ಶೂಟೌಟ್ಗೆ ಬಲಿಯಾದ ಗೌತಮಿಗೆ 472 ಅಂಕಗಳು
ಬೆಂಗಳೂರು, ಮೇ 18 : ಸೋಮವಾರ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಬೆಂಗಳೂರಿನ ಕಾಡುಗೋಡಿಯ ಪ್ರಗತಿ ಕಾಲೇಜಿನ ಹಾಸ್ಟೆಲ್ನಲ್ಲಿ ಗುಂಡೇಟಿಗೆ ಬಲಿಯಾದ ಗೌತಮಿ ಶೇ 78.66ರಷ್ಟು ಫಲಿತಾಂಶ ಪಡೆದು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣಗೊಂಡಿದ್ದಾಳೆ.
ಗೌತಮಿಗಳಿಸಿರುವ ಒಟ್ಟು ಅಂಕ 472. ಕನ್ನಡ 76, ಇಂಗ್ಲಿಷ್ 88, ಭೌತಶಾಸ್ತ್ರ 62, ರಾಸಾಯನ ಶಾಸ್ತ್ರ 71, ಗಣಿತ 80, ಜೀವಶಾಸ್ತ್ರದಲ್ಲಿ 95. ಹೆಚ್ಚು ಅಂಕಗಳಿಸಿ ಓದು ಮುಂದುವರೆಸಬೇಕು ಎಂಬ ಕನಸು ಹೊತ್ತಿದ್ದ ಗೌತಮಿ ಅಟೆಂಡರ್ ಗುಂಡಿಗೆ ಬಲಿಯಾಗಿ ಚಿರನಿದ್ರೆಗೆ ಜಾರಿದ್ದಾಳೆ. [ಪ್ರತೀಕಾರಕ್ಕಾಗಿ ಅಟೆಂಡರ್ ಮಹೇಶ್ ಗೌತಮಿಯನ್ನು ಕೊಂದ]

ಘಟನೆ ವಿವರ : 2015ರ ಮಾರ್ಚ್ 31ರಂದು ರಾತ್ರಿ 10.30ರ ಸುಮಾರಿಗೆ ಕಾಡುಗೋಡಿಯ ಪ್ರಗತಿ ವಸತಿ ಕಾಲೇಜಿನ ಹಾಸ್ಟೆಲ್ಗೆ ನುಗ್ಗಿದ ಅಟೆಂಡರ್ ಮಹೇಶ್ ಗೌತಮಿ ಹಾಗೂ ಶಿರಿಷಾ ಮೇಲೆ ಗುಂಡಿನ ದಾಳಿ ನಡೆಸಿದ್ದ. ಗುಂಡಿನ ದಾಳಿಯಲ್ಲಿ ಗೌತಮಿ ಮೃತಪಟ್ಟರೆ, ಶಿರಿಷಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾಳೆ. [ದ್ವಿತೀಯ ಪಿಯು ವಿದ್ಯಾರ್ಥಿನಿ ಗುಂಡಿಗೆ ಬಲಿ]
ಗೌತಮಿ ಮೂಲತಃ ತುಮಕೂರು ಜಿಲ್ಲೆ ಪಾವಗಡದವಳು. ತಾಂತ್ರಿಕ ಶಿಕ್ಷಣದ ಬಗ್ಗೆ ಹೆಚ್ಚು ಆಸಕ್ತಿ ಹೊಂದಿದ್ದ ಗೌತಮಿ ಸಿಇಟಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದಳು. ಆಗ ಅವಳ ಕೋಣೆಗೆ ನುಗ್ಗಿದ್ದ ಮಹೇಶ್ ಕ್ಷುಲ್ಲಕ ಕಾರಣಕ್ಕೆ ಆಕೆಯ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದ.[ಪಿಯು ಫಲಿತಾಂಶ : ಯಾವ ಜಿಲ್ಲೆಗೆ ಯಾವ ಸ್ಥಾನ]
ಏ.1ರಂದು ಮಧ್ಯಾಹ್ನ ಮಹೇಶ್ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ. ಪೊಲೀಸರ ವಿಚಾರಣೆ ನಂತರ ಹತ್ಯೆಯ ಕಾರಣ ಬಹಿರಂಗವಾಗಿತ್ತು. ಮಹೇಶ್ ಹಾಸ್ಟೆಲ್ ಕ್ಯಾಂಪಸ್ನಲ್ಲಿ ಓಡಾಡಿದ್ದಕ್ಕೆ ಗೌತಮಿ ಮತ್ತು ಇತರ ವಿದ್ಯಾರ್ಥಿನಿಯರು ಆಕ್ಷೇಪ ವ್ಯಕ್ತಪಡಿಸಿದ್ದರು. ಇದಕ್ಕೆ ಪ್ರತೀಕಾರ ತೀರಿಸಿಕೊಳ್ಳಲು ಮಹೇಶ್ ಈ ಗುಂಡಿನ ದಾಳಿ ನಡೆಸಿದ್ದ.
-
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ












Click it and Unblock the Notifications