ಜ್ಞಾನಭಾರತಿ: ಒಂದು ವರ್ಷದಲ್ಲಿ 36 ಗಂಧದ ಮರ ಕಳವು
ಬೆಂಗಳೂರು, ಮಾರ್ಚ್ 13: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್ ನಲ್ಲಿನ ಬಯೋ ಪಾರ್ಕ್ ನಲ್ಲಿ ದುಷ್ಕರ್ಮಿಗಳು 36 ಶ್ರೀಗಂಧ ಮರಗಳನ್ನು ಕಡಿದು ಸಾಗಿಸಿದ್ದಾರೆ.
ಕಳೆದ ಒಂದು ವರ್ಷದಲ್ಲಿ 36 ಶ್ರೀಗಂಧದ ಮರಗಳು ಕಳುವಾಗಿವೆ. 2017ರ ಡಿಸೆಂಬರ್ ತಿಂಗಳೊಂದರಲ್ಲೇ 26 ಶ್ರೀಗಂಧ ಮರಗಳನ್ನು ಕಡಿದು ಸಾಗಿಸಿದ್ದಾರೆ. ಸುಮಾರು 1 ಸಾವಿರ ಎಕರೆ ವಿಸ್ತೀರ್ಣದಲ್ಲಿರುವ ಕ್ಯಾಂಪಸ್ ನಗರದಲ್ಲೇ ಅತಿ ಹೆಚ್ಚು ಶ್ರೀಗಂಧ ಮರಗಳಿಉವ ತಾಣವಾಗಿದೆ.
ಅದರಲ್ಲಿ ಜೀವವೈವಿಧ್ಯ ಉದ್ಯಾನವೇ ಸುಮಾರು 500ಎಕರೆ ವಿಸ್ತೀರ್ಣದಲ್ಲಿದೆ. ಈ ಪೈಕಿ ಸುಮಾರು 300 ಎಕರೆ ವಿಸ್ತೀರ್ಣದಲ್ಲಿನ ಜೀವವೈವಿಧ್ಯ ತಾಣದ ಭಾಗ-2ರಲ್ಲಿ 340 ಶ್ರೀಗಂಧ ಮರಗಳಿವೆ ಎಂದು ಗುರುತಿಸಲಾಗಿದ್ದು, ಭಾಗ1ರಲ್ಲಿ ಮರಗಳ ಸಮೀಕ್ಷೆ ಇನ್ನೂ ಮುಂದುವರೆದಿದೆ.

ಡ್ರೋಣ್ ಸಮೀಕ್ಷೆ: ಈ ನಡುವೆ ಜ್ಞಾನಭಾರತಿ ಕ್ಯಾಂಪ್ಸ್ ನಲ್ಲಿನ ಶ್ರೀಗಂಧ ಹಾಗೂ ಇತರ ಮರಗಳ ಉಳಿವಿಗೆ ಕ್ರಮ ಕೈಗೊಂಡಿರುವ ವಿಶ್ವವಿದ್ಯಾಲಯ, ಮರಗಳ ಸಮೀಕ್ಷೆ ನಡೆಸುತ್ತಿದೆ. ಡ್ರೋಣ್ ಕ್ಯಾಮರಾಗಳನ್ನು ಬಳಸಿ ನಡೆಸುತ್ತಿರುವ ಮರಗಳ ಸಮೀಕ್ಷೆ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಆನಂತರ ಎಲ್ಲ ಮರಗಳ ಮಾಹಿತಿಯನ್ನು ಜಿಯೋ ಟ್ಯಾಗಿಂಗ್ ಮೂಲಕ ದಾಖಲಿಸಲಾಗುತ್ತದೆ.
ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
2016ರ ನವೆಂಬರ್ ನಿಂದ 2017ರ ಡಿಸೆಂಬರ್ ಅವಧಿಯಲ್ಲಿ 36ಶ್ರೀಗಂಧ ಮರಗಳು ಕಳವು ಪ್ರಕರಣಗಳು ದಾಖಲಾಗಿವೆ ಎಂದು ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಬಯೋ-ಪಾರ್ಕ್ನ ಸಮನ್ವಯಾಧಿಕಾರಿ ತಿಳಿಸಿದ್ದಾರೆ. ಜೀವವೈವಿಧ್ಯ ಉದ್ಯಾನ ಸೇರಿದಂತೆ ಕ್ಯಾಂಪಸ್ನ ಇತರೆಡೆ ಪ್ರತಿ ದಿನ 10ರಿಂದ 15 ಮರಗಳನ್ನು ಕಡಿದು ಸಾಗಿಸಿರುವುದು ಬೆಳಕಿಗೆ ಬರುತ್ತಿದೆ.ಆದರೆ ಯಾವುದೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿಲ್ಲ ಎನ್ನುವುದೇ ವಿಷಾದದ ಸಂಗತಿಯಾಗಿದೆ.
-
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ












Click it and Unblock the Notifications