ಬೆಂಗಳೂರು ಸ್ಫೋಟ : ಮದನಿ ವಿರುದ್ಧ ಉಲ್ಟಾ ಹೊಡೆದ ಸಾಕ್ಷಿಗಳು
ಬೆಂಗಳೂರು, ಸೆ. 16 : 2008ರ ಬೆಂಗಳೂರು ಸರಣಿ ಬಾಂಬ್ ಸ್ಫೋಟದ ತನಿಖೆಗೆ ಮತ್ತೆ ಹಿನ್ನಡೆ ಉಂಟಾಗಿದೆ. ಸ್ಫೋಟದ ರೂವಾರಿ ಎಂದು ಆರೋಪಿಸಲಾಗಿರುವ ಅಬ್ದುಲ್ ನಾಸೀರ್ ಮದನಿ ವಿರುದ್ಧ ನೀಡಿರುವ ಹೇಳಿಕೆಯನ್ನು ಹಿಂಪಡೆಯುವುದಾಗಿ ಎರಡನೇ ಸಾಕ್ಷಿ ಕೋರ್ಟ್ ಮುಂದೆ ಹೇಳಿಕೆ ನೀಡಿದ್ದಾನೆ.
ಸ್ಫೋಟದ ಸಂಚನ್ನು ಮದನಿ ರೂಪಿಸಿದ್ದಾನೆ ಎಂದು ಆರೋಪಿಸಲಾಗಿದ್ದು ಈ ಕುರಿತ ವಿಚಾರಣೆ ನಡೆಯುತ್ತಿದೆ. ಈ ಪ್ರಕರಣದಲ್ಲಿ ಜೋಸ್ ವರ್ಗೀಸ್ ಮೊದಲನೇ ಸಾಕ್ಷಿಯಾಗಿದ್ದ. ಪೊಲೀಸರ ಮುಂದೆ ಹೇಳಿಕೆ ನೀಡಿದ್ದ ಈತ ಕೋರ್ಟ್ಗೆ ಹೋದಾಗ ಹೇಳಿಕೆ ಹಿಂಪಡೆಯುವುದಾಗಿ ತಿಳಿಸಿದ್ದ. [ಬೆಂಗಳೂರು ಸರಣಿ ಸ್ಫೋಟ ಎಲ್ಲಿ, ಯಾವಾಗ?]
ಸದ್ಯ, ಪ್ರಕರಣದಲ್ಲಿ ಎರಡನೇ ಸಾಕ್ಷಿಯಾಗಿರುವ ರಫೀಕ್ ಸಹ ಪೊಲೀಸರು ಸಾಕ್ಷಿ ಹೇಳುವಂತೆ ಒತ್ತಾಯಿಸಿದರು. ನಾನು ಹೇಳಿಕೆಯನ್ನು ಹಿಂಪಡೆಯುತ್ತೇನೆ. ಕೋರ್ಟ್ನಲ್ಲೇ ಮೊದಲ ಬಾರಿ ನಾನು ಮದನಿಯನ್ನು ನೋಡುತ್ತಿರುವುದು ಎಂದು ಹೇಳಿಕೆ ನೀಡಿದ್ದು, ತನಿಖೆಗೆ ಹಿನ್ನೆಡೆ ಉಂಟು ಮಾಡಿದೆ.[ಬೆಂಗಳೂರು ಸ್ಫೋಟ : ಮದನಿಗೆ ಜಾಮೀನು]

ಕೋರ್ಟ್ನಲ್ಲಿ ಉಲ್ಪಾ ಹೊಡೆದ ಜೋಸ್ : ಬೆಂಗಳೂರು ಸರಣಿ ಸ್ಫೋಟದ ಸಂಚನ್ನು ಕೇರಳದ ಕೊಟ್ಟಾಯಂನಲ್ಲಿ ರೂಪಿಸಲಾಗಿತ್ತು ಎಂಬುದು ಆರೋಪ. ಸಂಚು ರೂಪಿಸಿದ ಮನೆ ಜೋಸ್ ವರ್ಗೀಸ್ಗೆ ಸೇರಿದ್ದು, ಆದ್ದರಿಂದ ಆತನನ್ನು ಪ್ರಮುಖ ಸಾಕ್ಷಿ ಎಂದು ಪೊಲೀಸರು ಪರಿಗಣಿಸಿದ್ದರು. [ಜಾಮೀನು ಪಡೆದರೂ ಮದನಿ ಕೇರಳಕ್ಕೆ ಹೋಗುವಂತಿಲ್ಲ]
ಪೊಲೀಸರ ಮುಂದೆ ನಾನು ಮದನಿಯನ್ನು ಭೇಟಿ ಮಾಡಿದ್ದೆ ಎಂದು ಜೋಸ್ ಒಪ್ಪಿಕೊಂಡಿದ್ದ. ಆದರೆ, ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ಬಂದಾಗ ಆತ ತನ್ನ ಹೇಳಿಕೆಯನ್ನು ಹಿಂಪಡೆಯುವುದಾಗಿ ಹೇಳಿಕೆ ನೀಡಿ ತನಿಖೆಗೆ ಹಿನ್ನಡೆ ಉಂಟು ಮಾಡಿದ್ದ.
ಮದನಿ ಪರ ವಕೀಲರು ಪೊಲೀಸರು ಹೇಳಿರುವ ದಿನ ಮದನಿ ಕೊಟ್ಟಾಯಂನಲ್ಲಿ ವಾಸ್ತವ್ಯ ಹೂಡಿರಲಿಲ್ಲ ಎಂದು ದಾಖಲೆಗಳನ್ನು ಸಲ್ಲಿಸಿದರು. ಜೋಸ್ನನ್ನು ಕೋರ್ಟ್ನಲ್ಲಿ ಮತ್ತೆ ಪ್ರಶ್ನಿಸಿದಾಗ ಆತ ಪೊಲೀಸರ ಒತ್ತಡದಿಂದ ಹೇಳಿಕೆ ನೀಡಿದ್ದೆ ಎಂದು ಹೇಳಿದ್ದ.
ಮದನಿಯನ್ನು ಮೊದಲ ಬಾರಿ ನೋಡುತ್ತಿದ್ದೇನೆ : ಈ ಪ್ರಕರಣದಲ್ಲಿ ಸೋಮವಾರ ಪೇಟೆ ಮೂಲದ ರಫೀಕ್ ಎರಡನೇ ಸಾಕ್ಷಿಯಾಗಿದ್ದ. ಪೊಲೀಸರ ವಿಚಾರಣೆ ಸಂದರ್ಭದಲ್ಲಿ ಮದನಿ ಹಲವು ಬಾರಿ ಸೋಮವಾರ ಪೇಟೆಗೆ ಭೇಟಿ ನೀಡಿದ್ದ. ಅವನೊಂದಿಗೆ ಹಲವು ಜನರು ಆಗಮಿಸುತ್ತಿದ್ದರು ಎಂದು ಹೇಳಿದ್ದ.
ಆದರೆ, ಕೋರ್ಟ್ ಮುಂದೆ ಬಂದಾಗ ರಫೀಕ್ ಹೇಳಿಕೆ ಬದಲಾಯಿಸಿದ್ದಾನೆ. ಮದನಿಯನ್ನು ಇದೇ ಮೊದಲ ಬಾರಿಗೆ ನಾನು ನೋಡುತ್ತಿದ್ದೇನೆ. ಮದನಿ ವಿರುದ್ಧ ಹೇಳಿಕೆ ನೀಡುವಂತೆ ಪೊಲೀಸರು ಒತ್ತಾಯಿಸಿದರು. ಒತ್ತಾಯ ಪೂರ್ವಕವಾಗಿ ಹೇಳಿಕೆಗಳಿಗೆ ಸಹಿ ಮಾಡಿಸಿಕೊಂಡರು ಎಂದು ಹೇಳಿಕೆ ನೀಡಿದ್ದಾನೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications