ಮುಂದಿನ ವರ್ಷ 27 ಐಎಎಸ್, ಐಪಿಎಸ್, ಐಎಫ್ಎಸ್ ಅಧಿಕಾರಿಗಳು ನಿವೃತ್ತಿ
ಬೆಂಗಳೂರು, ಡಿಸೆಂಬರ್ 02 : ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಸೇರಿದಂತೆ 27 ಮಂದಿ ಐಎಎಸ್, ಐಪಿಎಸ್ ಹಾಗೂ ಐಎಫ್ ಎಸ್ ಅಧಿಕಾರಿಗಳು 2018 ರಲ್ಲಿ ಸೇವೆಯಿಂದ ನಿವೃತ್ತಿ ಹೊಂದಲಿದ್ದಾರೆ.
14ಮಂದಿ ಐಎಫ್ಎಸ್ ಅಧಿಕಾರಿಗಳು, ಎಂಟು ಮಂದಿ ಐಎಎಸ್ ಅಧಿಕಾರಿಗಳು, ಐದು ಮಂದಿ ಐಪಿಎಸ್ ಅಧಿಕಾರಿಗಳು 2018 ರಲ್ಲಿ ಸೇವೆಯಿಂದ ವಯೋನಿವೃತ್ತಿ ಹೊಂದಲಿದ್ದಾರೆ.
ಸರ್ಕಾರದ ಮುಖ್ಯಕಾರ್ಯದರ್ಶಿ ಕೆ.ರತ್ನಪ್ರಭಾ 2018ರ ಮಾರ್ಚ್ 31ರಂದು ಸೇವೆಯಿಂದ ವಯೋನಿವೃತ್ತಿ ಹೊಂದಲಿದ್ದು, ಹಿರಿಯ ಐಎಎಸ್ ಅಧಿಕಾರಿಗಳಾದ ಜಿ.ಲತಾಕೃಷ್ಣರಾವ್, ಎಚ್.ಎಸ್.ಅಶೋಕಾನಂದ ಅವರು ಮೇ 31ರಂದು ನಿವೃತ್ತಿ ಹೊಂದಲಿದ್ದಾರೆ.

ಉಮೇಶ್ ಕುಸುಗಲ್ ಅವರು 2018ರ ಏ.30ರಂದು, ರೇಣುಕಾ ಚಿದಂಬರಂ ಮತ್ತು ಪಾಂಡುರಂಗ ಬೊಮ್ಮಯ್ಯ ನಾಯಕ್ ಅವರು ಜುಲೈ 31ರಂದು ಸೇವೆಯಿಂದ ವಯೋನಿವೃತ್ತಿ ಹೊಂದಲಿದ್ದಾರೆ. ಕೇಂದ್ರ ಸರ್ಕಾರದ ಸೇವೆಯಲ್ಲಿರುವ ಎಸ್.ಕೆ.ಪಟ್ನಾಯಕ್ ಹಾಗೂ ಎಂ.ಲಕ್ಷ್ಮೀನಾರಾಯಣ ಅವರು ಸೆಪ್ಟೆಂಬರ್ 30ರಂದು ನಿವೃತ್ತಿಯಾಗಲಿದ್ದಾರೆ.
ಐಪಿಎಸ್ ಅಧಿಕಾರಿಗಳಾದ ಪ್ರೇಮ್ ಶಂಕರ್ ಮೀನಾ ಜನವರಿ 31ರಂದು ನಿವೃತ್ತಿ ಹೊಂದಿದರೆ , ರವಿಕುಮಾರ್ ಎಚ್.ನಾಯಕ್ ಏಪ್ರಿಲ್ 30ರಂದು ಸೇವೆಯಿಂದ ನಿವೃತ್ತಿಯಾಗಲಿದ್ದಾರೆ. ಎನ್.ಶಿವಪ್ರಸಾದ್ ಮತ್ತು ಎಚ್.ಎಸ್.ವೆಂಕಟೇಶ್ ಅವರು ಮೇ 31ರಂದು ಡಾ.ಬಿ.ಎ.ಮಹೇಶ್ 2018ರ ಡಿ.31ರಂದು, ಹಿರಿಯ ಐಎಫ್ಎಸ್ ಅಧಿಕಾರಿಗಳಾದ ಅಶೋಕ್ ಕುಮಾರ್ ಗಾರ್ಗ್ ಫೆ.28ರಂದು ನಿವೃತ್ತಿಹೊಂದಲಿದ್ದಾರೆ. ಡಾ.ಕೆ.ಎನ್.ಮೂರ್ತಿ, ಡಾ.ಆರ್.ರಾಜು, ಕೆ.ಎಚ್.ನಾಗರಾಜು ಅವರು ಜೂ.30ರಂದು ನಿವೃತ್ತಿಯಾಗುವರು. ಜನವರಿ 31ರಂದು ಎಚ್.ಸಿ.ಸುಭಾಕಾತ್ ಹುಸೇನ್ ನಿವೃತ್ತಿಯಾಗಲಿದ್ದಾರೆ.
ಜಿ.ಸತೀಶ್, ರಂಗೇಗೌಡ, ಎಚ್.ಸಿ.ಕಾಂತರಾಜು ಅವರು ಜುಲೈ 31ರಂದು ನಿವೃತ್ತಿಹೊಂದಿದರೆ, ಎಸ್.ಶೇಖರ್, ಕೆ.ಬಿ.ಮಾರ್ಕಂಡೇಯ, ಕೆ.ಡಿ.ಉಡಪುಡಿ ಹಾಗೂ ಜಾವಿದ್ ಮುಮ್ತಾಜ್ ಮೇ 31ರಂದು ನಿವೃತ್ತಿ ಹೊಂದಲಿದ್ದಾರೆ. ಬಿ.ಎಂ.ಪರಮೇಶ್ವರ್ ನ.30ರಂದು ನಿವೃತ್ತಿಯಾದರೆ, ಎಸ್.ಶಾಂತಪ್ಪ ಡಿ.31ರಂದು ಸೇವೆಯಿಂದ ನಿವೃತ್ತಿ ಹೊಂದಲಿದ್ದಾರೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಪ್ರಕಟಿಸಿದೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications