕಿದ್ದಂತೆ ಅದನ್ನು 2.25 ಕೋಟಿ ರೂ.ಗೆ ಇಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ವಿವಿಧ ಆಯ್ಕೆ: ಇನ್ನು ಬೆಂಗಳೂರಿನ ಅನುಷ್ಠಾನವಾಗುತ್ತಿರುವ ಪ್ರಮುಖ ಯೋಜನೆಯಾದ ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ಯೋಜನೆಗೆ ಸಂಬಂಧಿಸಿದಂತೆ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹಲವು ಆಯ್ಕೆಗಳನ್ನು ಕೊಡಲಾಗಿದೆ. ಆದರೆ ಇದರ ಹೊರತಾಗಿಯೂ ಆಸ್ತಿದಾರರು ಹಾಗೂ ಸರ್ಕಾರದ ನಡುವೆ ಸಂಘರ್ಷ ಮುಂದುವರಿದಿದೆ.
ಇನ್ನು ಒಟ್ಟಾರೆ ಈ ಯೋಜನೆಯಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರವು ಆಸ್ತಿದಾರರಿಗೆ 6 ಪ್ರಮುಖ ಆಯ್ಕೆಗಳನ್ನು ನೀಡಿದೆ.
-
GBA: ಆಸ್ತಿ ತೆರಿಗೆ ಬಾಕಿದಾರರಿಗೆ ಶಾಕ್: ಸ್ವತ್ತುಗಳನ್ನು ಪಾಲಿಕೆ ಹೆಸರಿಗೆ ವರ್ಗಾವಣೆ ಕ್ರಮ: ಜಿಬಿಎ -
Swachh Survey: ಬೆಂಗಳೂರು ಸ್ವಚ್ಛ ಸರ್ವೇಕ್ಷಣ 2025-26: 38 ಉದ್ಯಾನವನ, 11 ಮೈದಾನಗಳ ಸ್ವಚ್ಛತೆ: ರಾಜೇಂದ್ರ ಚೋಳನ್ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral












Click it and Unblock the Notifications