ಸ್ವಾತಂತ್ರ್ಯೋತ್ಸವ: 3.33 ಲಕ್ಷ ಪ್ರಯಾಣಿಕರಿಂದ ಮೆಟ್ರೋ ಬಳಕೆ
ಬೆಂಗಳೂರು, ಆಗಸ್ಟ್ 16: ಸ್ವಾತಂತ್ರ್ಯ ಪುಷ್ಪಪ್ರದರ್ಶನಕ್ಕೆ ಲಕ್ಷಾಂತರ ಮಂದಿ ಆಗಮಿಸಿದ ಕಾರಣ ನಮ್ಮ ಮೆಟ್ರೋದಲ್ಲಿ ಬುಧವಾರ ಜನದಟ್ಟಣೆ ವಿಪರೀತವಾಗಿತ್ತು. ಒಟ್ಟು 3.33 ಲಕ್ಷ ಮಂದಿ ಮೆಟ್ರೋ ಬಳಸಿದ್ದು, 33,204 ಲಾಲ್ಬಾಗ್ ಮೆಟ್ರೋವನ್ನು ಬಳಸಿದರು.
ಮೈಸೂರು ರಸ್ತೆ-ಬೈಯಪ್ಪನಹಳ್ಳಿ ನೇರಳೆ ಮಾರ್ಗದಲ್ಲಿ 1.45 ಲಕ್ಷ, ನಾಗಸಂದ್ರದಿಂದ-ಯಲಚೇನಹಳ್ಳಿ ಹಸಿರು ಮಾರ್ಗದಲ್ಲಿ 1.88 ಲಕ್ಷ ಮಂದಿ ಪ್ರಯಾಣಿಸಿದರು. ಲಾಲ್ಬಾಗ್ ನಿಲ್ದಾಣದಲ್ಲಿ ಬೆಳಗ್ಗೆ 5ಗಂಟೆಯಿಂದ ಸಂಜೆ 8ರವರೆಗೆ 33,204 ಮಂದಿ ಮೆಟ್ರೋ ಬಳಸಿದ್ದಾರೆ.
ಲಾಲ್ಬಾಗ್ನಿಂದ ಮರಳಿ ಬೇರೆಡೆಗೆ ಹೋಗುವವರಿಗೆ ಟೋಕನ್ ಬದಲು 30 ರೂ. ದರದ ಪೇಪರ್ ಟಿಕೆಟ್ ನೀಡಲಾಯಿತು. ಆಗಸ್ಟ್ 14ರಂದು ಕೂಡ ಮೆಟ್ರೋ ದಟ್ಟಣೆಯಿಂದ ಕೂಡಿತ್ತು, ಲಾಲ್ಬಾಗ್ನಲ್ಲಿ ಪುಷ್ಪಪ್ರದರ್ಶನ ಇದ್ದುದರಿಂದ ಹಸಿರು ಮಾರ್ಗದ ಎಲ್ಲ ನಿಲ್ದಾಣಗಳಲ್ಲಿ ಜನದಟ್ಟಣೆ ಪ್ರತಿ ದಿನಕ್ಕಿಂತ ಅಧಿಕವಾಗಿತ್ತು. ನೇರಳೆ ಮಾರ್ಗದಿಂದಲೂ ಲಕ್ಷಾಂತರ ಜನರು ಲಾಲ್ಬಾಗ್ಗೆ ಪ್ರಯಾಣಿಸಿದ್ದರು.

ಹಾಗಾಗಿ ಮೆಜೆಸ್ಟಿಕ್ ಇಂಟರ್ಚೇಂಜ್ ನಿಲ್ದಾಣವು ಜನರಿಂದ ತುಂಬಿಹೋಗಿತ್ತು. ಹಸಿರು ಮಾರ್ಗದಲ್ಲಿ ಬೆಳಗ್ಗೆ 11ರಿಂದ ಸಂಜೆ 5ರವರೆಗೆ ಪ್ರತಿ 8 ನಿಮಿಷಕ್ಕೊಂದು ರೈಲು ಸೇವೆ ನೀಡುವ ಬದಲು ಒಂದು ನಿಮಿಷ ಕಡಿತಗೊಳಿಸಿ 7 ನಿಮಿಷಕ್ಕೊಂದು ರೈಲು ಕಾರ್ಯಾಚರಣೆಗೊಳಿಸಲಾಯಿತು. ನೇರಳೆ ಮಾರ್ಗದಲ್ಲಿ ಇದೇ ವಾಧಿಯಲ್ಲಿ ಪ್ರತಿ 6ರಿಂದ 8 ನಿಮಿಷಕ್ಕೊಂದು ರೈಲು ಕಾರ್ಯಾಚರಣೆಗೊಂಡಿತು.
-
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ












Click it and Unblock the Notifications