ರಾಜ್ಯದಲ್ಲಿ ಮತ್ತೆ 22 ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆ
ಬೆಂಗಳೂರು, ಏಪ್ರಿಲ್ 30: ಕರ್ನಾಟಕದಲ್ಲಿಂದು ಮತ್ತೆ 22 ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 557ಕ್ಕೆ ಏರಿಕೆಯಾಗಿದೆ.
22 ಕೇಸ್ಗಳ ಪೈಕಿ ಬೆಳಗಾವಿ ಜಿಲ್ಲೆ ಹಿರೇಬಾಗೆವಾಡಿಯಲ್ಲಿ 11, ಹುಕ್ಕೇರಿಯಲ್ಲಿ 3, ವಿಜಯಪುರದಲ್ಲಿ 2, ಬೆಂಗಳೂರು 3, ದಕ್ಷಿಣ ಕನ್ನಡ, ದಾವಣಗೆರೆ ಹಾಗೂ ತುಮಕೂರಿನಲ್ಲಿ ತಲಾ 1 ಪ್ರಕರಣ ದಾಖಲಾಗಿದೆ.
ಕರ್ನಾಟಕದಲ್ಲಿ ನಿನ್ನೆಯಿಂದ ಇಂದು ಮಧ್ಯಾಹ್ನದವರೆಗೆ 22 ಹೊಸ #Covid19 ಪ್ರಕರಣಗಳು ಖಚಿತವಾಗಿದ್ದು, ಒಟ್ಟಾರೆ ಸೊಂಕಿತರ ಸಂಖ್ಯೆ 557ಕ್ಕೆ ಏರಿದೆ. ಇದುವರೆಗೆ ಒಟ್ಟು 223 ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುತ್ತಾರೆ. #ಮನೆಯಲ್ಲೇಇರಿ #IndiaFightsCorona pic.twitter.com/QIcau8upOS
— B Sriramulu (@sriramulubjp) April 30, 2020
ಒಟ್ಟು ಸೋಂಕಿತರಲ್ಲಿ 223 ಜನರು ಗುಣಮುಖರಾಗಿದ್ದು, 21 ಜನರು ಸೋಂಕಿನಿಂದ ಚೇತರಿಸಿಕೊಳ್ಳದೆ ಸಾವನ್ನಪ್ಪಿದ್ದಾರೆ. ಈ ಕುರಿತು ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಇಂದು ಮೂರು ಹೊಸ ಪ್ರಕರಣ ದಾಖಲಾಗಿದ್ದು, ಪಾದರಾಯನಪುರ ವಾರ್ಡ್ನಲ್ಲಿ ಎರಡು ಸೋಂಕಿತರು ವರದಿಯಾಗಿದ್ದಾರೆ. ಇನ್ನೊಂದು ಕೇಸ್ನ ಬಗ್ಗೆ ನಿಖರವಾದ ಮಾಹಿತಿ ಇಲ್ಲ.
ಲಾಕ್ ಡೌನ್: ಮಹತ್ವದ ಅಭಿಪ್ರಾಯ ವ್ಯಕ್ತ ಪಡಿಸಿದ ಇನ್ಫೋಸಿಸ್ ನಾರಾಯಣಮೂರ್ತಿ
ನಿನ್ನೆ ಸಂಜೆ 5 ಗಂಟೆಯಿಂದ ಇಂದು ಮಧ್ಯಾಹ್ನ 12 ಗಂಟೆಯವರೆಗಿನ ವರದಿ ಇದಾಗಿದ್ದು, ಸಂಜೆ 5 ಗಂಟೆಗೆ ಮತ್ತೊಂದು ಮಾಧ್ಯಮ ಪ್ರಕಟಣೆ ಬಿಡುಗಡೆಯಾಗಲಿದೆ.