ಕುಂ. ವೀರಭದ್ರಪ್ಪ ಅವರಿಗೆ ನೃಪತುಂಗ ಪ್ರಶಸ್ತಿ
ಬೆಂಗಳೂರು, ನ. 15 : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಜಂಟಿಯಾಗಿ ನೀಡುವ ನೃಪತುಂಗ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. 2014ನೇ ಪ್ರಶಸ್ತಿಗೆ ಸಾಹಿತಿ ಕುಂ. ವೀರಭದ್ರಪ್ಪ ಅವರನ್ನು ಆಯ್ಕೆ ಮಾಡಲಾಗಿದ್ದು, ಡಿಸೆಂಬರ್ 12ರಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುಂಡಲೀಕ ಹಾಲಂಬಿ ಅವರು 2014ನೇ ಸಾಲಿನ 'ನೃಪತುಂಗ' ಪ್ರಶಸ್ತಿಗೆ ಕುಂ. ವೀರಭದ್ರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಶುಕ್ರವಾರ ಪ್ರಕಟಿಸಿದ್ದಾರೆ.. ಪ್ರಶಸ್ತಿಯು ರೂ. 7,00,001 ನಗದು ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ.

ಕನ್ನಡ ಸಾಹಿತ್ಯಕ್ಕೆ ನೀಡುವ ಕೊಡುಗೆ ಪರಿಗಣಿಸಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಮತ್ತು ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಜಂಟಿಯಾಗಿ ಈ ಪ್ರಶಸ್ತಿ ನೀಡುತ್ತವೆ. ಈ ಪ್ರಶಸ್ತಿಯನ್ನು ಯಾವುದೇ ಕೃತಿಗೆ ನೀಡಲಾಗುವುದಿಲ್ಲ. ಡಿಸೆಂಬರ್ 12ರಂದು ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. [ಜ್ಞಾನಪೀಠ ಪ್ರಶಸ್ತಿಗೆ ಅನಂತಮೂರ್ತಿ, ಕಾರ್ನಾಡ್ ಅರ್ಹರಲ್ಲ]
17, 18ರಂದು ವಿಚಾರ ಸಂಕಿರಣ : ನೃಪತುಂಗ ಪ್ರಶಸ್ತಿ ಪಡೆದವರ ಬದುಕು-ಬರಹ ಕುರಿತು ಡಿ. 17-18ರಂದು ಬೆಂಗಳೂರಿನಲ್ಲಿ ವಿಚಾರ ಸಂಕಿರಣ ನಡೆಯಲಿದೆ ಎಂದು ಪುಂಡಲೀಕ ಹಾಲಂಬಿ ಅವರು ಹೇಳಿದ್ದಾರೆ.
ಶ್ರೀ ವಿಜಯ ಸಾಹಿತ್ಯ ಪ್ರಶಸ್ತಿ ಪ್ರಕಟ : ಡಾ. ಕವಿತಾ ರೈ ಅವರಿಗೆ 2014ನೇ ಸಾಲಿನ ಶ್ರೀ ವಿಜಯ ಸಾಹಿತ್ಯ ಪ್ರಶಸ್ತಿಯನ್ನು ನೀಡಲಾಗುತ್ತದೆ ಎಂದು ಪುಂಡಲೀಕ ಹಾಲಂಬಿ ಅವರು ಹೇಳಿದ್ದಾರೆ. ನ. 26ರಂದು ಸಾಹಿತ್ಯ ಪರಿಷತ್ತಿಗೆ ಸಭಾಂಗಣ ಪ್ರಶಸ್ತ ಪ್ರದಾನ ಮಾಡಲಿದ್ದು, ಇದು ರೂ. 1,11,111 ನಗದು ಮತ್ತು ಸ್ಮರಣಿಕೆಯನ್ನಯ ಒಳಗೊಂಡಿದೆ.
-
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್ -
Kannada Books: ಓದುಗರಷ್ಟು ಪ್ರಾಮಾಣಿಕತೆ ಪುಸ್ತಕ ಮಳಿಗೆ ಮಾಡಿರುವವರಿಗಿಲ್ಲ: ರಾಜೇಂದ್ರ ಪ್ರಸಾದ್ ಬರಹ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
BMTC: ಉಚಿತ ಬಸ್ ಪ್ರಯಾಣದ ಹೊರೆ, ಆರ್ಥಿಕ ಸಂಕಷ್ಟದಲ್ಲಿ ಬಿಎಂಟಿಸಿ; ಸರ್ಕಾರದಿಂದ ₹850 ಕೋಟಿ ಪಾವತಿ ವಿಳಂಬ -
Amulya: ಕಿರುತೆರೆಗೆ ಮರಳಿದ 'ಕಮಲಿ' ಖ್ಯಾತಿಯ ಅಮೂಲ್ಯ: 'ಮಹಾಲಕ್ಷ್ಮಿ ಮದುವೆ' ಮೂಲಕ ಹೊಸ ಪಯಣ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್












Click it and Unblock the Notifications