ಬೆಂಗಳೂರಿನಲ್ಲಿ ಮತ್ತೊಂದು ಗ್ಯಾಂಗ್ ರೇಪ್
ಬೆಂಗಳೂರು, ಆ.11 : ಗಾಂರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯನ್ನು ಅಪಹರಿಸಿದ ಐವರು ದುಷ್ಕರ್ವಿಗಳು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಜೆ.ಪಿ.ನಗರ ಪೊಲೀಸರು ಬಂಧಿಸಿದ್ದಾರೆ.
ಆ.10ರ ಭಾನುವಾರ ಗಾರ್ಮೆಂಟ್ಸ್ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವತಿಯನ್ನು ಆಟೋದಲ್ಲಿ ಅಪಹರಿಸಿದ ಐವರು ಡಿಜೆಹಳ್ಳಿ ಬಳಿಯ ಶ್ಯಾಂಪುರ ಬಳಿ ಅತ್ಯಾಚಾರವೆಸಗಿದ್ದಾರೆ ಎಂದು ಯುವತಿ ಜೆ.ಪಿ.ನಗರ ಪೊಲೀಸರಿಗೆ ದೂರು ನೀಡಿದ್ದಾಳೆ. ದೂರಿನ ಅನ್ವಯ ದೀಪು, ವಿಕ್ಕಿ, ರಾಘು ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಿದ್ದು, ವಿಚಾರಣೆ ಮುಂದುವರೆದಿದೆ.

ಐವರು ಯುವಕರು ಗಾಂಜಾ ಮತ್ತು ಮದ್ಯ ಸೇವಿಸಿದ್ದರು ಎಂದು ಯುವತಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾಳೆ. ಯುವತಿಯನ್ನು ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿಯೂ ಅತ್ಯಾಚಾರ ಆಗಿರುವುದು ಸಾಬೀತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. [ಪುಂಡನಿಗೆ ಒದ್ದ ಯುವತಿ, ವಿಡಿಯೋ ನೋಡಿ]
ಅಪಹರಣ ನಡೆದಿಲ್ಲ : ಬಂಧಿತ ಆರೋಪಿಗಳ ಪ್ರಾಥಮಿಕ ವಿಚಾರಣೆ ವೇಳೆ ಅಪಹರಣ ನಡೆದಿಲ್ಲ ಎಂದು ತಿಳಿದುಬಂದಿದೆ. ಬಂಧಿತನಾಗಿರುವ ವಿಕ್ಕಿಗೆ ಯುವತಿಗೆ ಮೊದಲೇ ಪರಿಚಯವಿದ್ದಳು, ಆಕೆಯೊಂದಿಗೆ ಮಾತನಾಡಲು ಕರೆದುಕೊಂಡು ಹೋದಾಗ ಸ್ನೇಹಿತರೊಂದಿಗೆ ಸೇರಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳೆಲ್ಲ ಕ್ರಿಮಿನಲ್ ಹಿನ್ನೆಲೆಯುಳ್ಳವರಾಗಿದ್ದು, ಎಲ್ಲರ ಮೇಲೂ ಜೆ.ಸಿ.ನಗರ ಮತ್ತು ಕೆ.ಜಿ.ಹಳ್ಳಿ ಠಾಣೆಯಲ್ಲಿ ನಾಲ್ಕೈದು ಮೊಕದ್ದಮೆಗಳು ದಾಖಲಾಗಿವೆ. ಇವರೆಲ್ಲರು ಪ್ಲಂಬರ್, ಬಾರ್ ಬೆಂಡಿಂಗ್ ಕೆಲಸ ಮಾಡಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications