24,000 ಸಾವಿರ ಬೆಂಗಳೂರಿನ ಆಸ್ತಿದಾರರಿಗೆ ಜಿಬಿಎಯಿಂದ ಶಾಕ್, ಆಸ್ತಿ ತೆರಿಗೆ ಪರಿಷ್ಕರಣೆ!
ಬೆಂಗಳೂರಿನ ಸ್ಥಳೀಯ ಆಡಳಿತವು ಬೃಹತ್ ಬೆಂಗಳೂರಿನಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಬದಲಾದ ಮೇಲೆ ಬೆಂಗಳೂರಿನ ಸ್ಥಳೀಯ ಆಡಳಿತಕ್ಕೆ ಆಸ್ತಿ ತೆರಿಗೆ ಸಂಗ್ರಹದಲ್ಲಿ ಭಾರೀ ಹಿನ್ನಡೆ ಆಗಿರುವುದು ಮೇಲ್ನೋಟಕ್ಕೆ ತಿಳಿದು ಬಂದಿದೆ.
ಹೌದು ಬೆಂಗಳೂರಿನ ಸ್ಥಳೀಯ ಆಡಳಿತಕ್ಕೆ ಆಸ್ತಿ ತೆರಿಗೆ ಸಂಗ್ರಹವು ಪ್ರಮುಖ ಆದಾಯಗಳಲ್ಲಿ ಒಂದಾಗಿದೆ. ಆದರೆ ಈ ವರ್ಷ ಬೆಂಗಳೂರಿನ ಆಡಳಿತದ ಇತಿಹಾಸದಲ್ಲೇ ಮಹತ್ವದ ಬದಲಾವಣೆ ಆಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಬದಲಿಗೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬಂದಿದೆ. ಆದರೆ, ಇದರ ಬೆನ್ನಲ್ಲೇ ಬೆಂಗಳೂರಿನಲ್ಲಿ ಐದು ಪಾಲಿಕೆಗಳು ರಚನೆಯಾಗಿದ್ದು, ಆಸ್ತಿ ತೆರಿಗೆ ಸಂಗ್ರಹಕ್ಕೆ ತುಸು ಹಿನ್ನಡೆ ಆಗಿದೆ.

ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ಸಂಗ್ರಹ ಪ್ರಮಾಣವು ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಕಠಿಣ ಕ್ರಮಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮುಂದಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕಂದಾಯ ವಿಭಾಗದ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್ ಅವರು ಮಾತನಾಡಿ, ನಗರದ 5 ನಗರ ಪಾಲಿಕೆಗಳಲ್ಲಿ 6700 ಕೋಟಿ ರೂ. ತೆರಿಗೆ ಸಂಗ್ರಹಿಸುವ ಗುರಿ ಹೊಂದಲಾಗಿದ್ದು, ಈವರೆಗೆ 3533 ಕೋಟಿ ರೂ. ಸಂಗ್ರಹಿಸಲಾಗಿದೆ. ಈ ಪೈಕಿ ಆಸ್ತಿ ತೆರಿಗೆ ಸಂಗ್ರಹಿಸಲು ಹೆಚ್ಚು ಗಮನ ನೀಡಿ ಪರಿಷ್ಕರಣೆ ಪ್ರಕರಣಗಳು ಹಾಗೂ ಸುಸ್ತಿದಾರರಿಂದ ಆಸ್ತಿ ತೆರಿಗೆ ಸಂಗ್ರಹಿಸಲು ಸೂಚನೆ ಕೊಟ್ಟಿದ್ದಾರೆ.
24,000 ಆಸ್ತಿತೆರಿಗೆ ಪರಿಷ್ಕರಣೆ ಪ್ರಕರಣಗಳು: ಇನ್ನು ಬೆಂಗಳೂರಿನ 5 ನಗರ ಪಾಲಿಕೆಗಳಲ್ಲಿ 24 ಸಾವಿರ ಆಸ್ತಿಗಳ ಆಸ್ತಿತೆರಿಗೆ ಪರಿಷ್ಕರಣೆ ಪ್ರಕರಣಗಳಿದ್ದು, ಅದರಿಂದ ಸುಮಾರು 170 ಕೋಟಿ ರೂ. ಸಂಗ್ರಹಿಬೇಕಿದೆ. ಅಲ್ಲದೆ ಸುಮಾರು 22 ಸಾವಿರ ಸುಸ್ತಿದಾರರಿಂದ 598 ಕೋಟಿ ರೂ. ಬರಬೇಕಿದ್ದು, ಅದರ ಮೇಲೆ ಹೆಚ್ಚು ಗಮನ ನೀಡಿ ಸಂಗ್ರಹಿಸಲು ಸೂಚನೆ ನೀಡಿದ್ದಾರೆ.
ಕಠಿಣ ಕ್ರಮಕ್ಕೆ ಮುಂದಾದ ಜಿಬಿಎ: ಇನ್ನು ಬೆಂಗಳೂರಿನಲ್ಲಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರ ಮೇಲೆ ಗ್ರೇಟರ್ ಬೆಂಗಳೂರು ಆಡಳಿತವು ಕಣ್ಣಿರಿಸಿದೆ. ಸೀಲ್ ಮಾಡಿ ಬಾಕಿ ಹಣ ವಸೂಲಿ ಮಾಡುವುದಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಆಯುಕ್ತರಾದ ಮಹೇಶ್ವರ್ ರಾವ್ ಅವರು ಹೇಳಿದ್ದಾರೆ.
ಬೆಂಗಳೂರಿನ ಆಯಾ ನಗರ ಪಾಲಿಕೆಗಳಲ್ಲಿ ವಿಭಾಗವಾರು 100 ಪರಿಷ್ಕರಣೆ ಪ್ರಕರಣಗಳು, 100 ಹೆಚ್ಚು ಬಾಕಿ ಉಳಿಸಿಕೊಂಡಿರುವ ಸುಸ್ತಿದಾರರನ್ನು ಪಟ್ಟಿ ಮಾಡುವುದಕ್ಕೆ ಸೂಚನೆ ನೀಡಲಾಗಿದೆ. ಅಲ್ಲದೇ ಕಂದಾಯ ಪರಿವೀಕ್ಷಕರು/ಕಂದಾಯ ವಸೂಲಿಗಾರರಿಗೆ ನಿಗದಿತ ಗುರಿ ನೀಡಿ ವಾಣಿಜ್ಯ ಸ್ವತ್ತುಗಳನ್ನು ಸೀಲ್ ಮಾಡಿ ಬಾಕಿ ಆಸ್ತಿ ತೆರಿಗೆಯನ್ನು ವಸೂಲಿ ಮಾಡಬೇಕೆಂದು ಆಯುಕ್ತರು ಸೂಚನೆ ಕೊಟ್ಟಿದ್ದಾರೆ.
-
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications