ರಾಜ್ಯದ ವಿವಿಧೆಡೆ 329 ಕೋಟಿ ರೂ. ವೆಚ್ಚದಲ್ಲಿ 17 ನೂತನ ಅಗ್ನಿಶಾಮಕ ಠಾಣೆ ನಿರ್ಮಾಣ: ಕೃಷ್ಣ ಬೈರೇಗೌಡ
ಬೆಂಗಳೂರು ಜನವರಿ 8: ಬೆಳೆಯುತ್ತಿರುವ ಮತ್ತು ಅಗತ್ಯವಿರುವ ನಗರಗಳಲ್ಲಿ ನೂತನ ಅಗ್ನಿಶಾಮಕ ಠಾಣೆಗಳನ್ನು ನಿರ್ಮಿಸಿ, ಜನರನ್ನು ಅಗ್ನಿ ಅವಘಡಗಳಿಂದ ಪಾರುಮಾಡಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಕೇಂದ್ರ ಸರ್ಕಾರದ 15ನೇ ಹಣಕಾಸು ಆಯೋಗದ ಮಾನದಂಡದ ಅನ್ವಯ ರಾಜ್ಯದ ಅಗ್ನಿಶಾಮಕ ದಳಕ್ಕೆ 2022-23 ರ ಸಾಲಿನಲ್ಲಿ 329 ಕೋಟಿ ರೂ. ಹಣ ಮಂಜೂರಾಗಿದೆ. ಈ ಹಣದ ಬಳಕೆಗೆ ಸಂಬಂಧಿಸಿದಂತೆ ಅಗ್ನಿ ಶಾಮಕದಳ ಪೊಲೀಸ್ ಮಹಾ ನಿರ್ದೇಶಕರಾದ ಕಮಲ್ ಪಂತ್ ಸೋಮವಾರ ವಿಕಾಸಸೌಧದಲ್ಲಿ ಕ್ರಿಯಾ ಯೋಜನೆ ಮಂಡಿಸಿದರು.

ಈ ವೇಳೆ ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದ ಸಚಿವ ಕೃಷ್ಣ ಬೈರೇಗೌಡ ಅವರು, "ರಾಜ್ಯದ ಅಗ್ನಿಶಾಮಕ ದಳಕ್ಕೆ ಕೇಂದ್ರದಿಂದ ಮಂಜೂರಾಗಿರುವ ಹಣವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು. ಈ ಹಣದಲ್ಲಿ ರಾಜ್ಯದ ವಿವಿಧೆಡೆ 17 ನೂತನ ಅಗ್ನಿಶಾಮಕ ಠಾಣೆಗಳ ನಿರ್ಮಾಣಕ್ಕೆ ಮುಂದಾಗಿರುವುದು ಉತ್ತಮ ಬೆಳವಣಿಗೆ. ಆದರೆ, ಈ ಠಾಣೆಗಳ ನಿರ್ಮಾಣ ನಾಮಕಾವಸ್ತೆಯಾಗಿರದೆ ವೇಗವಾಗಿ ಬೆಳೆಯುತ್ತಿರುವ ಮತ್ತು ಅಗತ್ಯವಿರುವ ನಗರಗಳಲ್ಲಿ ನೂತನ ಠಾಣೆಗಳು ನಿರ್ಮಾಣವಾಗಲಿ" ಎಂದು ಕಿವಿಮಾತು ಹೇಳಿದರು.
ನಗರದ ಭಾಗಗಳಲ್ಲಿ ಇತ್ತೀಚೆಗೆ ಅಗ್ನಿ ದುರಂತಗಳು ಹೆಚ್ಚುತ್ತಿವೆ. ಪ್ರಾಣಾಪಾಯಗಳ ಸಂಖ್ಯೆಯೂ ಹೆಚ್ಚುತ್ತಿವೆ. ಮುಂದಿನ ಬೇಸಿಗೆಯಲ್ಲಿ ಈ ಪ್ರಮಾಣ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದ್ದು, ಜನಸಾಮಾನ್ಯರಲ್ಲೂ ಆತಂಕ ಮೂಡಿದೆ. ಹೀಗಾಗಿ ಅಗ್ನಿ ದುರಂತಗಳು ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಹಿಸಬೇಕು. ಈ ನಿಟ್ಟಿನಲ್ಲಿ ಅಗ್ನಿ ಶಾಮಕದಳವನ್ನು ಉನ್ನತೀಕರಣಗೊಳಿಸಬೇಕು, ಆಧುನಿಕ ಉಪಕರಣಗಳನ್ನು ಖರೀದಿ ಮಾಡಬೇಕು ಮತ್ತು ಅಗತ್ಯವಿರುವ ಠಾಣೆಗಳಿಗೆ ಹೆಚ್ಚುವರಿಯಾಗಿ ನೂತನ ವಾಹನಗಳನ್ನು ಖರೀದಿಸಬೇಕು. ಈ ಕೆಲಸಗಳನ್ನು ಫೆಬ್ರವರಿ ಅಂತ್ಯದೊಳಗೆ ಮುಗಿಸಬೇಕಿದ್ದು, ಆದಷ್ಟು ಶೀಘ್ರದಲ್ಲಿ ಟೆಂಡರ್ ಪ್ರಕ್ರಿಯೆಯನ್ನು ಮುಗಿಸಿ ಎಂದು ಸೂಚಿಸಿದರು.

ಪ್ರಕೃತಿ ವಿಕೋಪದಲ್ಲೂ ಬೇಕಿದೆ ಅಗ್ನಿಶಾಮಕ ದಳದ ನೆರವು!
ಇದೇ ಸಂದರ್ಭದಲ್ಲಿ ಮಳೆ ಪ್ರವಾಹ ಸೇರಿದಂತೆ ಪ್ರಕೃತಿ ವಿಕೋಪದ ಬಗ್ಗೆಯೂ ಗಮನ ಸೆಳೆದ ಸಚಿವರು, "ಮಳೆಗಾಲದ ಸಂದರ್ಭದಲ್ಲಿ ರಾಜ್ಯದ ವಿವಿಧೆಡೆ ಮಳೆ ಪ್ರವಾಹದ ಘಟನೆಗಳು ಸಂಭವಿಸುತ್ತವೆ. ಮನೆ ಹಾಗೂ ಕೃಷಿ ಭೂಮಿಗಳಿಗೆ ನೀರು ನುಗ್ಗುವುದು, ಜನವಸತಿ ಪ್ರದೇಶಗಳ ಸಂಪರ್ಕ ರಸ್ತೆ ಕಡಿತವಾಗುವುದರಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಒಳಗಾಗುವ ಸಂದರ್ಭ ಎದುರಾಗುತ್ತವೆ. ಆದರೆ, ಇಂತಹ ಅನಾಹುತಗಳ ಸಂದರ್ಭದಲ್ಲಿ ಸಹಾಯಕ್ಕಾಗಿ ಎನ್ ಡಿಆರ್ ಎಫ್ ತುಕಡಿಗೆ ಕಾಯುವ ಮುನ್ನ ಅಗ್ನಿಶಾಮಕ ದಳ ತುರ್ತಾಗಿ ಜನ ರಕ್ಷಣೆಗೆ ಮುಂದಾಗಬೇಕು" ಎಂದು ಅಭಿಪ್ರಾಯಪಟ್ಟರು.
"ಪ್ರಕೃತಿ ವಿಕೋಪ ನಿರ್ವಹಣೆ ಸಂದರ್ಭದಲ್ಲಿ ಸಾರ್ವಜನಿಕ ಸಹಭಾಗಿತ್ವವನ್ನೂ ಬಳಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಆಪ್ತಮಿತ್ರ ಯೋಜನೆ ಜಾರಿಗೆ ತರಲಾಗಿದೆ. ಅಗ್ನಿಶಾಮಕ ದಳ ಈವರೆಗೆ ತನ್ನ ಸಿಬ್ಬಂದಿಗಳ ಜೊತೆಗೆ ಸಾವಿರಾರು ಸಾರ್ವಜನಿಕರಿಗೆ, ವಾಲೆಂಟರಿಗಳಿಗೆ ಪ್ರಾಕೃತಿಕ ವಿಕೋಪದ ಸಂದರ್ಭದಲ್ಲಿ ಹೇಗೆ ಕೆಲಸ ಮಾಡಬೇಕು ಎಂದು ತರಬೇತಿ ನೀಡಿದೆ. ಅಗತ್ಯವಿದ್ದರೆ ಮತ್ತಷ್ಟು ವಾಲೆಂಟರಿಗಳಿಗೆ ತರಬೇತಿ ನೀಡಿ ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು" ಎಂದು ಸಭೆಯಲ್ಲಿ ಸೂಚನೆ ನೀಡಲಾಯಿತು.
"ಹೊಸ ಉಪಕರಣ ಖರೀದಿಗೆ ಹಣದ ಅಗತ್ಯ ಇದ್ದರೆ ಅದನ್ನು ಪೂರೈಸಲು ಸರ್ಕಾರ ಬದ್ದವಾಗಿದೆ. ಆದರೆ, ಜನರ ಹಣ ಪೋಲಾಗದಂತೆ ಪ್ರಾಕೃತಿಕ ವಿಕೋಪಗಳ ನಿರ್ವಹಣೆಗೆ ಅಗ್ನಿಶಾಮಕ ದಳ ಪರಿಣಾಮಕಾರಿ ತಂಡ ರಚಿಸಬೇಕು. ರಾಜ್ಯ ಮೀಸಲು ಪಡೆಯನ್ನೂ ಈ ಕೆಲಸಕ್ಕೆ ಬಳಸಿಕೊಳ್ಳುವ ಬಗ್ಗೆ ಚಿಂತನೆ ನಡೆಸಬೇಕು" ಎಂದು ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸಲಹೆ ನೀಡಿದರು.
ಕೇಂದ್ರ ಸರ್ಕಾರದಿಂದ ಮಂಜೂರಾಗಿರುವ 329 ಕೋಟಿ ರೂ. ಹಣದ ಪೈಕಿ ನೂತನ ಅಗ್ನಿಶಾಮಕ ಠಾಣೆಗಳ ನಿರ್ಮಾಣಕ್ಕೆ 98.97 ಕೋಟಿ ರೂ, ರಾಜ್ಯ ತರಬೇತಿ ಕೇಂದ್ರದ ಉನ್ನತೀಕರಣಕ್ಕೆ 16.49 ಕೋಟಿ ರೂ, ಆಧುನಿಕ ಉಪಕರಣಗಳ ಖರೀದಿಗೆ 148.45 ಕೋಟಿ ರೂ, ನಗರ ಪ್ರದೇಶಗಳಲ್ಲಿ ಅಗ್ನಿಶಾಮಕ ದಳ ಬಲಪಡಿಸಲು 16.50 ಕೋಟಿ ರೂ ಬಳಸುವ ಕುರಿತು ಕ್ರಿಯಾ ಯೋಜನೆಯಲ್ಲಿ ಮಾಹಿತಿ ನೀಡಲಾಯಿತು.
ಸಭೆಯಲ್ಲಿ ಸಭೆಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ವಿ. ರಶ್ಮಿ ಮಹೇಶ್, ಅಗ್ನಿ ಶಾಮಕದಳ ಪೊಲೀಸ್ ಉಪ ಮಹಾ ನಿರ್ದೇಶಕರಾದ ರವಿ ಡಿ. ಚೆನ್ನಣ್ಣವರ್ ಹಾಗೂ ಅಗ್ನಿಶಾಮಕ ದಳದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Summer: ಕರ್ನಾಟಕದಲ್ಲಿ ಪ್ರಕೃತಿ ವಿಕೋಪ - ಬೇಸಿಗೆ ನೀರಿನ ಸಂಕಷ್ಟ ತಡೆಗೆ ಸಿದ್ಧತೆ; ಉನ್ನತ ಮಟ್ಟದ ಸಭೆಯಲ್ಲಿ ಮಹತ್ವದ ನಿರ್ಧಾರ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ











Click it and Unblock the Notifications