ಬೆಂಗಳೂರಿಗೆ ಪರ್ಯಾಯವಾಗಿ 3 ಹೊಸ ನಗರಗಳ ಅಭಿವೃದ್ಧಿ: ಡಿ.ಕೆ ಶಿವಕುಮಾರ್
ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಜನಸಂಖ್ಯೆ, ಮಿತಿ ಮೀರಿದ ವಾಹನಗಳ ಸಂಖ್ಯೆ ಹಾಗೂ ಟ್ರಾಫಿಕ್ ಜಾಮ್ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಹೊಸ ನಗರಗಳ ಅಭಿವೃದ್ಧಿ ಯೋಜನೆ ರೂಪಿಸುತ್ತಿರುವುದಾಗಿ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.
ಬೆಂಗಳೂರು ನಗರವು ಬೃಹದಾಕಾರವಾಗಿ ಬೆಳೆಯುತ್ತಿದೆ. ಇದೀಗ ಬೆಂಗಳೂರಿನ ಮೇಲೆ ಒತ್ತಡ ಕಡಿಮೆ ಮಾಡುವುದು ಹಾಗೂ ಬೆಂಗಳೂರಿಗೆ ಪರ್ಯಾಯವಾಗಿ ಮೂರು ಹೊಸ ನಗರಗಳನ್ನು ಬೆಂಗಳೂರು ಹೊರ ವಲಯದಲ್ಲಿ ಅಭಿವೃದ್ಧಿ ಮಾಡುವುದಾಗಿ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಘೋಷಣೆ ಮಾಡಿದ್ದಾರೆ. ಬೆಂಗಳೂರು ಹಾಗೂ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳಿಗೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಹೊಸ ಹೊಸ ಘೋಷಣೆಗಳನ್ನು ಮಾಡುತ್ತಿದ್ದು, ಈ ಮೂರು ನಗರಗಳ ಅಭಿವೃದ್ಧಿ ವಿಚಾರವು ಇದಕ್ಕೆ ಮತ್ತೊಂದು ಹೊಸ ಸೇರ್ಪಡೆಯಾದಂತೆ ಆಗಿದೆ.

ನಗರದ ಮೂಲಸೌಕರ್ಯದ ಮೇಲೆ ಹೆಚ್ಚುತ್ತಿರುವ ಒತ್ತಡವನ್ನು ರಾಜ್ಯ ಕಾಂಗ್ರೆಸ್ ಸರ್ಕಾರವು ಗಂಭೀರವಾಗಿ ಪರಿಗಣಿಸಿದ್ದು, ಈ ಸವಾಲನ್ನು ಎದುರಿಸಲು ಪರ್ಯಾಯ ಮಾರ್ಗ ಕಂಡುಕೊಳ್ಳುತ್ತಿರುವುದಾಗಿ ಹೇಳಿದೆ. ಬೆಂಗಳೂರಿನ ಭವಿಷ್ಯದ ದೃಷ್ಟಿಯಿಂದ ದೀರ್ಘಾವಧಿಯ ಪರಿಹಾರವಾಗಿ ಮೂರು ಹೊಸ ನಗರಗಳ ಅಭಿವೃದ್ಧಿ ಪ್ರಸ್ತಾವನೆಯನ್ನು ಮುಂದಿರಿಸಿದ್ದಾರೆ.
ಬೆಂಗಳೂರಿನ ಹೊರಗೆ 3 ಹೊಸ ನಗರಗಳ ಅಭಿವೃದ್ಧಿ
ಇನ್ನು ಈ ಯೋಜನೆಯ ಭಾಗವಾಗಿ ಬೆಂಗಳೂರಿನ ಹೊರ ಭಾಗದ ಬಿಡದಿ, ಸೋಲೂರು ಹಾಗೂ ನಂದಗುಡಿ ಪ್ರದೇಶಗಳನ್ನು ಮೂರು ಹೊಸ ನಗರಗಳನ್ನಾಗಿ ಅಭಿವೃದ್ಧಿ ಮಾಡುವುದಾಗಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಈ ಮೂರು ಪ್ರದೇಶಗಳು ಸಹ ಬೆಂಗಳೂರಿನ ಹೊರ ವಲಯದಲ್ಲಿವೆ. ಈ ಪ್ರದೇಶಗಳನ್ನು ಅಗತ್ಯ ಮೂಲಸೌಕರ್ಯ, ಉದ್ಯೋಗಾವಕಾಶಗಳು ಮತ್ತು ನಗರ ಸೌಲಭ್ಯಗಳೊಂದಿಗೆ ಅಭಿವೃದ್ಧಿಪಡಿಸುವ ಗುರಿಯನ್ನು ರಾಜ್ಯ ಸರ್ಕಾರ ಹಾಕಿಕೊಂಡಿದೆ. ಬೆಂಗಳೂರಿನಲ್ಲಿ ಇರುವ ಪ್ರಮುಖ ಹಾಗೂ ಅಗತ್ಯವಾದ ಸೌಕರ್ಯಗಳನ್ನು ಈ ಮೂರು ನಗರಗಳಲ್ಲೂ ಅಭಿವೃದ್ಧಿಪಡಿಸುವುದಕ್ಕೆ ಯೋಜನೆ ರೂಪಿಸಿಕೊಳ್ಳುತ್ತಿರುವುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.
ಬೆಂಗಳೂರಿನ ಜನಸಂಖ್ಯೆ ಹೆಚ್ಚಳ
ಸಿಲಿಕಾನ್ಸಿಟಿ ಬೆಂಗಳೂರಿನಲ್ಲಿ ದಿನದಿಂದ ಜನಸಂಖ್ಯೆ ಹೆಚ್ಚಳವಾಗುತ್ತಿದೆ. ಇದರ ಪರಿಣಾಮ ಬೆಂಗಳೂರು ಮೂಲಸೌಕರ್ಯ ಸೇರಿದಂತೆ ವಿವಿಧ ಕ್ಷೇತ್ರಗಳ ಮೇಲೆ ಭಾರೀ ಒತ್ತಡ ನಿರ್ಮಾಣವಾಗುತ್ತಿದೆ. ಇದನ್ನು ನಿಯಂತ್ರಿಸುವ ಉದ್ದೇಶದಿಂದ ಈ ಮೂರು ಹೊಸ ನಗರಗಳ ಅಭಿವೃದ್ಧಿ ಮಾಡುವುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನ ಜನಸಂಖ್ಯೆಯು ಅಂದಾಜು 1.4 ಕೋಟಿಯಷ್ಟಿದೆ. ಅಲ್ಲದೇ ಸುಮಾರು ಎರಡು ಲಕ್ಷ ವಿದೇಶಿ ಪಾಸ್ಪೋರ್ಟ್ ಹೊಂದಿರುವವರು ಸಹ ಇಲ್ಲಿ ನೆಲೆಸಿದ್ದಾರೆ.
ನಗರದ ಹೊರ ಪ್ರದೇಶದಲ್ಲಿ ಪೂರ್ಣ ಪ್ರಮಾಣದ ಸೌಲಭ್ಯಗಳನ್ನು ಒದಗಿಸುವುದರಿಂದ ಬೆಂಗಳೂರಿನೊಳಗಿನ ಜನಸಂಖ್ಯಾ ಸಾಂದ್ರತೆಯನ್ನು ನಿಯಂತ್ರಿಸಲು, ನಗರಕ್ಕೆ ದೈನಂದಿನ ಒತ್ತಡವನ್ನು ಕಡಿಮೆ ಮಾಡಲು ಮತ್ತು ವಾಹನ ದಟ್ಟಣೆಯನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ ಎಂದು ನಿರೀಕ್ಷಿಸಲಾಗಿದೆ.
ಬ್ರ್ಯಾಂಡ್ ಬೆಂಗಳೂರು ಬಳಕೆ: ಇನ್ನು ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನ ಬ್ರ್ಯಾಂಡ್ ವ್ಯಾಲ್ಯೂ ಬಳಸಿಕೊಂಡು ಬೆಂಗಳೂರು ಹಾಗೂ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿಗೆ ರಾಜ್ಯ ಕಾಂಗ್ರೆಸ್ ಸರ್ಕಾರವು ಮುಂದಾಗಿದೆ. ಇದರಲ್ಲಿ ಮುಖ್ಯವಾಗಿ ಡಿ.ಕೆ ಶಿವಕುಮಾರ್ ಅವರು ಹಲವು ಯೋಜನೆಗಳನ್ನು ರೂಪಿಸಿಕೊಳ್ಳುತ್ತಿದ್ದಾರೆ.
-
IPL 2026 Free Ticket: ರಾಜ್ಯದ ಶಾಸಕರಿಗೆ ಪ್ರತಿ ಪಂದ್ಯಕ್ಕೂ 3 ಟಿಕೆಟ್ ಉಚಿತ; ಡಿ.ಕೆ.ಶಿವಕುಮಾರ್ -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್











Click it and Unblock the Notifications