ಬೆಂಗಳೂರಿಗರೇ ಎಚ್ಚರ, ಎಲ್ಲೆಡೆಯೂ ಹಬ್ಬುತ್ತಿದೆ ಟೈಫಾಯಿಡ್ ಜ್ವರ
Recommended Video

ಬೆಂಗಳೂರು, ಆಗಸ್ಟ್ 30: ಕಳೆದ ಕೆಲ ವಾರ ಕರ್ನಾಟಕ ರಾಜ್ಯದಾದ್ಯಂತ ಒಳ್ಳೆ ಮಳೆಯಾಗಿದೆ. ನೀರಿನ ಸಮಸ್ಯೆ ಸ್ವಲ್ಪ ಮಟ್ಟಿಗೆ ಕಡಿಮೆ ಆದಂತಿದೆ ಎಂದು ನಿಟ್ಟುಸಿರು ಬಿಡುವಂತಾಗಿದೆ. ಆದರೆ ಇದರ ಜತೆಗೆ ಬೆಂಗಳೂರಿನಲ್ಲಿ ಟೈಫಾಯಿಡ್ ಜ್ವರದ ಪ್ರಕರಣಗಳು ಹೆಚ್ಚಾಗಿವೆ.
ಕಳೆದ ಒಂದು ವಾರದಲ್ಲೇ ಬಿಬಿಎಂಪಿ ಇನ್ನೂರು ಟೈಫಾಯಿಡ್ ಪ್ರಕರಣಗಳನ್ನು ದಾಖಲಿಸಿದೆ. ಆದರೆ ಬೆಂಗಳೂರಿನ ಅಧಿಕಾರಿಗಳು ಇಂಥ ಅನಾರೋಗ್ಯದ ಸುದ್ದಿಯನ್ನು ನಿರಾಕರಿಸುತ್ತಾರೆ.
ಟೈಫಾಯಿಡ್ ಜ್ವರ ತುಂಬ ಹೆಚ್ಚಾಗಿದೆ ಅನ್ನೋದನ್ನು ನಾವು ಒಪ್ಪಲ್ಲ. ಆದರೆ ಕಳೆದ ಒಂದು ವಾರದಿಂದ ಮಾಮೂಲಿಗಿಂತ ಹೆಚ್ಚಿನ ಮಂದಿ ಜ್ವರದ ಕಾರಣದಿಂದ ಬರುತ್ತಿದ್ದಾರೆ ಎಂದು ಬಿಬಿಎಂಪಿಯ ಮುಖ್ಯ ವೈದ್ಯಾಧಿಕಾರಿ ಎಂ.ಎನ್.ಲೋಕೇಶ್ ತಿಳಿಸಿದ್ದಾರೆ.

ಆದರೆ, ಖಾಸಗಿ ವೈದ್ಯರ ಅಭಿಪ್ರಾಯವೇ ಬೇರೆ ಆಗಿದೆ. "ಈ ವರ್ಷ ಟೈಫಾಯಿಡ್ ಪ್ರಕರಣಗಳು ವಿಪರೀತ ಹೆಚ್ಚಾಗಿ ಬಂದಿವೆ. ಅದರಲ್ಲೂ ಶ್ರಮಿಕ ವರ್ಗ ವಾಸಿಸುವ ಪ್ರದೇಶದಲ್ಲಿ ಹೆಚ್ಚಾಗಿದೆ. ಪ್ರತಿ ದಿನ ಹತ್ತು ಪ್ರಕರಣಗಳು ಬರುತ್ತಿವೆ. ಟೈಪಾಯಿಡ್ ಬ್ಯಾಕ್ಟಿರೀಯಾದಿಂದ ಬರುವ ಜ್ವರ. ನೀರು ಹಾಗೂ ಆಹಾರದ ಮೇಲೆ ಜಮೆಯಾಗುವ ಬ್ಯಾಕ್ಟೀರಿಯಾ ಮನುಷ್ಯರ ಮೂಲಕ ಹಬ್ಬುತ್ತದೆ" ಎನ್ನುತ್ತಾರೆ ವೈದ್ಯರು.
ಚರಂಡಿ ನೀರಿನ ಜತೆಗೆ ಕುಡಿಯುವ ನೀರು ಬೆರೆತ ಕಾರಣಕ್ಕೆ ಹೀಗೆ ಆಗಿದೆ ಎಂಬ ಸಂಗತಿಯನ್ನು ಬಿಬಿಎಂಪಿ ಅಧಿಕಾರಿಗಳೇ ಒಪ್ಪಿರುವುದಾಗಿ ವರದಿಯಾಗಿದೆ.
"ನಮ್ಮ ಆರೋಗ್ಯಾಧಿಕಾರಿಗಳನ್ನು ಕಳುಹಿಸಿ ಜಾಗೃತಿ ಮೂಡಿಸುತ್ತಿದ್ದೇವೆ. ಬಿಸಿ ನೀರನ್ನೇ ಕುಡಿಯುವಂತೆ ಸಲಹೆ ನೀಡುತ್ತಿದ್ದೇವೆ. ಅದರಲ್ಲೂ ಅಪಾರ್ಟ್ ಮೆಂಟ್ ಗಳಲ್ಲಿ ವಾಸವಿರುವವರಿಗೆ ಎಲ್ಲಿಂದ ಕುಡಿಯುವ ನೀರು ಬರುತ್ತಿದೆ ಎಂಬುದು ಕೂಡ ಗೊತ್ತಿರುವುದಿಲ್ಲ. ಎಲ್ಲಿ ಜ್ವರದ ಪ್ರಕರಣ ಹೆಚ್ಚಾಗಿ ವರದಿ ಆಗುತ್ತಿದೆಯೋ ಅಂಥ ಪ್ರದೇಶಗಳ ಮೇಲೆ ನಿಗಾ ಇಟ್ಟಿದ್ದೇವೆ" ಎಂದು ಆರೋಗ್ಯಾಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಳೆ ಬರುತ್ತಿರುವುದರಿಂದಲೂ ಸಾಮಾನ್ಯ ನೆಗಡಿಯಂಥದ್ದರ ಜತೆಗೆ ಡೆಂಗ್ಯೂ ಮತ್ತು ಹಂದಿ ಜ್ವರ ಕೂಡ ಕಾಣಿಸಿಕೊಳ್ಳುತ್ತಿದೆ.
-
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್












Click it and Unblock the Notifications