2ಜಿ ಹಗರಣ ಯುಪಿಎ ನಂಬಿಕಾರ್ಹತೆ ಧ್ವಂಸ ಮಾಡಿತು : ದಿನೇಶ್ ಗುಂಡೂರಾವ್
ಬೆಂಗಳೂರು, ಡಿಸೆಂಬರ್ 21 : "ದೇಶದ ಬೊಕ್ಕಸಕ್ಕೆ 1.76 ಲಕ್ಷ ಕೋಟಿ ರುಪಾಯಿಯಷ್ಟು ನಷ್ಟವಾಗಿದೆ ಎಂದು ಮಾಜಿ ಮಹಾ ಲೆಕ್ಕ ಪರಿಶೋಧಕ ವಿನೋದ್ ರೈ ಅವರು ಕೋಲಾಹಲವೆಬ್ಬಿಸುವಂಥ ವರದಿ ನೀಡಿದ್ದ ಯುಪಿಎ ಸರಕಾರದ ನಂಬಿಕಾರ್ಹತೆಯನ್ನೇ ಧ್ವಂಸ ಮಾಡಿತು."
ಹೀಗೆಂದು 2ಜಿ ತರಂಗಗುಚ್ಛ ಹಗರಣದಲ್ಲಿ ಎಲ್ಲ ಆರೋಪಿಗಳನ್ನು ಖುಲಾಸೆ ಮಾಡಿ ಸಿಬಿಐ ವಿಶೇಷ ನ್ಯಾಯಾಲಯ, ಡಿಸೆಂಬರ್ 21ರಂದು ಮಹತ್ವದ ತೀರ್ಪು ನೀಡಿದ ನಂತರ ಹೇಳಿಕೆ ನೀಡಿದವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯನಿರ್ವಾಹಕ ಅಧ್ಯಕ್ಷ ಮತ್ತು ಎಐಸಿಸಿ ರಾಷ್ಟ್ರೀಯ ವಕ್ತಾರರಾಗಿರುವ ದಿನೇಶ್ ಗುಂಡೂರಾವ್ ಅವರು.

2ಜಿ ಹಗರಣದಲ್ಲಿ ಡಿಎಂಕೆ ಪಕ್ಷದ ನಾಯಕ, ಮಾಜಿ ಟೆಲಿಕಾಂ ಸಚಿವ ಎ ರಾಜಾ, ಕನ್ನಿಮೋಳಿ ಮತ್ತಿತರರು ಭ್ರಷ್ಟಾಚಾರವೆಸಗಿದ್ದಾರೆ ಎಂದು ನಿರೂಪಿಸುವಲ್ಲಿ ಜಾರಿ ನಿರ್ದೇಶನಾಲಯವಾಗಲಿ, ಸಿಬಿಐ ಅಧಿಕಾರಿಗಳಾಗಲಿ ವಿಫಲವಾಗಿದ್ದರಿಂದ ಅವರೆಲ್ಲರನ್ನು ಕೋರ್ಟ್ ನಿರ್ದೋಷಿಯನ್ನಾಗಿ ಸಾರಿದೆ.
ದೇಶದ ಬೊಕ್ಕಸಕ್ಕೆ ಅಷ್ಟೊಂದು ನಷ್ಟವಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದರಿಂದ ಯುಪಿಎ ಸರಕಾರದ ನಂಬಿಕಾರ್ಹತೆಗೆ ಭಾರೀ ಪೆಟ್ಟು ಬಿದ್ದಿದ್ದು ಮಾತ್ರವಲ್ಲ, ಅದು 2014ರಲ್ಲಿ ನಡೆದ ಲೋಕಸಭಾ ಚುನಾವಣೆಯ ಮೇಲೆಯೂ ಭಾರೀ ದುಷ್ಪರಿಣಾಮ ಬೀರಿತು ಎಂದು ಅವರು ಅಕ್ರೋಶ ವ್ಯಕ್ತಪಡಿಸಿದರು.
2014ರ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷ ಅಭೂತಪೂರ್ವ ಜಯಗಳಿಸಿ, ಬಿಜೆಪಿ ಏಕಾಂಗಿಯಾಗಿ 282 (ಎನ್ಡಿಎ ಒಟ್ಟಾರೆ 336) ಸ್ಥಾನ ಗಳಿಸಿದ್ದರೆ, ಕಾಂಗ್ರೆಸ್ ಕೇವಲ 44 ಸ್ಥಾನಗಳನ್ನು ಮಾತ್ರ ಗಳಿಸಿ, ಹೀನಾಯವಾಗಿ ಸೋತಿತ್ತು.
ಕಾಂಗ್ರೆಸ್ ಪಕ್ಷದ ಮೇಲೆ 2ಜಿ ಹಗರಣ ಸೇರಿದಂತೆ ಇತರ ಹಗರಣಗಳ ಸುಳ್ಳು ಆರೋಪ ಹೊರಿಸಿದ್ದರಿಂದ ಚುನಾವಣೆಯಲ್ಲಿ ಸೋಲಬೇಕಾಯಿತು ಎಂಬುದು ದಿನೇಶ್ ಗುಂಡೂರಾವ್ ಅವರ ಮಾತಿನ ಅರ್ಥ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications