ಮತದಾರರ ಪಟ್ಟಿ: 39 ಸಾವಿರ ಅರ್ಜಿಗಳು ಬಾಕಿ
ಬೆಂಗಳೂರು, ಫೆಬ್ರವರಿ14 : ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಸಾರ್ವಜನಿಕರು ಆನ್ ಲೈನ್ ಮೂಲಕ ಸಲ್ಲಿಸಿರುವ ಅರ್ಜಿಗಳನ್ನು ಬಿಬಿಎಂಪಿ ಅಧಿಕಾರಿಗಳು ಪರಿಶೀಲಿಸಿ, ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಲ್ಲ. ಇದರಿಂದ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ.
ವಿಧಾನ ಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು 83,454 ಮಂದಿ ರಾಷ್ಟ್ರೀಯ ಮತದಾರರ ಸೇವಾ ಪೋರ್ಟಲ್ ಮತ್ತು ಚುನಾವಣಾ ಆಯೋಗದ ವೆಬ್ ಸೈಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಪೈಕಿ 44,123 ಅರ್ಜಿಗಳನ್ನು ಪರಿಶೀಲಿಸಿ, ಹೆಸರು ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದೆ. ಉಳಿದ 39,422 ಅರ್ಜಿಗಳನ್ನು ಬಾಕಿ ಉಳಿಸಿಕೊಳ್ಳಲಾಗಿದೆ.
ಆನ್ ಲೈನ್ ಮೂಲಕ ಸಲ್ಲಿಸಿದ್ದ ಅರ್ಜಿಗಳ ಸ್ಥಿತಿಗತಿಯನ್ನು ತಿಳಿಯಲಾಗದೆ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಮಹದೇವಪುರ ವಿಧಾನಸಭಾ ಕ್ಷೇತ್ರದಿಂದ ಅತ್ಯಧಿಕ ಮಂದಿ ಅಂದರೆ 10,219 ಜನರು ಹೆಸರು ಸೇರ್ಪಡೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದಾರೆ.

ಕೆಆರ್ ಪುರದಿಂದ 8753 , ಬೊಮ್ಮನಹಳ್ಳಿ 7218, ಬಿಟಿಎಂ ಲೇಔಟ್ ಕ್ಷೇತ್ರದಿಂದ 976 ಅರ್ಜಿಗಳು ಸಲ್ಲಿಕೆಯಾಗಿವೆ. ಮಹದೇವಪುರ ಕ್ಷೇತ್ರದ 10,519 ಅರ್ಜಿಗಳ ಪೈಕಿ 4,199 ಅರ್ಜಿಗಳನ್ನು ಪರಿಶೀಲಿಸಿ, ಮತದಾರರ ಪಟ್ಟಿಗೆ ಹೆಸರು ಸೇರಿಸಲು ಯಾವುದೇ ಕ್ರಮ ಕೈಗೊಂಡಿಲ್ಲ.
ಬಹುತೇಕ ಮಂದಿ ಆನ್ ಲೈನ್ ಮೂಲಕ ಜ.22ರ ಬಳಿಕ ಅರ್ಜಿ ಸಲ್ಲಿಸಿದ್ದಾರೆ. ಈಗಾಗಲೇ ಪರಿಷ್ಕೃತ ಮತದಾರರ ಪಟ್ಟಿ ಪ್ರಕಟಿಸಿದ್ದು, ಫೆ.28ಕ್ಕೆ ಅಂತಿಮ ಪಟ್ಟಿ ಪ್ರಕಟ ಮಾಡಲಾಗುತ್ತಿದೆ. ಆ ಬಳಿಕ ಆನ್ ಲೈನ್ ನಲ್ಲಿ ಸಲ್ಲಿಸಿರುವ ಅರ್ಜಿಗಳನ್ನು ಪರಿಶೀಲಿಸಲಾಗುತ್ತದೆ ಎಂದು ಬಿಬಿಎಂಪಿ ಸಹಾಯಕ ಆಯುಕ್ತ ಡಿ.ಬಿ. ನಟೇಶ್ ತಿಳಿಸಿದ್ದಾರೆ.
Delay in the voter registration process would make people question the authority. What is the point of digitization, if the registration, updation, & rejection of data is not transparent? As #Elections inching closer, #BBMP must speed-up the whole process.#Bengaluru #Karnataka pic.twitter.com/FehODe3nSg
— Dr. Ashwathnarayan (@drashwathcn) February 13, 2018
ಮತದಾರರ ಅರ್ಜಿ ಪರಿಶೀಲನೆ ನಿದಾನ ಗತಿಯಲ್ಲಿ ಸಾಗುತ್ತಿದೆ. ಇನ್ನೂ 40 ಸಾವಿರ ಅರ್ಜಿಗಳು ಬಾಕಿ ಉಳಿದಿವೆ. ಅರ್ಜಿಗಳನ್ನು ಸ್ವೀಕರಿಸಲು ಯಾವುದೇ ತಂತ್ರಜ್ಞಾನ ಅಳವಡಿಸಿಲ್ಲ, ನೋಂದಣಿ, ಅಪಡೇಟ್, ತಿರಸ್ಕರಣೆ ಇದ್ಯಾವುದಕ್ಕೂ ಸರಿಯಾದ ಮಾನದಂಡವಿಲ್ಲ. ಬಿಬಿಎಂಪಿಯು ತಮ್ಮ ಕಾರ್ಯದ ವೇಗವನ್ನು ಹೆಚ್ಚಿಸುವ ಅಗತ್ಯವಿದೆ ಎಂದು ಎಂಎಲ್ ಅಶ್ವತ್ಥ ನಾರಾಯಣ ಟ್ವೀಟ್ ಮಾಡಿದ್ದಾರೆ.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
GBA Polls: ಬೆಂಗಳೂರಿನ 5 ಪಾಲಿಕೆಗಳ ಮತದಾರರ ಪಟ್ಟಿ ಪ್ರಕಟ: ಮತದಾರರ ಪಟ್ಟಿ ಪರಿಶೀಲನೆ ಮಾಡುವ ವಿಧಾನ ಇಲ್ಲಿದೆ -
ನೇಪಾಳ ಚುಣಾವಣೆ ಫಲಿತಾಂಶ ಅಂತಿಮ, ಬಲೇಂದ್ರ ಶಾ ಪಕ್ಷಕ್ಕೆ ಒಟ್ಟು 119 ಸ್ಥಾನ | Nepal Election 2026 -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ












Click it and Unblock the Notifications