ಮುಂದಿನ ವರ್ಷ 27 ಐಎಎಸ್, ಐಪಿಎಸ್, ಐಎಫ್ಎಸ್ ಅಧಿಕಾರಿಗಳು ನಿವೃತ್ತಿ
ಬೆಂಗಳೂರು, ಡಿಸೆಂಬರ್ 02 : ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಸೇರಿದಂತೆ 27 ಮಂದಿ ಐಎಎಸ್, ಐಪಿಎಸ್ ಹಾಗೂ ಐಎಫ್ ಎಸ್ ಅಧಿಕಾರಿಗಳು 2018 ರಲ್ಲಿ ಸೇವೆಯಿಂದ ನಿವೃತ್ತಿ ಹೊಂದಲಿದ್ದಾರೆ.
14ಮಂದಿ ಐಎಫ್ಎಸ್ ಅಧಿಕಾರಿಗಳು, ಎಂಟು ಮಂದಿ ಐಎಎಸ್ ಅಧಿಕಾರಿಗಳು, ಐದು ಮಂದಿ ಐಪಿಎಸ್ ಅಧಿಕಾರಿಗಳು 2018 ರಲ್ಲಿ ಸೇವೆಯಿಂದ ವಯೋನಿವೃತ್ತಿ ಹೊಂದಲಿದ್ದಾರೆ.
ಸರ್ಕಾರದ ಮುಖ್ಯಕಾರ್ಯದರ್ಶಿ ಕೆ.ರತ್ನಪ್ರಭಾ 2018ರ ಮಾರ್ಚ್ 31ರಂದು ಸೇವೆಯಿಂದ ವಯೋನಿವೃತ್ತಿ ಹೊಂದಲಿದ್ದು, ಹಿರಿಯ ಐಎಎಸ್ ಅಧಿಕಾರಿಗಳಾದ ಜಿ.ಲತಾಕೃಷ್ಣರಾವ್, ಎಚ್.ಎಸ್.ಅಶೋಕಾನಂದ ಅವರು ಮೇ 31ರಂದು ನಿವೃತ್ತಿ ಹೊಂದಲಿದ್ದಾರೆ.

ಉಮೇಶ್ ಕುಸುಗಲ್ ಅವರು 2018ರ ಏ.30ರಂದು, ರೇಣುಕಾ ಚಿದಂಬರಂ ಮತ್ತು ಪಾಂಡುರಂಗ ಬೊಮ್ಮಯ್ಯ ನಾಯಕ್ ಅವರು ಜುಲೈ 31ರಂದು ಸೇವೆಯಿಂದ ವಯೋನಿವೃತ್ತಿ ಹೊಂದಲಿದ್ದಾರೆ. ಕೇಂದ್ರ ಸರ್ಕಾರದ ಸೇವೆಯಲ್ಲಿರುವ ಎಸ್.ಕೆ.ಪಟ್ನಾಯಕ್ ಹಾಗೂ ಎಂ.ಲಕ್ಷ್ಮೀನಾರಾಯಣ ಅವರು ಸೆಪ್ಟೆಂಬರ್ 30ರಂದು ನಿವೃತ್ತಿಯಾಗಲಿದ್ದಾರೆ.
ಐಪಿಎಸ್ ಅಧಿಕಾರಿಗಳಾದ ಪ್ರೇಮ್ ಶಂಕರ್ ಮೀನಾ ಜನವರಿ 31ರಂದು ನಿವೃತ್ತಿ ಹೊಂದಿದರೆ , ರವಿಕುಮಾರ್ ಎಚ್.ನಾಯಕ್ ಏಪ್ರಿಲ್ 30ರಂದು ಸೇವೆಯಿಂದ ನಿವೃತ್ತಿಯಾಗಲಿದ್ದಾರೆ. ಎನ್.ಶಿವಪ್ರಸಾದ್ ಮತ್ತು ಎಚ್.ಎಸ್.ವೆಂಕಟೇಶ್ ಅವರು ಮೇ 31ರಂದು ಡಾ.ಬಿ.ಎ.ಮಹೇಶ್ 2018ರ ಡಿ.31ರಂದು, ಹಿರಿಯ ಐಎಫ್ಎಸ್ ಅಧಿಕಾರಿಗಳಾದ ಅಶೋಕ್ ಕುಮಾರ್ ಗಾರ್ಗ್ ಫೆ.28ರಂದು ನಿವೃತ್ತಿಹೊಂದಲಿದ್ದಾರೆ. ಡಾ.ಕೆ.ಎನ್.ಮೂರ್ತಿ, ಡಾ.ಆರ್.ರಾಜು, ಕೆ.ಎಚ್.ನಾಗರಾಜು ಅವರು ಜೂ.30ರಂದು ನಿವೃತ್ತಿಯಾಗುವರು. ಜನವರಿ 31ರಂದು ಎಚ್.ಸಿ.ಸುಭಾಕಾತ್ ಹುಸೇನ್ ನಿವೃತ್ತಿಯಾಗಲಿದ್ದಾರೆ.
ಜಿ.ಸತೀಶ್, ರಂಗೇಗೌಡ, ಎಚ್.ಸಿ.ಕಾಂತರಾಜು ಅವರು ಜುಲೈ 31ರಂದು ನಿವೃತ್ತಿಹೊಂದಿದರೆ, ಎಸ್.ಶೇಖರ್, ಕೆ.ಬಿ.ಮಾರ್ಕಂಡೇಯ, ಕೆ.ಡಿ.ಉಡಪುಡಿ ಹಾಗೂ ಜಾವಿದ್ ಮುಮ್ತಾಜ್ ಮೇ 31ರಂದು ನಿವೃತ್ತಿ ಹೊಂದಲಿದ್ದಾರೆ. ಬಿ.ಎಂ.ಪರಮೇಶ್ವರ್ ನ.30ರಂದು ನಿವೃತ್ತಿಯಾದರೆ, ಎಸ್.ಶಾಂತಪ್ಪ ಡಿ.31ರಂದು ಸೇವೆಯಿಂದ ನಿವೃತ್ತಿ ಹೊಂದಲಿದ್ದಾರೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಪ್ರಕಟಿಸಿದೆ.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು












Click it and Unblock the Notifications