ಮಲ್ಲೇಶ್ವರಂ ಡಿಗ್ರಿ ಕಾಲೇಜಿನ ಅಭಿವೃದ್ಧಿಗೆ 3.5 ಕೋಟಿ ರೂ: ಅಶ್ವತ್ಥ ನಾರಾಯಣ
ಬೆಂಗಳೂರು, ಸೆಪ್ಟೆಂಬರ್ 03: ಮಲ್ಲೇಶ್ವರಂ 18ನೇ ಅಡ್ಡರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜನ್ನು 3.5 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಮತ್ತು ಕ್ಷೇತ್ರದ ಶಾಸಕ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ ವಾರ್ಷಿಕೋತ್ಸವದಲ್ಲಿ ಮಾತನಾಡಿದ ಅವರು, ಎನ್ಇಪಿ ಮೂಲಕ ಪರಿಕಲ್ಪನೆ ಆಧಾರಿತ ಕಲಿಕೆ ಜಾರಿಗೆ ಬಂದಿದೆ. ಸರಕಾರಿ ಕಾಲೇಜುಗಳಲ್ಲಿ ತಂತ್ರಜ್ಞಾನ ಅಳವಡಿಕೆ ಮೂಲಕ ಶೈಕ್ಷಣಿಕ ಕ್ರಾಂತಿಯನ್ನು ನಡೆಸಲಾಗುತ್ತಿದೆ. ಮೂರೂವರೆ ಕೋಟಿ ರೂ.ಗಳಲ್ಲಿ ಈ ಕಾಲೇಜಿಗೆ ಸುಸಜ್ಜಿತ ಸಭಾಂಗಣ, ಲಿಫ್ಟ್, ಪ್ರಯೋಗಾಲಯ, ಗ್ರಂಥಾಲಯ ಮತ್ತಿತರ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಅವರು ವಿವರಿಸಿದರು.
ವಿದ್ಯಾರ್ಥಿಗಳನ್ನು ಕೌಶಲ್ಯಾಭಿವೃದ್ಧಿ ಮೂಲಕ ಉದ್ಯಮಿಗಳನ್ನಾಗಿ ಮತ್ತು ಉದ್ಯೋಗಗಳಿಗೆ ಅರ್ಹರನ್ನಾಗಿ ಮಾಡಲಾಗುತ್ತಿದೆ. ಜತೆಗೆ ಕಾಲೇಜುಗಳಿಗೆ ಆರ್ಥಿಕ ಸ್ವಾತಂತ್ರ್ಯ ಮತ್ತು ಸ್ವಾಯತ್ತತೆ ನೀಡಲಾಗುತ್ತಿದೆ. ರಾಜ್ಯದಲ್ಲಿ 11 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ತಾಂತ್ರಿಕ ಕೌಶಲ್ಯ ಕಲಿಯುತ್ತಿದ್ದಾರೆ. ಜತೆಗೆ ಇದು ಪಠ್ಯಕ್ರಮದ ಭಾಗವಾಗಿದೆ ಎಂದು ಸಚಿವರು ಹೇಳಿದರು.

ಪತ್ರಕರ್ತ ಎಚ್ ಆರ್ ರಂಗನಾಥ್ ಮಾತನಾಡಿ, ಯುವಜನರು ಪಠ್ಯದ ಕಲಿಕೆಯ ಜತೆಯಲ್ಲಿ ಬದುಕಿನ ಕಲೆಯನ್ನು ತಮ್ಮದಾಗಿ ಮಾಡಿಕೊಳ್ಳಬೇಕು ಎಂದ ಅವರು, ಉನ್ನತ ಶಿಕ್ಷಣ ಇಲಾಖೆಯಲ್ಲಿ ಜಾರಿಗೆ ತಂದಿರುವ ಯುಯುಸಿಎಂಎಸ್, ಎಲ್ ಎಂಎಸ್ ಹಾಗೂ ಆನ್ ಲೈನ್ ಮೂಲಕ ಕೊಡುತ್ತಿರುವ ಅಲ್ಪಾವಧಿ ಕೋರ್ಸ್ ಗಳನ್ನು ಕಲಿಸುತ್ತಿರುವ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಮುಖ್ಯ ಅತಿಥಿಯಾಗಿದ್ದ ಮತ್ತೋರ್ವ ಹಿರಿಯ ಪತ್ರಕರ್ತ ಪಿ.ರಾಮಯ್ಯ ಅವರು, "ಈಗಿನ ಮಕ್ಕಳಿಗೆ ಹೆಚ್ಚು ಅನುಕೂಲಗಳಿವೆ. ಆಧುನಿಕ ಜಗತ್ತಿಗೆ ಬೇಕಾದ ಅರಿವನ್ನು ಸಂಪಾದಿಸಿಕೊಳ್ಳುವುದು ಈಗ ಮುಖ್ಯವಾಗಿದೆ," ಎಂದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಪ್ರೊ.ಪ್ರತಿಭಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜು ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಪ್ರೊ.ಶೈಲಜಾ ಉಪಸ್ಥಿತರಿದ್ದರು.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?












Click it and Unblock the Notifications