Breaking: Bengaluru rain: ಎರಡನೇ ಸಾವು ವರದಿ, ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಮೃತದೇಹ ಪತ್ತೆ
ಬೆಂಗಳೂರು, ಮೇ 22: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ (ಮೇ 22) ಮಧ್ಯಾಹ್ನ ಸುರಿದ ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಎರಡು ಅಮಾಯಕ ಜೀವಗಳು ಬಲಿಯಾಗಿವೆ. ಕಾರಿನಲ್ಲಿ ಒಬ್ಬರು ಮೃತಪಟ್ಟರೆ ಮತ್ತೊಬ್ಬರು ರಾಜಕಾಲುವೆಯಲ್ಲಿ ಕೊಚ್ಚಿಹೋಗಿದ್ದು, ಶವವಾಗಿ ಪತ್ತೆಯಾದ ಧಾರುಣ ಘಟನೆ ನಡೆದಿದೆ.
ನಗರದಲ್ಲಿ ನೆನ್ನೆ ಮಧ್ಯಾಹ್ನ 3ಗಂಟೆ ಹೊತ್ತಿಗೆ ಜೋರು ಗಾಳಿ ಸಹಿತ ಕೆಲ ಕಾಲ ಆರ್ಭಟಿಸಿದ ಮಳೆಯಿಂದಾಗಿ ರಸ್ತೆ, ಅಂಡರ್ಪಾಸ್ ಸೇರಿದಂತೆ ಹಲವೆಡೆ ನೀರು ಉಕ್ಕಿ ಹರಿಯಿತು. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಆವಾಂತರ ಸೃಷ್ಟಿಸಿತು. ಈ ವೇಳೆ ಎರಡು ಪ್ರತ್ಯೇಕ ಕಡೆಗಳಲ್ಲಿ ಪ್ರಾಣ ಹಾನಿ ಸಂಭವಿಸಿದೆ.

ಬ್ಯಾಟರಾಯನಪುರದಲ್ಲಿ ಮಳೆ ಬಂದ ಸಂದರ್ಭದಲ್ಲಿ ರಾಜಕಾಲುವೆಯಲ್ಲಿ ವ್ಯಕ್ತಿಯೊಬ್ಬರು ಕೊಚ್ಚಿ ಹೋಗಿದ್ದರು. ಈ ಕುರಿತು ನಿರಂತರ ಶೋಧ ಕಾರ್ಯ ನಡೆಸಿದ ಬಳಿಕ ಇಂದು ಸೋಮವಾರ ಬೆಳಗ್ಗೆ ಮೃತದೇಹ ಪತ್ತೆಯಾಗಿದೆ. ಆತನನ್ನು ಲೋಕೇಶ್ ಎಂದು ಗುರುತಿಸಲಾಗಿದೆ. ಲೋಕೇಶ್ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆ ರವಾನೆ ಮಾಡಲಾಗಿದೆ.
ಲೋಕೇಶ್ ಕುಟುಂಬಸ್ಥರು, ಸ್ನೇಹಿತರ ಆಕ್ರಂದನ ಮುಗಿಲು ಮುಟ್ಟಿದೆ. ಮುಂಗಾರು ಮಳೆ ಆರಂಭಕ್ಕೂ ಇನ್ನು ವಾರಗಳು ಬಾಕಿ ಇವೆ. ಪೂರ್ವ ಮುಂಗಾರು ಮಳೆ ಅಬ್ಬರಕ್ಕೆ ಬೆಂಗಳೂರಿನಲ್ಲಿ ಒಂದೇ ದಿನ ಇಬ್ಬರು ಮೃತಪಟ್ಟ ಘಟನೆ ನಡೆದಿದೆ.
ಅಂಡರ್ಪಾಸ್ನಲ್ಲಿ ಸಿಲುಕಿ ಯುವತಿ ಸಾವು
ಭಾನುವಾರ ಮಧ್ಯಾಹ್ನ ಅರ್ಧ ಗಂಟೆ ಸುರಿದ ಮಳೆಗೆ ನಗರದ ಕೆ.ಆರ್. ವೃತ್ತದಲ್ಲಿ ರಸ್ತೆ ಅಂಡರ್ಪಾಸ್ನಲ್ಲಿ ಕಾರು ಸಿಲುಕಿತು. ಆ ಕಾರಿನಲ್ಲಿದ್ದ ಯುವತಿ ಮೃತಪಟ್ಟ ಘಟನೆ ನಡೆದಿದೆ. ಆಂಧ್ರಪ್ರದೇಶ ಮೂಲದ ಯುವತಿ ಬೆಂಳೂರಿನಲ್ಲಿ ಪ್ರತಿಷ್ಠಿತ ಇನ್ಫೋಸಿಸ್ ಉದ್ಯೋಗಿಯಾಗಿದ್ದರು.

ಅಂಡರ್ಪಾಸ್ನಲ್ಲಿ ಕಾರು ತೆಳುತ್ತಿದ್ದಂತೆ ಮುಂದೆ ಹೋಗಲಾಗದೇ ನಿಂತಿದೆ. ಕೂಡಲೇ ಕಾರಿನೊಳಕ್ಕೆ ನೀರು ಬರಲಾರಂಭಿಸಿದೆ. ದುರದೃಷ್ಟವಶಾತ್ ಕಾರಿನ ಬಾಲಗಿಲಾಗಲೇ, ಕಿಟಕಿಯಾಗಲಿ ತೆರೆಯಲು ಸಾಧ್ಯವಾಗಿಲ್ಲ. ಕೂಡಲೇ ಸ್ಥಳೀಯರು ನೆರವಿಗೆ ಧಾವಿಸಿ ಕಾರಿ ಮುಂದಿನ ಗ್ಲಾಸು ಒಡೆದು ಒಬ್ಬೊಬ್ಬರನ್ನಾಗಿ ಕಾಪಾಡಿದ್ದಾರೆ. ಅಷ್ಟರಲ್ಲಾಗಲೇ ಯುವತಿ ಕೊನೆಯುಸಿರೆಳೆದಿದ್ದಾರೆ. ವಿಷಯ ತಿಳಿದು ಮೃತದೇಹವಿದ್ದ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.
ಇಷ್ಟೇ ಅಲ್ಲದೇ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದು, ಮಾಲೀಕರು ನೀರು ಹೊರ ಹಾಕಲು ಪರದಾಡಿದ್ದಾರೆ. ನಗರದೆಲ್ಲಡೆ ಮರದ ಕೊಂಬೆಗಳು, ಮರಗಳು ಧರೆಗುರುಳಿ ಸಂಚಾರ ಅಸ್ತವೆಸ್ತವಾಗಿದೆ. ಇಂದು ಸಹ ಜೋರು ಮಳೆ ಬರಲಿದೆ.
-
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
IMD Weather Forecast: ದೇಶದ ಈ ಭಾಗಗಳಲ್ಲಿ ಮಾರ್ಚ್ ಅಂತ್ಯದಲ್ಲಿ ಭಾರೀ ಮಳೆ ಮುನ್ಸೂಚನೆ: ಐಎಂಡಿ ಎಚ್ಚರಿಕೆ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ












Click it and Unblock the Notifications