2000ರ ಚರ್ಚ್ ಬ್ಲಾಸ್ಟ್ ಆರೋಪಿ ಅಮೀರ್ ಅಲಿ ಬಂಧನ
ಬೆಂಗಳೂರು, ಆಗಸ್ಟ್ 09: 2000ನೇ ಇಸ್ವಿಯಲ್ಲಿ ಬೆಂಗಳೂರಿನ ಎರಡು ಚರ್ಚ್ ಸೇರಿದಂತೆ ರಾಜ್ಯದ ವಿವಿಧೆಡೆ ಚರ್ಚ್ ಮೇಲೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿರುವ ಶೇಖ್ ಅಮೀರ್ ಅಲಿಯನ್ನು ಬಂಧಿಸಲಾಗಿದೆ.
ತೆಲಂಗಾಣದ ನಲ್ಗೊಂಡ ಮೂಲದ ದೀನ್ ದಾರ್ ಅಂಜುಮಾನ್ ಸಂಘಟನೆಯ ಶೇಖ್ ಅಮೀರ್ ಅಲಿ ವಿರುದ್ಧ ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯದಿಂದ ಬಂಧನ ವಾರೆಂಟ್ ಹೊರಡಿಸಲಾಗಿತ್ತು. ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ ಸೇರಿದಂತೆ ರಾಜ್ಯದ ಅನೇಕ ಕಡೆಗಳಲ್ಲಿ ಚರ್ಚ್ ಮೇಲೆ ದಾಳಿ, ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೀರ್ ಅಲಿ ಆರೋಪಿಯಾಗಿದ್ದು, 16 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ.[ಮಲ್ಲೇಶ್ವರಂ ಸ್ಫೋಟ ಪ್ರಕರಣದ ಮುಖ್ಯ ಆರೋಪಿ ಡೇನಿಯಲ್ ಬಂಧನ]
ಚರ್ಚ್ ಗಳ ಮೇಲೆ ನಡೆದ ಬಾಂಬ್ ದಾಳಿಗಳಿಗೆ ಸಂಬಂಧಿಸಿದಂತೆ 11 ಆರೋಪಿಗಳಿಗೆ ವಿಶೇಷ ನ್ಯಾಯಾಲಯ ಮರಣದಂಡನೆ ವಿಧಿಸಿದೆ ಮತ್ತು 12 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ನಗರದ ಹೊರವಲಯದಲ್ಲಿರುವ ಪರಪ್ಪನ ಅಗ್ರಹಾರದಲ್ಲಿ ಸೆರೆಯಲ್ಲಿಡಲಾಗಿದೆ. ಮೂವರು ಆರೋಪಿಗಳು ಸಾವನ್ನಪ್ಪಿದ್ದಾರೆ, ಏಳು ಜನ ತಪ್ಪಿಸಿಕೊಂಡಿದ್ದರು ಈ ಪೈಕಿ ಅಮೀರ್ ಅಲಿ ಬಂಧನವಾಗಿದೆ.ಇಬ್ಬರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.[ಮಲ್ಲೇಶ್ವರಂ ಸ್ಫೋಟ : 2 ಸಾವಿರ ರೂ.ಗೆ ಸ್ಫೋಟಕ ಮಾರಾಟ]
ಬೆಂಗಳೂರಿನ ಜೆಜೆ ನಗರದ ಸೈಂಟ್ ಪೀಟರ್ಸ್ ಹಾಗೂ ಸೈಂಟ್ ಪಾಲ್ ಚರ್ಚ್, ಗುಲಬರ್ಗಾ ಜಿಲ್ಲೆಯ ವಾಡಿ, ಹುಬ್ಬಳ್ಳಿಯ ಕೇಶ್ವಾಪುರ, ಬೆಂಗಳೂರಿನ ಜೆಜೆ ನಗರದ ಚರ್ಚ್ ಗಳಲ್ಲಿ ನಡೆಸಲಾದ ಬಾಂಬ್ ಸ್ಫೋಟಗಳು ಮತ್ತು ವ್ಯಾನ್ ಸ್ಫೋಟಕ್ಕೆ ಸಂಬಂಧಿಸಿದಂತೆ ನಾಲ್ಕು ಪ್ರಕರಣಗಳು ದಾಖಲಾಗಿತ್ತು.
#BREAKING Karnataka Church blasts - Deendar Anjuman operative arrested after 16 years @OneindiaKannada @vickynanjappa
— Shama Sundara S K (@shamsundar_sk) August 9, 2016
ಮರಣದಂಡನೆಗೆ ಒಳಗಾದವರು : ಮೊಹಮ್ಮದ್ ಇಬ್ರಾಹಿಂ, ಶೇಖ್ ಹಷಮ್ ಅಲಿ, ಹಸನುಜಮಾ, ಅಬ್ದುಲ್ ರೆಹಮಾನ್ ಶೇಠ್, ಅಮಾನತ್ ಹುಸೇನ್ ಮುಲ್ಲಾ, ಮೊಹಮ್ಮದ್ ಶರ್ಫುದ್ದಿನ್, ಸೈಯದ್ ಮುನೀರುದ್ದಿನ್ ಮುಲ್ಲಾ, ಮೊಹಮ್ಮದ್ ಅಖಿಲ್ ಅಹ್ಮದ್, ಇಜಾಹರ್ ಬೇಗ್, ಸೈಯದ್ ಅಬ್ಬಾಸ್ ಅಲಿ ಮತ್ತು ಮೊಹಮ್ಮದ್ ಖಾಲಿದ್ ಚೌಧರಿ.
ಜೀವಾವಧಿ ಶಿಕ್ಷೆಗೆ ಗುರಿಯಾದವರು : ಮೊಹಮ್ಮದ್ ಫರೂಕ್ ಅಲಿ, ಮೊಹಮ್ಮದ್ ಸಿದ್ದಿಕಿ, ಅಬ್ದುಲ್ ಹಬೀಬ್, ಶಂಶುಜಮ್ಮಾ, ಶೇಖ್ ಫರ್ದಿನ್ ವಲಿ, ಸೈಯದ್ ಅಬ್ದುಲ್ ಖಾದರ್ ಜಿಲಾನಿ, ಮೊಹಮ್ಮದ್ ಗಿಯಾಸುದ್ದಿನ್, ಮೀರಾಸಾಬ್ ಕೌಜಲಗಿ, ರಿಷ್ ಹಿರೇಮಠ್, ಬಶೀರ್ ಅಹ್ಮದ್, ಮೊಹಮ್ಮದ್ ಹುಸೇನ್ ಮತ್ತು ಸಾಂಗಲಿ ಬಾಷಾ.
ತಪ್ಪಿಸಿಕೊಂಡವರು : ಜಿಯಾ-ಉಲ್-ಹಸನ್, ಸೈಯದ್ ಖಾಲಿದ್ ಪಾಷಾ, ಜಾಹೇದ್ ಉಲ್ ಹಸನ್, ಶಬಿ ಉಲ್ ಹಸನ್, ಖಾಲೀದ್ ಪಾಷಾ, ಶೇಖ್ ಅಮೀರ್ ಮತ್ತು ಸೈಯದ್ ವಹಾಬ್.
ಖುಲಾಸೆ ಆದವರು : ಮೊಹಮ್ಮದ್ ರಿಯಾಜುದ್ದಿನ್, ಮೊಹಮ್ಮದ್ ಜಾಫರ್, ಇಸ್ಮಾಯಿಲ್ ಅಕ್ಕಿ, ಅಮೀರ್ ಹಂಜಾ.
(ಒನ್ಇಂಡಿಯಾ ಸುದ್ದಿ)
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್












Click it and Unblock the Notifications