ಸೇನಾಪಡೆಯಿಂದ ಬೆಂಗಳೂರಲ್ಲಿ ಗಿಡ ನೆಡುವ ಅಭಿಯಾನ
ಬೆಂಗಳೂರು, ಜೂನ್ 02 : ಉದ್ಯಾನ ನಗರಿ ಬೆಂಗಳೂರಿನಲ್ಲಿ ಗಿಡಗಳನ್ನು ಬೆಳೆಸುವ ಬೃಹತ್ ಅಭಿಯಾನವೊಂದು ಆರಂಭವಾಗಿದೆ. ಭಾರತೀಯ ಸೇನೆ ಮುಂದಿನ ಎರಡು ವಾರದಲ್ಲಿ ನಗರದಲ್ಲಿ 30,000 ಸಸಿಗಳನ್ನು ನೆಡುವ ಅಭಿಯಾನ ಹಮ್ಮಿಕೊಂಡಿದೆ.
ಬುಧವಾರ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಈ ಅಭಿಯಾನಕ್ಕೆ ಚಾಲನೆ ಸಿಕ್ಕಿದೆ. ಕರ್ನಾಟಕ ಮತ್ತು ಕೇರಳ ಉಪ ವಿಭಾಗದ ಜಿ.ಒ.ಸಿ. ಮೇಜರ್ ಜನರಲ್ ಕೆ.ಎಸ್. ನಿಜ್ಜಾರ್ ಗಿಡ ನೆಡುವ ಮೂಲಕ ಅಭಿಯಾನಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದ್ದಾರೆ. [ಗಿಡ ಬೆಳೆಸಿ, ಆಸ್ತಿ ತೆರಿಗೆಯಲ್ಲಿ ರಿಯಾಯಿತಿ ಪಡೆಯಿರಿ!]

ಅಭಿಯಾನದ ಕುರಿತು ಮಾತನಾಡಿದ ಕೆ.ಎಸ್.ನಿಜ್ಜಾರ್ ಅವರು, 'ಬೆಂಗಳೂರು ಉದ್ಯಾನ ನಗರಿ ಎಂದು ಹೆಸರು ಪಡೆದಿದೆ. ಇದಕ್ಕೆ ಭಾರತೀಯ ಸೇನೆ ತನ್ನ ಕೊಡುಗೆ ನೀಡುತ್ತಿದೆ. ನಗರದ ನಾನಾ ಪ್ರದೇಶದಲ್ಲಿರುವ ಮಿಲಿಟರಿ ಕ್ಯಾಂಪ್ಗಳಲ್ಲಿ 30 ಸಾವಿರ ಸಸಿಗಳನ್ನು ನೆಡಲು' ಉದ್ದೇಶಿಸಲಾಗಿದೆ ಎಂದರು. [ಸಾವಿನ ದವಡೆಯಿಂದ ಪಾರಾದ ಮರದಲ್ಲಿ ಮರುಜೀವ!]
5 ಲಕ್ಷ ಸಸಿ ನೆಡುವ ಗುರಿ : 'ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನಗರದಲ್ಲಿ 5 ಲಕ್ಷ ಸಸಿಗಳನ್ನು ನೆಡುವ ಗುರಿ ಹೊಂದಿದೆ' ಎಂದು ಬಿಬಿಎಂಪಿ ಮೇಯರ್ ಬಿ.ಎಸ್.ಮಂಜುನಾಥ ರೆಡ್ಡಿ ಹೇಳಿದ್ದಾರೆ. ಮೇಕ್ ಬೆಂಗಳೂರು ಗ್ರೀನ್ ಸಂಸ್ಥೆಯ ಸಹಯೋಗದಲ್ಲಿ ಪಾಲಿಕೆ ಕಚೇರಿ ಆವರಣದಲ್ಲಿ ಬುಧವಾರ ಸಸಿಗಳನ್ನು ನೆಟ್ಟ ಬಳಿಕ ಅವರು ಮಾತನಾಡಿದ ಅವರು, ಈ ವರ್ಷ ಬಿಬಿಎಂಪಿ 2 ಲಕ್ಷ ಸಸಿಗಳನ್ನು ನೆಡುವ ಗುರಿ ಹೊಂದಿದೆ ಎಂದರು. [ಒಂದು ಮರ ಕಡಿದಲ್ಲಿ ಹತ್ತು ಗಿಡ ನೆಡುತ್ತೇವೆ]

'ನಗರದಲ್ಲಿ ಸಸಿಗಳನ್ನು ನೆಡಲು ಬಜೆಟ್ನಲ್ಲಿ ಹಣ ಮೀಸಲಾಗಿಡಲಾಗಿದೆ. ಉಳಿದ 3 ಲಕ್ಷ ಸಸಿಗಳನ್ನು ಬೆಸ್ಕಾಂ, ಪೊಲೀಸ್, ತೋಟಗಾರಿಕೆ ಹಾಗೂ ಅರಣ್ಯ ಇಲಾಖೆ, ಶಾಲಾ, ಕಾಲೇಜುಗಳ ನೆರವಿನಿಂದ ನೆಡಲಾಗುವುದು' ಎಂದು ಮೇಯರ್ ಹೇಳಿದರು.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD









Click it and Unblock the Notifications