ಅನರ್ಹತೆ ಭೀತಿ ಎದುರಿಸುತ್ತಿದ್ದಾರೆ ಬಿಬಿಎಂಪಿಯ 32 ಸದಸ್ಯರು
ಬೆಂಗಳೂರು, ಮೇ 02: ಸಕಾಲಕ್ಕೆ ಆಸ್ತಿ ವಿವರ ಸಲ್ಲಿಸದ ಬಿಬಿಎಂಪಿ ಸದಸ್ಯರ ವಿರುದ್ಧ ಕ್ರಮಕೈಗೊಳ್ಳುವಂತೆ ಪ್ರಾದೇಶಿಕ ಆಯುಕ್ತರು ಬಿಬಿಎಂಪಿಗೆ ಪತ್ರ ಬರೆದಿದ್ದು, ಬಿಬಿಎಂಪಿಯ 32 ಕಾರ್ಪೊರೇಟರ್ಗಳಿಗೆ ಸದಸ್ಯತ್ವ ಕಳೆದುಕೊಳ್ಳುವ ಭೀತಿ ಎದುರಾಗಿದೆ.
2016 ರಲ್ಲಿ 14 ಮಂದಿಸ ಬಿಬಿಎಂಪಿ ಸದಸ್ಯರು ಮತ್ತು 2017 ರಲ್ಲಿ 16 ಮಂದಿ ಸದಸ್ಯರು ಸಕಾಲದಲ್ಲಿ ತಮ್ಮ ಆಸ್ತಿ ವಿವರವನ್ನು ಸಲ್ಲಿಸಿಲ್ಲ, ಅಲ್ಲದೆ ಆರು ಮಂದಿ ಸದಸ್ಯರು ಸುಳ್ಳು ದಾಖಲೆ ನೀಡಿದ್ದಾರೆಂದು ದೂರು ಸಹ ದಾಖಲಾಗಿದೆ. ಆದರೆ ಇವರಲ್ಲಿ ಇಬ್ಬರು ಸದಸ್ಯರು ಈಗಾಗಲೇ ಕಾಲವಾಗಿದ್ದಾರೆ, ಇನ್ನಿಬ್ಬರು ಎರಡೂ ವರ್ಷದಲ್ಲಿ ಸಕಾಲದಲ್ಲಿ ಮಾಹಿತಿ ನೀಡಿಲ್ಲ ಹಾಗಾಗಿ 32 ಮಂದಿ ಸದಸ್ಯರ ಮೇಲೆ ತೂಗುಕತ್ತಿ ತೂಗುತ್ತಿದೆ.
ನವ ಭಾರತಿ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷ ಅನಿಲ್ ಶೆಟ್ಟಿ ಎಂಬುವರು ಮಾಹಿತಿ ಹಕ್ಕಿನ ಅಡಿ ಪಡೆದ ದಾಖಲೆಗಳಿಂದ ಸದಸ್ಯರು ತಮ್ಮ ಆಸ್ತಿ ವಿವರ ಸಲ್ಲಿಸದಿರುವುದು ಪತ್ತೆ ಆಗಿದೆ. 2017 ರ ಅಕ್ಟೋಬರ್ನಲ್ಲಿಯೇ ಆಸ್ತಿ ವಿವರ ಸಲ್ಲಿಸಬೇಕಿತ್ತು, ಆದರೆ ಇನ್ನೂ ಹಲವರು ವಿವರ ಸಲ್ಲಿಸಿಲ್ಲ.

ನಿಯಮದ ಪ್ರಕಾರ ಸದಸ್ಯನಾಗಿ ಆಯ್ಕೆಯಾದ ವ್ಯಕ್ತಿಯು ತಿಂಗಳ ಒಳಗಾಗಿ ತನ್ನ ಹಾಗೂ ಹಿಂದೂ ಕಾಯ್ದೆಯ ಅನ್ವಯ ಕುಟುಂಬದ ಆಸ್ತಿ ಪ್ರಮಾಣ ಪತ್ರವನ್ನು ಸಲ್ಲಿಸಬೇಕು, ಅಲ್ಲದೆ ಪ್ರತಿ ವರ್ಷವೂ ಕಡ್ಡಾಯವಾಗಿ ಆಸ್ತಿ ವಿವರವನ್ನು ಸಲ್ಲಿಸಬೇಕಾಗಿರುತ್ತದೆ, ಇದು ತಪ್ಪಿದಲ್ಲಿ ಸದಸ್ಯತ್ವ ವಜಾ ಮಾಡಬಹುದಾಗಿರುತ್ತದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ












Click it and Unblock the Notifications