ರನ್ ವೇ ಬಿಟ್ಟು ವಿಮಾನ ಓಡಿಸಿ, ಮನೆಗೆ ಹೋದ ಪೈಲಟ್ಗಳು!
ಬೆಂಗಳೂರು, ಜನವರಿ 10: ವಿಮಾನವನ್ನು ಸರಿಯಾಗಿ ರನ್ವೇನಲ್ಲಿ ಇಳಿಸದೇ ಪಕ್ಕದ ಹುಲ್ಲು ಹಾಸಿನ ಮೇಲೆ ಓಡಿಸಿದ್ದಕ್ಕೆ 'ಗೋ ಏರ್' ವಿಮಾನದ ಇಬ್ಬರು ಪೈಲಟ್ಗಳನ್ನು ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ಕೆಲಸದಿಂದ ಅಮಾನತು ಮಾಡಿ, ಮನೆಗೆ ಕಳುಹಿಸಿದೆ.
ಕಳೆದ ವರ್ಷ ನವೆಂಬರ್ 11 ರಂದು ಬೆಂಗಳೂರು ಕೇಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದ್ದ ಘಟನೆಯನ್ನು ತನಿಖೆ ನಡೆಸಿ, ಡಿಜಿಸಿಎ ಗುರುವಾರ ಈ ಕ್ರಮ ಕೈಗೊಂಡಿದೆ. ನ 11 ರಂದು ನಾಗಪುರದಿಂದ ಬೆಂಗಳೂರಿಗೆ ಬರುತ್ತಿದ್ದ 'ಗೋ ಏರ್' ವಿಮಾನ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿತ್ತು. ಆದರೆ, ಮಂಜು ಮುಸುಕಿದ್ದ ಕಾರಣ ರನ್ವೇ ಬಿಟ್ಟಿ ವಿಮಾನವನ್ನು ಪೈಲಟ್ಗಳು ಪಕ್ಕದ ಹುಲ್ಲು ಹಾಸಿನ ಮೇಲೆ ಓಡಿಸಿದ್ದಾರೆ.
ವಿಮಾನ ಸರಿಯಾಗಿ ಲ್ಯಾಂಡ್ ಆಗಿಲ್ಲ ಎಂಬುದನ್ನು ಖಚಿತಪಡಿಸಿಕೊಂಡ ಪೈಲಟ್ಗಳು ವಿಮಾನವನ್ನು ಹೈದರಾಬಾದ್ನತ್ತ ತಿರುಗಿಸಿ ಅಲ್ಲಿನ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಿದ್ದರು. ಅಂದು ಆ ವಿಮಾನದಲ್ಲಿ 180 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಡಿಜಿಸಿಎ ಈ ಬಗ್ಗೆ ತನಿಖೆ ನಡೆಸಲು ಆದೇಶಿಸಿತ್ತು. ಪೈಲಟ್ಗಳು ಮಂಜು ಮುಸುಕಿದ ವಾತಾವರಣ ಇದ್ದಾಗ ಅನುಸರಿಸ ಬೇಕಾದ ಕ್ರಮಗಳನ್ನು ಬಿಟ್ಟು, ಮನಬಂದಂತೆ ವರ್ತಿಸಿದ್ದಾರೆ. ಹೀಗಾಗಿ ಅಮಾನತು ಮಾಡಲಾಗಿದೆ ಎಂದು ಡಿಜಿಸಿಎ ತಿಳಿಸಿದೆ.

ಪೈಲಟ್ ಹಾಗೂ ಕೋ ಪೈಲಟ್ನ್ನು ಘಟನೆ ನಡೆದ ದಿನದಿಂದ ಮುಂದಿನ ಆರು ತಿಂಗಳವರೆಗೆ ಅಮಾನತು ಮಾಡಲಾಗಿದೆ. ಈ ಹಿಂದೆ ಕೂಡ ಈ ಇಬ್ಬರೂ ಪೈಲಟ್ಗಳು ಅಮಾನತುಗೊಂಡಿದ್ದರು ಎಂಬುದು ತಿಳಿದು ಬಂದಿದೆ.
-
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು












Click it and Unblock the Notifications