ದ್ವಿತೀಯ ಪಿಯು ಪೂರಕ ಪರೀಕ್ಷೆಗೆ ಶುಲ್ಕ ಪಾವತಿಸಲು ದಿನಾಂಕ ವಿಸ್ತರಣೆ
ಬೆಂಗಳೂರು, ಆಗಸ್ಟ್ 01: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದ ವಿದ್ಯಾರ್ಥಿಗಳ ಮರುಮೌಲ್ಯಮಾಪನ ಮತ್ತು ಮರು ಏಣಿಕೆಯ ಪ್ರಕ್ರಿಯೆ ಮುಕ್ತಾಯವಾಗಿ ಜುಲೈ 31ರಂದು ವಿದ್ಯಾರ್ಥಿಗಳ ಫಲಿತಾಂಶವನ್ನು ನೀಡಲಾಗಿತ್ತು. ಇದೀಗ ಅನುತ್ತೀರ್ಣರಾಗಿದ್ದ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶವನ್ನು ಪದವಿಪೂರ್ವ ಶಿಕ್ಷಣ ಇಲಾಖೆ ಮಾಡಿಕೊಟ್ಟಿದೆ. ಪರೀಕ್ಷಾ ಶುಲ್ಕವನ್ನು ಪಾವತಿ ಪರೀಕ್ಷೆಯನ್ನು ಬರೆಯಲು ಅವಕಾಶವನ್ನು ಮಾಡಿಕೊಟ್ಟಿದೆ.
ಏಪ್ರಿಲ್ ಮೇ 2022ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಗಳ ಮರು ಮೌಲ್ಯಮಾಪನ ಮತ್ತು ಮರು ಏಣಿಕೆ ಪ್ರಕ್ರಿಯೆಯ ಫಲಿತಾಂಶವನ್ನು ಜುಲೈ 31ರಂದು ಫಲಿತಾಂಶವನ್ನು ಪ್ರಕಟಿಸಲಾಗಿತ್ತು. ಪ್ರಕಟಿಸಿದ ಫಲಿತಾಂಶದಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಮಾತ್ರ ಆಗಸ್ಟ್ 2022ರಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಈ ಹಿಂದಿನ ದಂಡ ಶುಲ್ಕದೊಂದಿದೆ ನಿಗದಿತ ಪರೀಕ್ಷಾ ಶುಲ್ಕವನ್ನು ಪಾವತಿಸಲು ದಿನಾಂಕ 02.08.2022 ರಿಂದ 04.08.2022ರವರೆಗೆ ದಿನಾಂಕವನ್ನು ವಿಸ್ತರಿಸಿ ಆದೇಶವನ್ನು ಮಾಡಲಾಗಿದೆ.

ಪ್ರಾಂಶುಪಾಲರು ಪರೀಕ್ಷಾ ಶುಲ್ಕವನ್ನು ಪಾವತಿ ಮಾಡಿದ ವಿದ್ಯಾರ್ಥಿಗಳ ಮಾಹಿತಿಯನ್ನು ದಿನಾಂಕ 05.08.2022ರ ಒಳಗೆ ಸ್ಯಾಟ್ಸ್ ತಂತ್ರಾಂಶದಲ್ಲಿ ಎಂಟ್ರಿಯನ್ನು ಮಾಡಲು ತಿಳಿಸಿದೆ. ದಿನಾಂಕ 05.08.2022ರಂದೇ ಕೆ2 ಚಲನ್ ಮೂಲಕ ಖಜಾನೆಗೆ ಶುಲ್ಕವನ್ನು ಸಂದಾಯ ಮಾಡಿ ಅದೇ ದಿನದಂದು ವಿದ್ಯಾರ್ಥಿಗಳು ನೀಡಿ ಪರೀಕ್ಷಾ ಅರ್ಜಿಗಳು , ಚೆಕ್ ಲಿಸ್ಟ್ ಮತ್ತು ಚಲನ್ ಗಳನ್ನು ಆಯಾ ಜಿಲ್ಲಾ ಉಪನಿರ್ದೇಶಕರಿಗೆ ಸಲ್ಲಿಸಲು ತಿಳಿಸಿದೆ.
ಜಿಲ್ಲಾ ಉಪನಿರ್ದೇಶಕರುಗಳು ಪ್ರಾಂಶುಪಾಲರಿಂದ ಸ್ವೀಕರಿಸಿದ ಅರ್ಜಿಗಳನ್ನು ಸ್ಯಾಟ್ಸ್ ತಂತ್ರಾಂಶದಲ್ಲಿ ಇರುವುದನ್ನು ಖಚಿತಪಡಿಸಿಕೊಂಡು ಚೆಕ್ ಲಿಸ್ಟ್ ಪರಿಶೀಲಿಸಬೇಕು. ಪ್ರಾಂಶುಪಾಲರಿಂದ ಮುಚ್ಚಳಿಕೆ ಪಡೆದು ನಂತರ ಕಾಲೇಜುವಾರು ಕ್ರೋಢಿಕೃತ ಪಟ್ಟಿಯನ್ನು, ಹಣವನ್ನು ಪಾವತಿಸಿದ ಮೂಲ ಚಲನ್ ಹಾಗೂ ಮುಚ್ಚಳಿಕೆ ಪತ್ರವನ್ನು ದಿನಾಂಕ 06.08.2022ರಂದು ಕೇಂದ್ರ ಕಚೇರಿಗೆ ಸಲ್ಲಿಸಲು ಸೂಚಿಸಿದೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಸರ್ಕಾರಿ PU ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಬರೋಬ್ಬರಿ 9,383 ರೂ. ಲಕ್ಷ ಅನುದಾನ ಮಂಜೂರು -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ












Click it and Unblock the Notifications