ಬೆಂಗಳೂರು: ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು
ಬೆಂಗಳೂರು, ಜೂನ್ 23: ಡಿವೈಡರ್ ಗೆ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತರಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಯಂಟಗಾನಹಳ್ಳಿ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಹಾಸನ ಜಿಲ್ಲೆ, ಹೊಳೆನರಸಿಪುರ ನಿವಾಸಿಗಳಾದ ಶ್ರೀಧರ್(24) ಮತ್ತು ಪುನೀತ್ (22) ಎಂದು ಗುರುತಿಸಲಾಗಿದೆ.
ರಸ್ತೆ ಅಪಘಾತದಿಂದ ಹೆಚ್ಚುತ್ತಿರುವ ಸಾವು: ತಡೆಯೋದು ಹೇಗೆ?
ಕಾರು ವೇಗವಾಗಿ ಚಲಿಸುತ್ತಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಜೂನ್ 20 ರಂದು ಗೋವಾದಿಂದ ತಮಿಳುನಾಡಿಗೆ ತೆರಳುತ್ತಿದ್ದ ಐವರು ಚಿತ್ರದುರ್ಗದ ಹಿರಿಯೂರು ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವಿಗೀಡಾಗಿದ್ದರು.
ಗುಜರಾತ್ ನಲ್ಲಿ ಅಪಘಾತ: 7 ಜನ ಸಾವು
ಇಂದು
ಬೆಳಿಗ್ಗೆ
ಗುಜರಾತಿನ
ಭಾವ್ನಗರ-ಸೋಮನಾಥ್
ಹೆದ್ದಾರಿಯಲ್ಲಿ
ನಡೆದ
ಅಪಘಾತದಲ್ಲಿ
7
ಜನ
ಮೃತರಾಗಿದ್ದು,
24
ಜನ
ಗಂಭೀರವಾಗಿ
ಗಾಯಗೊಂಡಿದ್ದಾರೆ.
ಉತ್ತರ ಪ್ರದೇಶದ ಉನ್ನಾವೋನಲ್ಲಿ ನಿನ್ನೆ ರಾತ್ರಿ ನಡೆದ ಭೀಕರ ಅಪಘಾತದಲ್ಲಿ 5 ಜನ ಮೃತರಾಗಿದ್ದರಲ್ಲದೆ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ದಿನೇ ದಿನೇ ದೇಶದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳು ಆತಂಕ ಸೃಷ್ಟಿಸಿದೆ.