ಬೆಂಗಳೂರಿನ ಏರ್ ಪೋರ್ಟ್ ನಿಂದ 3 ಕೋಟಿ ಪ್ರಯಾಣಿಕರ ಪ್ರಯಾಣ
ಬೆಂಗಳೂರು, ಜನವರಿ.28: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಒಂದೇ ವರ್ಷದಲ್ಲಿ 3 ಕೋಟಿ 36 ಲಕ್ಷ 50 ಸಾವಿರಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣ ಮಾಡಿದ್ದಾರೆ ಎಂದು ವರದಿಯಾಗಿದೆ. ಕಳದೆ 2018ರ ವರ್ಷಕ್ಕೆ ಹೋಲಿಸಿ ನೋಡಿದಾಗ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ.4.1ರಷ್ಟು ಏರಿಕೆ ಕಂಡು ಬಂದಿದೆ.
2019ರ ಸಾಲಿನಲ್ಲಿ 3.36 ಕೋಟಿ ಜನರು ಪ್ರಯಾಣಿಸಿರುವ ಬಗ್ಗೆ ದಾಖಲಾಗಿದ್ದು, ಕಳೆದ 2018ರಲ್ಲಿ 3 ಕೋಟಿ 23 ಲಕ್ಷ 30 ಸಾವಿರ ಪ್ರಯಾಣಿಕರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಯಾಣಿಸಿದ್ದರು ಎಂದು ತಿಳಿದು ಬಂದಿದೆ.
ಇನ್ನು, 3.36 ಕೋಟಿ ಪ್ರಯಾಣಿಕರ ಪೈಕಿ 2.87 ಕೋಟಿ ಅಂತರ್ ದೇಶೀಯ ಪ್ರಯಾಣಿಕರಾಗಿದ್ದು, 40 ಲಕ್ಷ 87 ಸಾವಿರ ಅಂತಾರಾಷ್ಟ್ರೀಯ ಪ್ರಯಾಣಿಕರು ಎಂದು ವರದಿಯಾಗಿದೆ. ಕಳೆದ 2018ರ ಸಾಲಿಗೆ ಹೋಲಿಸಿ ನೋಡಿದಾಗ ಅಂತರ್ ದೇಶೀಯ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ.2.6ರಷ್ಟು ಏರಿಕೆ ಕಂಡಿದ್ದು, ಅಂತಾರಾಷ್ಟ್ರೀಯ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ.14ರಷ್ಟು ಹೆಚ್ಚಳವಾಗಿದೆ.

5 ವರ್ಷಗಳಲ್ಲಿ 6 ಕೋಟಿ ಪ್ರಯಾಣಿಕರನ್ನು ತಲುಪುವ ಗುರಿ
ಕಳೆದ 2018ಕ್ಕೆ ಹೋಲಿಸಿದರೆ 2019ರ ಸಾಲಿನಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದ ಏರಿಕೆ ಕಂಡಿದೆ. ಮುಂದಿನ 5 ವರ್ಷಗಳಲ್ಲಿ ಈ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸಲು ಆಡಳಿತ ಮಂಡಳಿ ತೀರ್ಮಾನಿಸಿದೆ. 2025ರ ವೇಳೆಗೆ ವಾರ್ಷಿಕ ಪ್ರಯಾಣಿಕರ ಸಂಖ್ಯೆಯನ್ನು 5 ರಿಂದ 6 ಕೋಟಿಗೆ ಹೆಚ್ಚಿಸುವ ಗುರಿಯನ್ನು ಹೊಂದಲಾಗಿದೆ.

13 ಸಾವಿರ ಕೋಟಿ ಏರ್ ಪೋರ್ಟ್ ಅಭಿವೃದ್ಧಿಗೆ ಮೀಸಲು
ಇನ್ನು, ಪ್ರಯಾಣಿಕರನ್ನು ಆಕರ್ಷಿಸುವ ದೃಷ್ಟಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊಸ ಮೆರಗು ನೀಡಲು ಆಡಳಿತ ಮಂಡಳಿ ತೀರ್ಮಾನಿಸಿದೆ. ಏರ್ ಪೋರ್ಟ್ ಅಭಿವೃದ್ಧಿಪಡಿಸಲು ಹಾಗೂ ಮೂಲಸೌಕರ್ಯಗಳನ್ನು ವಿಸ್ತರಿಸಲು 13 ಸಾವಿರ ಕೋಟಿ ರುಪಾಯಿ ಹೂಡಿಕೆ ಮಾಡಲಾಗುತ್ತದೆ ಎಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಿಇಓ ಹರಿ ಮರಾರ್ ತಿಳಿಸಿದ್ದಾರೆ.

ಅತಿಹೆಚ್ಚು ಪ್ರಯಾಣಿಕರು ಸಂಚರಿಸಿದ್ದೇ ದೆಹಲಿ, ಮುಂಬೈಗೆ
ಬೆಂಗಳೂರಿನ ಹೊರವಲಯ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ದೇಶದ ಮೂರನೇ ಅತಿದೊಡ್ಡ ವಿಮಾನ ನಿಲ್ದಾಣ ಎನಿಸಿದೆ. ಬೆಂಗಳೂರು ಏರ್ ಪೋರ್ಟ್ ನಿಂದ ದೆಹಲಿ ಮತ್ತು ಮುಂಬೈಗೆ ಅತಿಹೆಚ್ಚು ಪ್ರಯಾಣಿಕರು ಪ್ರಯಾಣಿಸಿದ್ದಾರೆ ಎಂದು ವರದಿಯಾಗಿದೆ. ಇನ್ನು, ವಿದೇಶಗಳ ಪೈಕಿ ಸಿಂಗಾಪುರ್ ಹಾಗೂ ದುಬೈಗೆ ಅತಿಹೆಚ್ಚು ಮಂದಿ ಪ್ರಯಾಣಿಸಿರುವ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಮನರಂಜನೆ ನೀಡಲು ಹೊಸ ಯೋಜನೆ ರೂಪಿಸಿದ ಕೆಐಎಎಲ್
ಇತ್ತೀಚಿಗಷ್ಟೇ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಡಳಿತ ಮಂಡಳಿಯು ಒಪ್ಪಂದವೊಂದಕ್ಕೆ ಸಹಿ ಹಾಕಿದೆ. 2021ರ ವೇಳೆಗೆ ಪ್ರಯಾಣಿಕರಿಗೆ ಮನರಂಜನೆ ನೀಡಲು ಸಂಗೀತ ಕಾರ್ಯಕ್ರಮ, ಕ್ರೀಡಾಕೂಟ ಹಾಗೂ ಎಕ್ಸಿಬಿಷನ್ ಆಯೋಜನೆ ಮಾಡಲಾಗುತ್ತದೆ. ಬೆಂಗಳೂರು ವಿಮಾನ ನಿಲ್ದಾಣ ಕೇವಲ ಪ್ರಯಾಣಕ್ಕಷ್ಟೇ ಸೀಮಿತವಾಗದಂತೆ ಜನರನ್ನು ಆಕರ್ಷಿಸಲು ಈ ರೀತಿಯ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ ಎಂದು ಕೆಐಎಎಲ್ ಸಿಇಓ ಹರಿ ಮರಾರ್ ತಿಳಿಸಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications