'ಸಿದ್ದರಾಮಯ್ಯ ಆ್ಯಪ್' ಗೆ ಹರಿದು ಬಂದ ದೂರು-ಸಲಹೆ
ಬೆಂಗಳೂರು, ಜನವರಿ 17: ರಾಜ್ಯದ ನಾಗರಿಕರಿಗಾಗಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರ ಸಂಪರ್ಕ ಸಾಧಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ 'ಸಿದ್ದರಾಮಯ್ಯ' ಆ್ಯಪ್ ಗೆ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಕಳೆದ ಎರಡು ತಿಂಗಳಿನಲ್ಲಿ 30 ಸಾವಿರಕ್ಕೂ ಅಧಿಕ ನಾಗರಿಕರು ಸಿದ್ದರಾಮಯ್ಯ ಅಪ್ಲಿಕೇಷನ್ ತಮ್ಮ ಮೊಬೈಲ್ ನಲ್ಲಿ ಡೌನ್ ಲೋಡ್ ಮಾಡಿಕೊಂಡಿದ್ದಾರೆ. ಈ ಕುರಿತು ಜನವರಿ 1 ರಂದು ಅಪ್ಲಿಕೇಷನ್ ನ ವಿಶ್ಲೇಷಣೆ ನಡೆಸಿರುವ ಕಾರ್ಯಾಲಯ ಅಪ್ಲಿಕೇಷನ್ ಗೆ ವ್ಯಕ್ತವಾಗಿರುವ ಪ್ರತಿಕ್ರಿಯೆಯನ್ನು ಪಟ್ಟಿ ಮಾಡಿದೆ.
ಒಟ್ಟು 31,359 ನಾಗರಿಕರು ಸಿದ್ದರಾಮಯ್ಯ ಅಪ್ಲಿಕೇಷನ್ ಡೌನ್ ಲೋಡ್ ಮಾಡಿಕೊಡಿದ್ದು ಆ ಪೈಕಿ 1780 ಜನರು ತಮ್ಮ ಕಳಕಳಿ ವ್ಯಕ್ತಪಡಿಸಿದ್ದಾರೆ ಸುಮಾರು 2,300 ಸಾವಿರ ಜನರು ಮುಖ್ಯಮಂತ್ರಿಗಳು ಸಲಹೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಕಾರ್ಯಾಲಯ ನಡೆಸಿದ ವಿಶ್ಲೇಷಣೆಯಲ್ಲಿ ತಿಳಿದುಬಂದಿದೆ.

ಸರ್ಕಾರದಲ್ಲಿ ಸಾರ್ವಜನಿಕರ ಸಹಭಾಗಿತ್ವ ಉದ್ದೇಶದಿಂದ ರಾಜ್ಯ ಸರ್ಕಾರ ಮುಖ್ಯಮಂತ್ರಿಗಳ ಸಿದ್ದರಾಮಯ್ಯ ಅಪ್ಲಿಕೇಷನ್ ಡೌನ್ ಲೋಡ್ ಮಾಡಿಕೊಳ್ಳುವಂತೆ ಎಸ್ ಎಂ ಎಸ್ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ವ್ಯಾಪಕವಾಗಿ ಮನವಿ ಮಾಡಿತ್ತು.
ಈ ಮನವಿಗೆ ಸ್ಪಂದಿಸಿ ಅದಕ್ಕೆ ಪ್ರತಿಕ್ರಿಯೆಯಾಗಿ ಅಪ್ಲಿಕೇಷನ್ ಡೌನ್ ಲೋಡ್ ಮಾಡಿಕೊಂಡವರ ಸಂಖ್ಯೆ 31,359 ಈ ಪೈಕಿ ಆಂಡ್ರಾಯ್ಡ್ ಮೊಬೈಲ್ ಗಳ ಮೂಲಕ ವಿವಿಧ ಇಲಾಖೆಗಳ ಕುರಿತಂತೆ 1634 ದೂರು ಗಳು ಬಂದಿವೆ.
ಆ ಪೈಕಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಂಬಂಧಿಸಿದಂತೆ 130 ವಿವಿಧ ಇಲಾಖೆಗಳ 119 ಲೋಕೋಪಯೋಗಿ ಇಲಾಖೆ ೯೨ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಗೆ ಸಂಬಂಧಿಸಿದ 91 ಸಲಹೆಗಳು ಬಂದಿವೆ. ಐಓಎಸ್ ಮಾದರಿ ಮೊಬೈಲ್ ಫೋನ್ ಮೂಲಕ 149 ದೂರುಗಳು ಬಂದಿದ್ದರೆ ಅದರಲ್ಲಿ ಲೋಕೋಪಯೋಗಿಗೆ ಸೇರಿದ 20 ಇತರೆ ಇಲಾಖೆಯ 14 ಸಾರಿಗೆ ಇಲಾಖೆಯ 10 ಇನ್ನು ಅಪ್ಲಿಕೇಷನ್ ಕುರಿತಂತೆ ಕೆಲವರು ವಿಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇನ್ನು ಸಿದ್ದರಾಮಯ್ಯ ಹೆಸರಿನಲ್ಲಿ ಅಪ್ಲಿಕೇಷನ್ ಬಿಡುಗಡೆ ಮಾಡಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಮುಖ್ಯಮಂತ್ರಿ ಆ್ಯಪ್ ಎಂಬ ಹೆಸರಿನಲ್ಲಿ ಅಪ್ಲಿಕೇಷನ್ ಬಿಡುಗಡೆ ಮಾಡಬೇಕಿತ್ತು ಎಂದು ಸಲಹೆ ನೀಡಿದ್ದಾರೆ. ಕೆಲವರು ಸಿದ್ದರಾಮಯ್ಯ ಅಪ್ಲಿಕೇಷನ್ ಎಂಬ ಹೆಸರಿನಲ್ಲಿ ಅಪ್ಲಿಕೇಷನ್ ಬಿಡುಗಡೆ ಮಾಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications