ಕೆಂಪೇಗೌಡ ಏರ್ಪೋರ್ಟ್ ಗೆ 5 ಮಾರ್ಗಗಳಿಂದ 23 ವಾಯುವಜ್ರ ಬಸ್ ಸೇವೆ
ಬೆಂಗಳೂರು,ಜೂನ್ 3: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಬುಧವಾರ(ಜೂನ್3)ದಿಂದ ಐದು ಮಾರ್ಗಗಳಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಲ ನಿಲ್ದಾಣಕ್ಕೆ ವಾಯು ವಜ್ರ ಹವಾನಿಯಂತ್ರಿತ ಬಸ್ ನ್ನು ಕಾರ್ಯಾಚರಣೆಗೊಳಿಸುತ್ತಿದೆ.
ಕೊರೊನಾ ಲಾಕ್ ಡೌನ್ ನಿಂದಾಗಿ ಸುಮಾರು ಎರಡು ತಿಂಗಳುಗಳ ಕಾಲ ಬಿಎಂಟಿಸಿ ಬಸ್ ಕಾರ್ಯಾಚರಣೆ ಸ್ಥಗಿತಗೊಳಿಸಿತ್ತು. ಬಳಿಕ ಒಂದು ವಾರಗಳ ಹಿಂದೆ ಬಿಎಂಟಿಸಿ ಸಾದಾ ಬಸ್ ಗಳ ಓಡಾಟ ಆರಂಭವಾಗಿತ್ತು.
ಇದೀಗ ನಗರದ ಒಟ್ಟು ಐದು ಮಾರ್ಗಗಳಿಂದ ಕೆಐಎಎಲ್ ಗೆ ವಾಯುವಜ್ರ ಬಸ್ ಸಂಚರಿಸಲಿದೆ.
ಮೈಸೂರು ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಕೆಐಎಎಲ್, ಮೆಜೆಸ್ಟಿಕ್ ನಿಂದ ಕೆಐಎಎಲ್, ಬನಶಂಕರಿಯಿಂದ ಕೆಐಎಎಲ್, ಬಿಟಿಎಂ ಲೇಔಟ್ ನಿಂದಲೂ ಬಸ್ ಸಂಚರಿಸಲಿದೆ.

ಒಟ್ಟು ಬೆಂಗಳೂರಿನಾದ್ಯಂತ 75 ಬಸ್ ಗಳು ಸಂಚರಿಸಲಿವೆ. ಮೆಜೆಸ್ಟಿಕ್, ಕಾಡುಗೋಡಿ, ಸರ್ಜಾಪುರ ರಸ್ತೆ, ಸಿಲ್ಕ ಬೋರ್ಡ್, ಐಟಿಪಿಎಲ್, ಎಲೆಕ್ಟ್ರಾನಿಕ್ ಸಿಟಿ, ಅತ್ತಿಬೆಲೆ, ಹೆಬ್ಬಾಳಕ್ಕೆ ಬಸ್ ಸಂಚರಿಸಲಿದೆ.
ಕೊರೊನಾ ಲಾಕ್ ಡೌನ್ ಗೂ ಮುನ್ನ ಬೆಙಗಳೂರಿನಲ್ಲಿ ಒಟ್ಟು 550 ಹವಾನಿಯಂತ್ರಿತ ಬಸ್ ಗಳು ಸಂಚರಿಸುತ್ತಿದ್ದವು. ಇದೀಗ ಅದರ ಸಂಖ್ಯೆ ಮುಕ್ಕಾಲು ಭಾಗದಷ್ಟು ಕಡಿಮೆಯಾಗಿದೆ. ಕೊರೊನಾ ಸೋಂಕು ಕಡಿಮೆಯಾದರೆ ಬಸ್ ಗಳ ಸಂಖ್ಯೆ ಹೆಚ್ಚಾಗುತ್ತದೆ.
ಲಾಕ್ ಡೌನ್ ಗೂ ಮುನ್ನ ಹವಾನಯಂತ್ರಿತ ಬಸ್ ಗಳಲ್ಲಿ ಓಡಾಡುವವರ ಸಂಖ್ಯೆ ಕಡಿಮೆ ಇತ್ತು ಇದೀಗ ಕೊರೊನಾಗೆ ಹೆದರಿ ಜನರು ಬಸ್ ಏರಲು ಹಿಂಜರಿಯುತ್ತಿರುವ ಕಾರಣ ಬಿಎಂಟಿಸಿಗೆ ದೊಡ್ಡ ಹೊಡೆತ ಬೀಳಲಿದೆ












Click it and Unblock the Notifications