Bengaluru Bus Fire: ಬೆಂಗಳೂರಲ್ಲಿ ಮತ್ತೊಂದು ಬೆಂಕಿ ಅವಘಡ, 21 ಬಸ್ ಭಸ್ಮ
Bengaluru Bus Fire: ಬೆಂಗಳೂರು, ಅಕ್ಟೋಬರ್ 30: ಬೆಂಗಳೂರು ಸೋಮವಾರ ಮತ್ತೊಂದು ಬೃಹತ್ ಬೆಂಕಿ ಅವಘಡಕ್ಕೆ ಸಾಕ್ಷಿಯಾಗಿದೆ. ಪಬ್, ಪಟಾಕಿ ಗೋದಾಮಿನಲ್ಲಿ ಬೆಂಕಿ ದುರಂತ ಬೆನ್ನಲ್ಲೆ ಇದೀಗ ಬಸ್ಗಳಿಗೆ ಬೆಂಕಿ ಬಿದ್ದಿದೆ. ಒಟ್ಟು 21 ಖಾಸಗಿ ಬಸ್ಗಳು ಬೆಂಕಿಗೆ ಆಹುತಿ ಆಗಿವೆ.
ಬೆಂಗಳೂರಿನ ವೀರಭದ್ರ ನಗರದಲ್ಲಿ ಖಾಸಗಿ ಬಸ್ಗಳನ್ನು ನಿಲ್ಲಿಸಲಾಗಿದೆ. ಈ ಬಸ್ಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಪಕ್ಕದಲ್ಲಿಯೇ ಶೆಡ್ ಗಳಿದ್ದು, ಗ್ಯಾರೇಜ್ನಲ್ಲಿ ಉಂಟಾದ ಶಾರ್ಟ್ ಸರ್ಕೀಟ್ನಿಂದ ಬೆಂಕಿ ಮೊದಲು ಒಂದು ಬಸ್ಗೆ ಹೊತ್ತಿಕೊಂಡಿದೆ. ನಂತರ ಎರಡು ಬಸ್ಗಳಿಗೆ ಬೆಂಕಿ ತಗುಲಿದೆ. ಹೀಗೆ ಕೆಲವೇ ಕ್ಷಣಗಳಲ್ಲಿ ಬೆಂಕಿ ಜ್ವಾಲೆ ಹತ್ತಕ್ಕೂ ಹೆಚ್ಚು ಬಸ್ಗಳಿಗೆ ಚಾಚಿಕೊಂಡಿತು.

ನೋಡು ನೋಡುತ್ತಿದ್ದಂತೆ ಆಗಸದೆತ್ತರಕ್ಕೆ ಬೆಂಕಿಯ ಕೆನ್ನಾಲಿಗೆ ಚಾಚಿಕೊಂಡಿತು. ಸ್ಥಳದಲ್ಲೆಲ್ಲ ದಟ್ಟ ಹೊಗೆ ಆವರಿಸಿಕೊಂಡಿದೆ. ಸ್ಥಳೀಯರು ಹತ್ತಿರದ ಪೊಲೀಸ್ ಠಾಣೆ ಮತ್ತು ಬಿಬಿಎಂಪಿಗೆ ಮಾಹಿತಿ ತಿಳಿಸಲಾಗಿದೆ. ಸದ್ಯ ಸ್ಥಳಕ್ಕೆ ಎರಡು ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿದ್ದಾರೆ. ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಸುತ್ತಮುತ್ತಲಿನ ಜನರಲ್ಲಿ ಆತಂಕ ಮನೆ ಮಾಡಿದೆ.
ಈ ಗ್ಯಾರೇಜ್ ನಲ್ಲಿ 40 ಮಂದಿ ಕೆಲಸ ಮಾಡುತ್ತಿದ್ದರು. ಕೆಲವು ಬಸ್ಗಳಿಗೆ ಹಾನಿ ಆಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಆಗಿಲ್ಲ ಎಂದು ತಿಳಿದು ಬಂದಿದೆ.
ಗ್ಯಾರೇಜ್ ನಲ್ಲಿ ಬೆಂಕಿ ಅವಘಡ?
ಎಸ್ ವಿ ಕೋಚ್ ಎಂಬ ಹೆಸರಿನಲ್ಲಿ ಗ್ಯಾರೇಜ್ ನಡೆಸಲಾಗುತ್ತಿತ್ತು. ಶ್ರೀನಿವಾಸ್ ಎಂಬುವರು ಹಲವು ವರ್ಷಗಳಿಂದ ಬಸ್ ಗಳ ಚಾರ್ಸಿಗೆ ಬಾಡಿ ಪಿಟ್ ಮಾಡುವ ಕೆಲಸ ಮಾಡುತ್ತಿದ್ದರು. ಕಟ್ಟಿಂಗ್ ಹಾಗೂ ವೆಲ್ಡಿಂಗ್ ಮಷಿನ್ ಗಳನ್ನು ಬಳಸಿ ಕೆಲಸ ಮಾಡಲಾಗುತ್ತಿತ್ತು ಎನ್ನಲಾಗಿದೆ.
ಖಾಸಗಿ ಬಸ್ಗಳಿಗೆ ಟಿಂಕರಿಂಗ್, ಬಾಡಿ ರಿಪೇರಿ ಮಾಡಿಕೊಡುವ ಕೆಲಸ ಈ ಬೃಹತ್ ಗ್ಯಾರೇಜಿನಲ್ಲಿ ನಡೆಯುತ್ತಿತ್ತು. ಇಲ್ಲಿ ಕೆಲಸಗಾರರು ಇಲ್ಲಿಯೇ ಇದ್ದರು. ಈ ವೇಳೆ ನಡೆದ ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದ ಬೆಂಕಿ ತಗುಲಿದೆ. 21 ಬಸ್ ಸುಟ್ಟಿವೆ. ಸುಮಾರು 40 ಬಸ್ಗಳಿಗೆ ಘಟನೆಯಲ್ಲಿ ಹಾನಿ ಆಗಿದೆ. ಇದೆಲ್ಲ ನೋಡಿದರೆ ಯಾವುದೇ ಸುರಕ್ಷತಾ ಕ್ರಮಗಳು ಇಲ್ಲಿ ಕೈಗೊಂಡಿರಲಿಲ್ಲ ಎಂದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಬಸ್ ರಿಪೇರಿಗೆ ಬಿಟ್ಟ ಮಾಲೀಕರ ಸ್ಥಿತಿ ಹೇಳತೀರದಾಗಿದೆ.
ಇತ್ತೀಚೆಗೆ ಕೋರಮಂಗಲದ ಪಬ್ವೊಂದಕ್ಕೆ ಬೆಂಕಿ ಬಿದ್ದಿತ್ತು. ಅದೇ ಕಟ್ಟದಿಂದ ಕೆಳಗೆ ವ್ಯಕ್ತಿ ಜಿಗಿದ ಘಟನೆ ಮಾಸುವ ಮುನ್ನವೇ ಮತ್ತೊಂದು ಅಗ್ನಿ ಅವಗಢ ನಡೆದಿದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ











Click it and Unblock the Notifications