ಮಾನವ ಕಳ್ಳಸಾಗಣೆ: ಕೆಂಪೇಗೌಡ ಏರ್ಪೋರ್ಟ್ಲ್ಲಿ 32 ನರ್ಸ್ಗಳ ರಕ್ಷಣೆ
ಬೆಂಗಳೂರು, ನವೆಂಬರ್ 28: ಮಾನವ ಕಳ್ಳಸಾಗಣೆಯಲ್ಲಿ ಬಂಧಿಯಾಗಿದ್ದ ಕೇರಳ ಮೂಲದ 32 ಮಂದಿ ನರ್ಸ್ಗಳನ್ನು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಕ್ಷಣೆ ಮಾಡಲಾಗಿದೆ.
ಮಂಗಳೂರಿನಲ್ಲಿ ನರ್ಸಿಂಗ್ ಪದವಿ ಅಧ್ಯಯನ ಮಾಡಿದ ಕೇರಳ ಮೂಲದ 32 ನರ್ಸ್ ಗಳನ್ನು ರಕ್ಷಿಸಲಾಗಿದೆ. ಯುನಿವರ್ಸಿಟಿ ಆಫ್ ಟ್ರಡಿಶನಲ್ ಆಫ್ ಆರ್ಮೇನಿಯಾದಲ್ಲಿ ಜರ್ಮನ್ ಕಲಿಕೆಯ ಅಲ್ಪಾವಧಿ ಕೋರ್ಸ್ಗೆ ಕರೆದೊಯ್ಯುವ ನೆಪದಲ್ಲಿ ಇವರ ಮಾರಾಟಕ್ಕೆ ಜಾಲ ಹೆಣೆಯಲಾಗಿತ್ತು.
ಇಮಿಗ್ರೇಶನ್ ಅಧಿಕಾರಿಗಳು ನೀಡಿದ ದೂರಿನ ಮೇರೆಗೆ ಅಮೆರಿಕಕ್ಕೆ ಈ ನರ್ಸ್ ಗಳನ್ನು ಕರೆದೊಯ್ಯಲು ಯತ್ನಿಸಿದ ಟೋನಿ ಟಾಮ್ ಎಂಬಾತನನ್ನು ಬಂಧಿಸಲಾಗಿದೆ.

ಟೋನಿ ಟಾಮ್, ಮಂಗಳೂರಿನಲ್ಲಿ ಶಿಕ್ಷಣ ಸಲಹಾ ಸಂಸ್ಥೆ ನಡೆಸುತ್ತಿದ್ದ ಹಾಗೂ ಈ ಯುವತಿಯರಿಗೆ ಯುಟಿಎಂಎಯಲ್ಲಿ ಅಧ್ಯಯನಕ್ಕೆ ಅವಕಾಶ ಮಾಡಿಕೊಡುವುದಾಗಿ ಆಮಿಷವೊಡ್ಡಿದ್ದ.
ಘಟನೆ ವಿವರ: ಟಾಮ್ 32 ನರ್ಸ್ಗಳೊಂದಿಗೆ ರಾತ್ರಿ ವಿಮಾನ ನಿಲ್ದಾಣಕ್ಕೆ ಬಂದಿದ್ದ, ಮಂಗಳವಾರ ಮುಂಜಾನೆ 4 ಗಂಟೆಗೆ ಆರ್ಮೇನಿಯಾ ತೆರಳುವ ವಿಮಾನದಲ್ಲಿ ಕೊರೆದೊಯ್ಯಲು ಯೋಜನೆ ರೂಪಿಸಿದ್ದ ವಿಶ್ವವಿದ್ಯಾಲಯದಲ್ಲಿ ಆ ಕೋರ್ಸ್ ಇರುವ ಬಗ್ಗೆ ಇಮಿಗ್ರೇಶನ್ ಅಧಿಕಾರಿಗಳಿಗೆ ಸಂದೇಹ ಉಂಟಾಗಿ ತಕ್ಷಣ ಬಿಐಎಎಲ್ ಪೊಲೀಸರಿಗೆ ಮಾಹಿತಿ ನೀಡಿ ಬಳಿಕ ಆತನನ್ನು ವಶಕ್ಕೆ ಪಡೆದಿದ್ದಾರೆ.
-
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications