25 ತಿಂಗಳ ಬಿಲ್ ಪಾವತಿ ಬಾಕಿ: ಕಾರ್ಯನಿರತ ಬಿಬಿಎಂಪಿ ಗುತ್ತಿಗೆದಾರರಿಂದ ಪ್ರತಿಭಟನೆ
ಬೆಂಗಳೂರು, ನವೆಂಬರ್ 23: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಕಳೆದ 25 ತಿಂಗಳಿನಿಂದ ಬಿಬಿಎಂಪಿ ಗುತ್ತಿಗೆದಾರರಿಗೆ ಬಿಲ್ ಪಾವತಿ ಮಾಡದೆ ಉಳಿಸಿಕೊಂಡಿದ್ದು, ಕೂಡಲೇ ಬಿಲ್ ಪಾವತಿ ಮಾಡಬೇಕೆಂದು ಕಾರ್ಯನಿರತ ಗುತ್ತಿಗೆದಾರ ಸಂಘದ ವತಿಯಿಂದ ಬಿಬಿಎಂಪಿ ಕೇಂದ್ರ ಕಚೇರಿ ಅವರಣದಲ್ಲಿ ಪ್ರತಿಭಟನೆ ಮಾಡಲಾಯಿತು.
ಅಧ್ಯಕ್ಷರಾದ ಕೆ.ಟಿ.ಮಂಜುನಾಥ್ ಪದಾಧಿಕಾರಿಗಳಾದ ಎಂ.ದೇವರಾಜ್, ವೆಂಕಟೇಶ್, ರವಿಕುಮಾರ್, ಶಿವಣ್ಣ, ಟಿ.ವೆಂಕಟೇಶ್, ಮಂಜುನಾಥ್ ಮತ್ತು ನೂರಾರು ಗುತ್ತಿಗೆದಾರರು ಭಾಗವಹಿಸಿದ್ದರು.
ಅಧ್ಯಕ್ಷರಾದ ಕೆ.ಟಿ.ಮಂಜುನಾಥ್ ರವರು ಮಾತನಾಡಿ, ಬಿಬಿಎಂಪಿ ಕಾಮಗಾರಿ ಪೂರ್ಣಗೊಂಡು 25 ತಿಂಗಳು ಆದರೂ ಪಾಲಿಕೆ ವತಿಯಿಂದ ಸಕಾಲಕ್ಕೆ ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡುತ್ತಿಲ್ಲ. ಬ್ಯಾಂಕ್ ಮತ್ತು ಖಾಸಗಿ ಲೇವಾದೇವಿದಾರರಿಂದ ಬಡ್ಡಿಗೆ ಹಣ ತಂದು, ಬಹುತೇಕ ಗುತ್ತಿಗೆದಾರರು ಕಾಮಗಾರಿಗಳನ್ನು ಮಾಡಿರುತ್ತಾರೆ ಎಂದರು.

ಬಿಬಿಎಂಪಿಯಲ್ಲಿ ನಿಧಾನಗತಿಯಲ್ಲಿ ಬಿಲ್ ಪಾವತಿ ಮಾಡುವುದರಿಂದ ಬಂದ ಹಣವೆಲ್ಲ ಅಸಲು, ಬಡ್ಡಿಗೆ ಸಮವಾಗುತ್ತದೆ. ಗುತ್ತಿಗೆದಾರರನ್ನು ನಂಬಿಕೊಂಡಿರುವ ಕುಟುಂಬವರ್ಗ ಮತ್ತು ಸಾವಿರಾರು ಕೂಲಿ ಕಾರ್ಮಿಕರು ಇಂದು ಸಂಕಷ್ಟ ಎದುರಿಸುತ್ತಿದ್ದಾರೆ. ಲಂಚ ನೀಡಿದವರಿಗೆ ಹಣ ಬಿಡುಗಡೆ ಮಾಡುತ್ತಿದ್ದಾರೆ ಎಂದು ಕೆ.ಟಿ.ಮಂಜುನಾಥ್ ಆರೋಪಿಸಿದರು.
ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು. ಕಾಮಗಾರಿ ಪೂರ್ಣಗೊಂಡ ಆರು ತಿಂಗಳ ಅವಧಿಯಲ್ಲಿ ಬಿಲ್ಲು ಪಾವತಿಯಾಗಬೇಕು ಮತ್ತು ಕಳೆದ 25 ತಿಂಗಳ ಗುತ್ತಿಗೆದಾರರ ಬಿಲ್ ಗಳನ್ನು ತತಕ್ಷಣ ಬಿಡುಗಡೆ ಮಾಡಬೇಕೆಂದು ಆಯುಕ್ತರಿಗೆ ಮನವಿ ಮಾಡಲಾಗುವುದು ಎಂದು ಬಿಬಿಎಂಪಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆ.ಟಿ.ಮಂಜುನಾಥ್ ಹೇಳಿದರು.
Recommended Video
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications