ಎಕ್ಸ್ರೇನಲ್ಲಿ ನೋಡಿ ಬಾಲಕನ ಹೊಟ್ಟೆಯಲ್ಲಿ ಗಣೇಶ ವಿಗ್ರಹ ಪತ್ತೆ !
ಬೆಂಗಳೂರು, ಜು. 24: ಮೂರು ವರ್ಷದ ಬಾಲಕನ ಹೊಟ್ಟೆಯಲ್ಲಿ ಗಣೇಶ ವಿಗ್ರಹ ಪತ್ತೆಯಾಗಿದೆ ! ಇದೇನಿದು ದೇವರ ಅವತಾರ ಎಂದು ಅಚ್ಚರಿ ಪಡಬೇಡಿ. ಆಟ ಆಡುತ್ತಿದ್ದ ಮೂರು ವರ್ಷದ ಮಗು ಗಣೇಶನ ಪುಟ್ಟ ವಿಗ್ರಹ ನುಂಗಿ ಜೀವವನ್ನೇ ಅಪಾಯಕ್ಕೆ ಒಡ್ಡಿಕೊಂಡಿತ್ತು. ಪೋಷಕರ ಸಮಯ ಪ್ರಜ್ಞೆಯಿಂದ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ಮೂಲಕ ವಿಗ್ರಹ ಹೊರ ತೆಗೆದು ಜೀವ ಉಳಿಸಿದ್ದಾರೆ.
ಹೌದು ಇಂತಹ ಅಪರೂಪದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೂರು ವರ್ಷದ ಮಗು ಆಟ ಆಡುವ ವೇಳೆ ಗಣೇಶನ ವಿಗ್ರಹವನ್ನು ಆಕಸ್ಮಿಕವಾಗಿ ನುಂಗಿದೆ. ಉಸಿರಾಟಕ್ಕೂ ಒದ್ದಾಡುತ್ತಿದ್ದ ಮಗುವನ್ನು ಗಮನಿಸಿದ ಪೋಷಕರು ಕೂಡಲೇ ಹಳೇ ಏರ್ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮೊದಲು ಎಕ್ಸ್ ರೇ ಮಾಡಿದ ಕೂಡಲೇ ಗಣೇಶನ ವಿಗ್ರಹ ಹೊಟ್ಟೆಯಲ್ಲಿರುವುದು ಗೊತ್ತಾಗಿದೆ. ಒಂದು ಗಂಟೆ ಕಾಲ ಶಸ್ತ್ರ ಚಿಕಿತ್ಸೆ ನಡೆಸುವ ಮೂಲಕ ಮಗುವಿನ ಹೊಟ್ಟೆಯಲ್ಲಿದ್ದ ವಿಗ್ರಹವನ್ನು ವೈದ್ಯ ಶ್ರೀಕಾಂತ್ ಗಣೇಶ್ ಹೊರ ತೆಗೆದು ಜೀವ ಉಳಿಸಿದ್ದಾರೆ.

ಎಕ್ಸ್ ರೇ ಮಾಡಿಸಿದಾಗ ಗಂಟಲಲ್ಲಿ ಇದ್ದ ವಿಗ್ರಹ ಹೊಟ್ಟೆಯ ಭಾಗಕ್ಕೆ ಹೋಗಿತ್ತು. ಎಂಡೋಸ್ಕೊಪಿ ಮೂಲಕ ಹೊರ ತೆಗೆಯಲು ಯತ್ನಿಸಲಾಗಿದೆ. ಅನ್ನನಾಳದಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಈ ವಿಗ್ರಹವನ್ನು ತೆಗೆಯುವುದು ತುಂಬಾ ರಿಸ್ಕ್ ಆಗಿತ್ತು. ಅದನ್ನು ಹೊಟ್ಟೆ ಭಾಗಕ್ಕೆ ತಂದು ಎಂಡೋಸ್ಕೋಪಿ ಮೂಲಕ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಮಗು ದೇಹವನ್ನು ಉಲ್ಟಾ ತಿರುಗಿಸಿ ಶಸ್ತ್ರ ಚಿಕಿತ್ಸೆ ಮೂಲಕ ಹೊರ ತೆಗೆದಿದ್ದು ಮಗು ಆರೋಗ್ಯವಾಗಿದೆ.
Recommended Video
ಕೆಲ ಕಾಲ ವೀಕ್ಷಣೆ ಮಾಡಿ ಚೇತರಿಸಿಕೊಂಡ ಬಳಿಕ ಮನೆಗೆ ಕಳುಹಿಸಲಾಗಿದೆ ಎಂದು ಮಣಿಪಾಲ್ ಆಸ್ಪತ್ರೆ ವೈದ್ಯರು ಸುದ್ದಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಮಕ್ಕಳು ಆಟ ಆಡುವಾಗ ನುಂಗುವಂತಹ ಚಿಕ್ಕ ವಸ್ತುಗಳನ್ನು ಕೊಡಬಾರದು. ಕೊಟ್ಟರೆ ಏನಾಗುತ್ತದೆ ಎನ್ನುವುದಕ್ಕೆ ಇದು ಉದಾಹರಣೆ. ಮಕ್ಕಳು ಆಟ ಆಡುವಾಗ ಪಾಲಕರು ಎಚ್ಚರಿಕೆ ವಹಿಸಬೇಕು.
-
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications