New Railway Line: ಕರ್ನಾಟಕದ ಈ ಭಾಗದಲ್ಲಿ ₹458 ಕೋಟಿ ವೆಚ್ಚದ ರೈಲ್ವೆ ಕಾಮಗಾರಿ ಶುರು
ಬೆಂಗಳೂರು, ಜುಲೈ 21: ಕರ್ನಾಟಕ ರೈಲ್ವೆ ಮೂಲ ಸೌಕರ್ಯ ವರ್ಷದಿಂದ ವರ್ಷ ಅಭಿವೃದ್ಧಿಯಾಗುತ್ತಿದೆ. ಹೊಸ ಮಾರ್ಗದಲ್ಲಿ ರೈಲುಗಳು ಕಾರ್ಯಾಚರಣೆ ಆರಂಭಿಸಿವೆ. ಶೀಘ್ರವೇ ಎರಡು ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳು ಸೇವೆ ಆರಂಭಿಸಲಿವೆ. ಈ ಮಧ್ಯ ಕರ್ನಾಟಕದಲ್ಲಿ ಮತ್ತೊಂದು ಮಹತ್ವದ ರೈಲ್ವೆ ಕಾಮಗಾರಿಗೆ ಬರೋಬ್ಬರಿ 458 ಕೋಟಿ. ರೂ. ಅನುದಾನವನ್ನು ಮೀಸಲಿಡಲಾಗಿದೆ. ಇದರಿಂದ ಕೆಲವು ಜಿಲ್ಲೆಗಳ ಲಕ್ಷಾಂತರ ಪ್ರಯಾಣಿಕರಿಗೆ ಅನುಕೂಲ ಆಗಲಿದೆ.
ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಇದೇ ವಿಚಾರ ಬಹಿರಂಗಪಡಿಸಿದರು. ಕರ್ನಾಟಕದ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕು ವ್ಯಾಪ್ತಿಯಲ್ಲಿ ರೈಲ್ವೆ ಮಾರ್ಗದಲ್ಲಿ ಮಹತ್ವ ಕಾಮಗಾರಿ ಆರಂಭವಾಗಲಿದೆ. ತೋರಣಗಲ್ಲು - ರಂಜಿತ್ಪುರ ನಡುವಿನ 23 ಕಿ.ಮೀ ಉದ್ದದ ರೈಲ್ವೆ ದ್ವಿಪಥೀಕರಣಕ್ಕೆ ಮಂಜೂರಾತಿ ನೀಡಲಾಗಿದೆ. ಕೇಂದ್ರ ಸರ್ಕಾರ ಹಾಗೂ ರೈಲ್ವೆ ಇಲಾಖೆ ಸಚಿವಾಲಯದಿಂದ ಬರೋಬ್ಬರಿ 458 ಕೋಟಿ. ರೂ. ಅನುದಾನವನ್ನು ಈ ಕಾಮಗಾರಿಗೆ ಮೀಸಲಿಡಲಾಗಿದೆ ಎಂದು ಅವರು ವಿವರಿಸಿದರು.

ತೋರಣಗಲ್ಲು- ರಂಜಿತ್ಪುರ ಮಾರ್ಗದ ರೈಲು ಹಳಿ ಏಕಪಥ ಇದೆ. ಅದರ ದ್ವೀಪಥೀಕರಣ ಕಾರ್ಯ ಮುಂದಿನ ದಿನಗಳಲ್ಲಿ ಶುರುವಾಗಲಿದೆ. ಈ ಭಾಗದಲ್ಲಿ ಸಹ ಗೂಡ್ಸ್ ಸಾಗಾಣೆ, ಪ್ರಯಾಣಿಕರ ಸಂಚಾರ ಹೆಚ್ಚಿರುತ್ತದೆ. ಕಬ್ಬಿಣದ ಅದಿರು, ಬಹು ವಿಧದ ಕಾರ್ಗೋ ಟರ್ಮಿನಲ್ ಅಭಿವೃದ್ಧಿಗೆ ಅನುಕೂಲ ಸೇರಿದಂತೆ ಸರಕು ಸಾಗಣೆ ಸಾಮರ್ಥ್ಯ ಹೆಚ್ಚಳವಾಗಲಿದೆ. ದ್ವಿಪಥೀಕರಣ ಪೂರ್ಣಗೊಂಡ ನಂತರ ವಾರ್ಷಿಕವಾಗಿ 5.64 ಮಿಲಿಯನ್ ಟನ್ಗಳಷ್ಟು ಹೆಚ್ಚುವರಿ ಸರಕು ಸಾಗಣೆಗೆ ನಿರೀಕ್ಷೆ ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ವಿವಿಧ ಜಿಲ್ಲೆಗಳಿಗೆ ಅನುಕೂಲ
ಈ ರೈಲ್ವೆ ಲೈನ್ ದ್ವಿಪಥಗೊಳಿಸುವುದರಿಂದ ಬಳ್ಳಾರಿ, ಕೊಪ್ಪಳ, ಗದಗ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ರೈಲ್ವೆ ಸಂಚಾರ ಸುಗಮನಗೊಳ್ಳುತ್ತದೆ. ಕೈಗಾರಿಕೆ, ವಿದ್ಯಾಭ್ಯಾಸ, ವ್ಯಾಪಾರ ವಹೀವಾಟಿಗೆ ಉತ್ತೇಜನ ಸಿಕ್ಕಂತಾಗುತ್ತದೆ. ಪ್ರಯಾಣಿಕರಿಗೆ ಮತ್ತಷ್ಟು ಸುಸೂತ್ರ ಸಾರಿಗೆ ವ್ಯವಸ್ಥೆ ನೀಡಿದಂತಾಗುತ್ತದೆ. ದೈನದಂದಿನ ರೈಲ್ವೆ ಸಂಚಾರ ಸುಗಮಗೊಳ್ಳುತ್ತದೆ.
ಕರ್ನಾಟಕದಲ್ಲಿ ಬೆಂಗಳೂರು-ಹುಬ್ಬಳ್ಳಿ, ಬೆಂಗಳೂರು-ಮೈಸೂರು, ಬೆಂಗಳೂರು-ಕಲಬುರಗಿ, ಹಾಸನ-ದಾವಣಗೆರೆ, ಹುಬ್ಬಳ್ಳಿ-ಪುಣೆ ಹೀಗೆ ಬಹುತೇಕ ರೈಲ್ವೆ ಮಾರ್ಗಗಳು ದ್ವಿಪಥೀಕರಣ ಗೊಂಡಿವೆ. ಮುಂದಿನ ದಿನಗಳಲ್ಲಿ ತೋರಣಗಲ್ಲು-ರಂಜಿತ್ಪುರ ಸೇರಿದಂತೆ ಇತರ ಕಡಿಮೆ ದೂರದ ರೈಲ್ವೆ ಮಾರ್ಗಗಳು ಸಹ ದ್ವಿಪಥ ಮಾರ್ಗಗಳು ಹಾಗೂ ವಿದ್ಯುದೀಕರಣಗೊಳ್ಳಲಿವೆ.
ರೈಲ್ವೆ ನಿಲ್ದಾಣ ಪುನರಾಭಿವೃದ್ಧಿ
ಒಡಿಶಾದ ಪುರಿ ರೈಲ್ವೆ ನಿಲ್ದಾಣವು ಅಮೃತ್ ಭಾರತ್ ರೈಲ್ವೆ ನಿಲ್ದಾಣ ಯೋಜನೆಯಡಿ ಬರೋಬ್ಬರಿ 177 ಕೋಟಿ ರೂ.ಗಳ ವೆಚ್ಚದಲ್ಲಿ ಪುನರ್ ಅಭಿವೃದ್ಧಿ ಮಾಡಲಾಗುತ್ತಿದ್ದು, 2026ರ ಜನವರಿ ವೇಳೆಗೆ ಕಾಮಗಾರಿ ಸಂಪೂರ್ಣಗೊಳ್ಳಲಿದೆ. ಪುರಿ ರೈಲ್ವೆ ನಿಲ್ದಾಣವನ್ನು ವಿಶ್ವದರ್ಜೆಯ ಮಟ್ಟದಲ್ಲಿ ಅಭಿವೃದ್ಧಿಗೊಳಿಸಲಾಗುತ್ತಿದೆ. ಅತ್ಯಾಧುನಿಕ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದು ಕಾಮಗಾರಿ ಪರಿಶೀಲಿಸಿ ಇತ್ತೀಚೆಗೆ ಅವರು ಮಾಹಿತಿ ನೀಡಿದರು.
ಅಮೃತ್ ಭಾರತ್ ರೈಲ್ವೆ ನಿಲ್ದಾಣ ಯೋಜನೆಯಡಿ ಒಡಿಶಾದಲ್ಲಿ ಒಟ್ಟು 59 ರೈಲ್ವೆ ನಿಲ್ದಾಣಗಳ ಪುನರ್ ಅಭಿವೃದ್ಧಿ ಕೈಗೆತ್ತಿಕೊಳ್ಳಲಾಗಿದ್ದು, ಇದಕ್ಕಾಗಿ 2,379 ಕೋಟಿ ರೂ.ಗಳ ಅನುದಾನ ವಿನಿಯೋಗಿಸಲಾಗುತ್ತಿದೆ ಎಂದರು.
-
ಭಾರತದ ಏಕೈಕ ರೈಲು ಸಂಪರ್ಕವಿಲ್ಲದ ರಾಜ್ಯ ಸಿಕ್ಕಿಂ: ಕಾರಣ ಮತ್ತು ಪ್ರಯಾಣ ಮಾರ್ಗಗಳ ವಿವರ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Vande Bharat Sleeper: ಉತ್ಪಾದನೆ ಗುರಿ ತಲುಪದ ಬೆಂಗಳೂರು-ಚೆನ್ನೈ ಕಂಪನಿಗಳು, ಸ್ಲೀಪರ್ ರೈಲು ವಿತರಣೆ ವಿಳಂಬ -
ರೈಲಿನಲ್ಲಿ ಆಹಾರ ಗುಣಮಟ್ಟ, ಅಧಿಕೃತ ವೆಂಡರ್ ಮಾಹಿತಿ ತಿಳಿಯಲು QR ಕೋಡ್ ವ್ಯವಸ್ಥೆ, ಏನಿದು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ












Click it and Unblock the Notifications