Get Updates
Get notified of breaking news, exclusive insights, and must-see stories!

ಬೆಂಗಳೂರಿನಲ್ಲಿ ರಾಘವೇಶ್ವರ ಶ್ರೀಗಳ "ರಾಮಾಯಣ ಚಾತುರ್ಮಾಸ್ಯ"

ಬೆಂಗಳೂರು, ಜೂನ್ 5: ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರ 26ನೇ ಚಾತುರ್ಮಾಸ ಬೆಂಗಳೂರಿನ ಗಿರಿನಗರದ ಶಾಖಾಮಠ ಆವರಣದಲ್ಲಿ ನಡೆಯಲಿದೆ.

ಜುಲೈ 16ರಂದು ಆರಂಭವಾಗುವ ಚಾತುರ್ಮಾಸ ಸೆಪ್ಟೆಂಬರ್ 14ರಂದು ಸಂಪನ್ನವಾಗಲಿದ್ದು, ಈ ಬಾರಿಯ ಚಾತುರ್ಮಾಸಕ್ಕೆ "ರಾಮಾಯಣ ಚಾತುರ್ಮಾಸ್ಯ" ಎಂದು ಹೆಸರಿಸಲಾಗಿದೆ. ಸೆಪ್ಟೆಂಬರ್ 14ರಂದು ಶನಿವಾರ ಸೀಮೋಲ್ಲಂಘನ ನಡೆಯಲಿದೆ.

ಈ ಕುರಿತಾಗಿ ಬೆಂಗಳೂರಿನ ಪದಾಧಿಕಾರಿಗಳು ಹಾಗೂ ಶಿಷ್ಯಭಕ್ತರು ಶ್ರೀಗಳಿಗೆ ಫಲ ಸಮರ್ಪಣೆ ಮಾಡಿ, ಬೆಂಗಳೂರಿನಲ್ಲಿ ಚಾತುರ್ಮಾಸ್ಯವ್ರತ ಕೈಗೊಳ್ಳುವಂತೆ ನಿವೇದಿಸಿದರು.

26th Chaturmasa Vratha of Raghaveshwara Swamiji of Ramachandrapura Math at Bengaluru

ಶ್ರೀಗಳು ಸನ್ಯಾಸ ಸ್ವೀಕರಿಸಿ 25 ವರ್ಷಗಳನ್ನು ಪೂರೈಸಿದ್ದು, ಈ ಬಾರಿ 26ನೇ ವರ್ಷದ ಚಾತುರ್ಮಾಸವನ್ನು ಅತ್ಯಂತ ವಿಶಿಷ್ಟವಾಗಿ ಆಚರಿಸಲು ಶ್ರೀಮಠದ ಶಿಷ್ಯರು ಹಾಗೂ ಭಕ್ತರು ಈಗಾಗಲೇ ಸಿದ್ಧತೆ ಆರಂಭಿಸಿದ್ದಾರೆ.

25 ರ ರಜತ ವರ್ಷ ಪೂರೈಸಿ, ಸ್ವರ್ಣ ವರ್ಷದೆಡೆಗೆ ಪಾದಾರ್ಪಣೆ ಮಾಡುವುದು ಈ ವರ್ಷದ ವಿಶೇಷವಾಗಿದೆ. ನಾಡಿನ ವಿವಿಧ ಕ್ಷೇತ್ರಗಳ ಗಣ್ಯರನ್ನೊಳಗೊಂಡ ಚಾತುರ್ಮಾಸ ಸಮಿತಿ ರಚನೆಯಾಗಿದ್ದು, ಪೂರ್ವಸಿದ್ಧತೆಗಳು ಭರದಿಂದ ಸಾಗಿವೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+