'ಗಣಿಗಾರಿಕೆಯಿಂದ ದೇಶದ ಜಿಡಿಪಿಗೆ ಶೇ 2.5 ರಷ್ಟು ಕೊಡುಗೆ'
ಬೆಂಗಳೂರು, ಡಿ. 03 : ವಾಣಿಜ್ಯ ಕಲ್ಲಿದ್ದಲು ಬ್ಲಾಕ್ ಗಳ ಹರಾಜು ಹಾಗೂ ಗಣಿಗಾರಿಕೆಯಲ್ಲಿ ಹೂಡಿಕೆ ಅವಕಾಶಗಳ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಹೂಡಿಕೆದಾರರ ಸಮಾವೇಶವನ್ನ ಕೇಂದ್ರ ಗಣಿ ಹಾಗೂ ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಉದ್ಘಾಟಿಸಿದರು.
ಹೂಡಿಕೆದಾರರನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ದೇಶದ ಜಿಡಿಪಿಗೆ ಗಣಿಗಾರಿಕೆಯಿಂದಲೇ ಶೇ 2.5 ರಷ್ಟು ಕೊಡುಗೆ ನೀಡಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಭಾರತದ ಆರ್ಥಿಕತೆ ವೇಗವಾಗಿ ಬೆಳೆಯುತ್ತಿರುವ ಸಂದರ್ಭದಲ್ಲಿ ಕಲ್ಲಿದ್ದಲು ಸೇರಿದಂತೆ ಗಣಿಗಾರಿಕೆಯಲ್ಲಿ ಹೂಡಿಕೆಗೆ ಸಾಕಷ್ಟು ಅವಕಾಶಗಳಿವೆ. 2047ರ ವೇಳೆಗೆ ಭಾರತ 30 ಟ್ರಿಲಿಯನ್ ಡಾಲರ್ ಆರ್ಥಿಕತೆಯ ದೇಶವಾಗಲಿದ್ದು, ಹೇರಳವಾದ ವಿದ್ಯುತ್ ಉತ್ಪಾದನೆ ಅಗತ್ಯವಾಗಿದೆ. ಸಹಜವಾಗಿ ಕಲ್ಲಿದ್ದಲು ಬೇಡಿಕೆ ಕೂಡ ಹೆಚ್ಚಲಿದ್ದು, ಹೂಡಿಕೆದಾರಿಗೆ ಕಲ್ಲಿದ್ದಲು ಕ್ಷೇತ್ರದಲ್ಲಿ ಉತ್ತಮ ಅವಕಾಶವಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅಭಿಪ್ರಾಯ ವ್ಯಕ್ತಪಡಿಸಿದರು.

ದೇಶದ ಇಂಧನ ಹಾಗೂ ಖನಿಜ ಸಂಪತ್ತಿನ ಸುರಕ್ಷತೆಯನ್ನು ಕಾಪಾಡಲು ನಮ್ಮಲ್ಲಿರುವ ಕಲ್ಲಿದ್ದಲು ಹಾಗೂ ಖನಿಜ ಸಂಪನ್ಮೂಲದ ಸುಸ್ಥಿರ ಉಪಯೋಗ ಅವಶ್ಯಕವಾಗಿದೆ. ಈ ದೃಷ್ಟಿಯಿಂದ ಈ ಕ್ಷೇತ್ರದಲ್ಲಿ ಹೂಡಿಕೆಯ ಅವಶ್ಯಕತೆ ಇದ್ದು, ಆಸಕ್ತ ಹೂಡಿಕೆದಾರರೊಂದಿಗೆ ನಾವು ನಿರಂತರ ಚರ್ಚೆಯಲ್ಲಿ ತೊಡಗುವ ಉದ್ದೇಶದಿಂದಲೇ ಈ ಹೂಡಿಕೆದಾರರ ಸಮಾವೇಶ ನಡೆಸುತ್ತಿದ್ದೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಇದೇ ವೇಳೆ ಹೇಳಿದರು.
ಪ್ರಸ್ತುತ ನಡೆಯುತ್ತಿರುವ ಕಲ್ಲಿದ್ದಲು ಹಾಗೂ ಖನಿಜಗಳ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಹೂಡಿಕೆದಾರರಿಗೆ ಮುಕ್ತ ಆಹ್ವಾನ ನೀಡಲಾಗಿದೆ. ಸದ್ಯ ರಾಜ್ಯದಲ್ಲಿ ಏಳು ಕಲ್ಲಿದ್ದಲು ಬ್ಲಾಕ್ ಗಳ ಹರಾಜು ಪ್ರಕ್ರಿಯೆ ನಡೆಯುತ್ತಿದೆ. ಆರನೇ ಕಂತಿನ 141 ಕಲ್ಲಿದ್ದಲು ಬ್ಲಾಕ್ ಗಳು ಕೂಡ ಹರಾಜಿಗೆ ಲಭ್ಯವಿವೆ ಎಂದು ಮಾಹಿತಿ ನೀಡಿದರು.
ಕಲ್ಲಿದ್ದಲು ಹೊರತುಪಡಿಸಿ ಬೇರೆ ಬೇರೆ ಗಣಿಗಾರಿಕೆಯ ಬಗ್ಗೆ ಚರ್ಚೆ ನಡೆಸುತ್ತಿದ್ದೇವೆ. ಮುಂಬರುವ ದಿನಗಳಲ್ಲಿ ಅತ್ಮನಿರ್ಭರ ಭಾರತದಲ್ಲಿ ಹೂಡಿಕೆಯಾಗಬೇಕು. ನಮ್ಮ ಮುಂದಿನ ಪೀಳಿಗೆಗೆ ತೊಂದರೆ ಆಗದ ಹಾಗೇ ಆರ್ಥಿಕವಾಗಿಯೋ ತೊಂದರೆ ಆಗದ ರೀತಿ ಕಲ್ಲಿದ್ದಲು ಬಳಿಕೆಯನ್ನ ಮಾಡಬೇಕಿದೆ. ಈಗಾಗಲೇ ಇಡಿ ದೇಶದಲ್ಲಿ 67 ಗಣಿ ಕಂಪನಿಗಳಿಗೆ ಹರಾಜು ಮಾಡಲಾಗಿದೆ. ಒಂದು ವರ್ಷದಲ್ಲಿ ಸಾಕಷ್ಟು ಬದಲಾವಣೆ ತಂದಿದ್ದೇವೆ ಎಂದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಹಾಲಪ್ಪ ಆಚಾರ್ ಸೇರಿದಂತೆ ಪ್ರಮುಖ ಗಣ್ಯರು, ಅಧಿಕಾರಿಗಳು ಹಾಗೂ ಅಪಾರ ಸಂಖ್ಯೆಯ ಹೂಡಿಕೆದಾರರು ಉಪಸ್ಥಿತರಿದ್ದರು.
-
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ











Click it and Unblock the Notifications