Liquor ban: 4 ದಿನ ಸರ್ಕಾರಕ್ಕೆ- ಹೋಟೆಲ್ ಉದ್ಯಮಕ್ಕಾಗುವ ನಷ್ಟದ ವಿವಿರ ಇಲ್ಲಿದೆ
ಬೆಂಗಳೂರು, ಫೆಬ್ರವರಿ 11: ರಾಜಧಾನಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಾಲ್ಕು ದಿನ ಮದ್ಯ ಮಾರಾಟ ನಿಷೇಧಿಸಲಾಗಿದೆ. ಈ ನಿರ್ಧಾರದಿಂದ ಕರ್ನಾಟಕ ರಾಜ್ಯ ಸರ್ಕಾರದ ಉದ್ಯಮ ಮತ್ತು ಅಬಕಾರಿ ಇಲಾಖೆ ಭೊಕ್ಕಸಕ್ಕೆ ನೂರಾರು ಕೋಟಿ ರೂಪಾಯಿ ನಷ್ಟ ಉಂಟಾಗಲಿದೆ ಎಂದು ಅಂದಾಜಿಸಲಾಗಿದೆ.
ಹೌದು, ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ ಆಗಿದ್ದು, ಅದು ಫೆಬ್ರವರಿ 14ರಿಂದ ನಡೆಯಲಿವೆ. ಈ ಕಾರಣದಿಂದ ಫೆಬ್ರವರಿ 14ರಿಂದ 16ರ ಮಧ್ಯರಾತ್ರಿವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ಬರೋಬ್ಬರಿ 300 ಕೋಟಿ ರೂಪಾಯಿ ನಷ್ಟವಾಗಲಿದೆ.

ಮದ್ಯ ಮಾರಾಟ ನಿಷೇಧಕ್ಕೆ ಹೋಟೆಲ್ಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಇತ್ತ ನಿಷೇಧ ನಿರ್ಧಾರದಿಂದ ಸಾಕಷ್ಟು ಆಥಿರ್ಕ ನಷ್ಟ ಉಂಟಾಗುವ ಕಾರಣ ವಿವರಿಸಿ ಬೆಂಗಳೂರು ನಗರ ಜಿಲ್ಲಾ ಮದ್ಯ ವರ್ತಕರ ಸಂಘ (BDLTA) ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿದೆ ಎಂದು ತಿಳಿದು ಬಂದಿದೆ.
ಪ್ರೇಮಿಗಳ ದಿನ ವಹಿವಾಟು ಏರಿಕೆ
ಮದ್ಯ ಮಾರಾಟ ದಿನವೇ ಪ್ರೇಮಿಗಳ ದಿನಾಚರಣೆಯು ಆಗಮಿಸುತ್ತದೆ. ಈ ಸಮಯದಲ್ಲಿ ಲಿಕ್ಕರ್ ಮಾರಾಟವು ಹೇರಳ ಪ್ರಮಾಣದಲ್ಲಿ ಹೆಚ್ಚಿರುತ್ತದೆ ಎಂದು ಸಂಸ್ಥೆ ತಿಳಿಸಿದೆ. ಅಲ್ಲದೇ ಇದೇ ದಿನ ಯುವ ಸಮೂಹ ರೆಸ್ಟೋರೆಂಟ್ಗಳು ಮತ್ತು ಪಬ್ಗಳಿಗೆ ಭೇಟಿ ನೀಡುತ್ತಿರುತ್ತಾರೆ. ಇದೆಲ್ಲ ಚಟುವಟಿಕೆಗಳಿಂದ ಆದಾಯವು ಶೇಕಡಾ 50 ರಷ್ಟು ಅಧಿಕವಾಗುತ್ತಿದೆ ಎಂದು ಪತ್ರದಲ್ಲಿ ವಿವರಿಸಲಾಗಿದೆ.
ಚುನಾವಣೆ ಸಂಬಂಧ ಚುನಾವಣೆ ಆಯೋಗವು ಮದ್ಯ ಮರಾಟ ನಿಷೇಧ ನಿರ್ಧಾರ ಮಾಡಿದ್ದಾರೆ. ಇದರಿಂದ ಬೆಂಗಳೂರಿನಲ್ಲಿರುವ ಸುಮಾರು 3,700 ಮದ್ಯ ಮಾರಾಟ ಮಳಿಗೆಗಳಿಗೆ, ಸಂಸ್ಥೆಗಳಿಗೆ ತೊಂದರೆ ಆಗುತ್ತದೆ ಎನ್ನಲಾಗಿದೆ.
300 ಕೋಟಿ ರೂ. ನಷ್ಟ
ಅಬಕಾರಿ ಇಲಾಖೆ ಮಟ್ಟಿಗೆ ಫೆಬ್ರವರಿಯ ಈ ನಾಲ್ಕು ಡ್ರೈ ದಿನಗಳು ಸುಮಾರು 300 ಕೋಟಿ ರೂಪಾಯಿಗಳ ನಷ್ಟ ಮಾಡುತ್ತವೆ. ಅಲ್ಲದೆ ವ್ಯವಹಾರಗಳು ಸುಮಾರು 500 ಕೋಟಿ ರೂಪಾಯಿಗಳ ನಷ್ಟವನ್ನು ಎದುರಿಸಬೇಕಾಗುತ್ತದೆ ಎಂದು ಪತ್ರದಲ್ಲಿ ಕಳವಳ ವ್ಯಕ್ತಪಡಿಸಲಾಗಿದೆ.
ಅನ್ಯಾಯವಾಗಿ ಬಾರ್ಗಳು ಮತ್ತು ಮದ್ಯದಂಗಡಿಗಳನ್ನು ಮುಚ್ಚಲಾಗಿದೆ ಎಂದು ಆರೋಪಿಸಿರುವ ಸಂಸ್ಥೆಯು ಈ ನಿರ್ಧಾರದ ಬಗ್ಗೆ ಸರ್ಕಾರ ಮತ್ತು ಚುನಾವಣಾ ಆಯೋಗ ಮರು ಪರಿಶೀಲಿಸಬೇಕೆಂದು ಮನವಿ ಮಾಡಲಾಗಿದೆ.

ಬ್ಯಾನ್ ನಿರ್ಧಾರ ಮರು ಪರಿಶೀಲಿಸುವಂತೆ ಆಗ್ರಹ
ಚುನಾವಣೆ ನಡೆಯುತ್ತಿರುವ ಕ್ಷೇತ್ರದಲ್ಲಿ ಕೇವಲ 16,000 ಮತದಾರರು ಇದ್ದಾರೆ. ಅವರೆಲ್ಲರೂ ವಿದ್ಯಾವಂತರು ಮತ್ತು ಬುದ್ಧಿವಂತರು. ಅವರು ಸ್ವಯಂ ಪ್ರೇರಿತ ನಿರ್ಧಾರ ಕೈಗೊಳ್ಳಲು ಶಕ್ತರಾದವರು. ಇದೆಲ್ಲ ಅಂಶಗಳನ್ನು ಗಮನಿಸಿ ಚುನಾವಣೆ ಅಧಿಕಾರಿಗಳು ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಜೊತೆಗೆ ಆಹಾರ ಮತ್ತು ಪಾನೀಯ ಉದ್ಯಮದ ಉಳಿವಿಗೆ ಸಹಕರಿಸಬೇಕು ಎಂದು ಪತ್ರದಲ್ಲಿ ವಿವರಿಸಲಾಗಿದೆ.
ಇನ್ನೂ ಈ ಮದ್ಯ ಮಾರಾಟ ನಿಷೇಧ ವಿರುದ್ಧ ಬೃಹತ್ ಬೆಂಗಳೂರು ಹೋಟೆಲ್ ಮಾಲೀಕರ ಸಂಘವು ಸಹ ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿದೆ. ಅದರಲ್ಲಿ ಸಂಘದ ಅಧ್ಯಕ್ಷ ಪಿಸಿ ರಾವ್ ಅವರು, ನಾಲ್ಕು ದಿನ ಮದ್ಯ ಮಾರಾಟ ನಿಷೇಧವು ಅವೈಜ್ಞಾನಿಕವಾಗಿದೆ. ಇದೊಂದು ಅನಿರೀಕ್ಷಿತವಾಗಿದೆ ಎಂದು ತಿಳಿಸಿದ್ದಾರೆ.
ಹೋಟೆಲ್: 450 ಕೋಟಿ ರೂ.ವಹಿವಾಟು ನಿರೀಕ್ಷೆ
ಪ್ರೇಮಿಗಳ ದಿನ ಹಿನ್ನೆಲೆಯಲ್ಲಿ ಅನೇಕ ರೆಸ್ಟೋರೆಂಟ್ಗಳು ತಮ್ಮ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಕೆಲವು ಇವೆಂಟ್ ಹಮ್ಮಿಕೊಂಡಿರುತ್ತವೆ. ಈ ಮದ್ಯೆ ನಿಷೇದ ನಿರ್ಧಾರವು ಉದ್ಯಮದ ವ್ಯವಹಾರಗಳ ಮೇಲೆ ಪರಿಣಾಮ ಬೀರುತ್ತದೆ. ಈ ನಾಲ್ಕು ದಿನಗಳಲ್ಲಿ ಬರೋಬ್ಬರಿ 450 ಕೋಟಿ ರೂಪಾಯಿಗಳ ವಹಿವಾಟು ನಿರೀಕ್ಷೆ ಇದೆ.
ಇನ್ನೂ ಅಬಕಾರಿ ಇಲಾಖೆಗೂ ಸುಮಾರು 250-300 ಕೋಟಿ ರೂಪಾಯಿ ವಹಿವಾಟು ನಡೆಯಲಿದೆ. ಕೇವಲ ಹೋಟೆಲ್ ಮಾಲೀಕರಿಗೆ ಮಾತ್ರವಲ್ಲದೆ ಸರ್ಕಾರಕ್ಕೂ ಭಾರಿ ನಷ್ಟವಾಗುತ್ತದೆ. ಅಂಕಿಅಂಶಗಳ ಪ್ರಕಾರ, ಸರ್ಕಾರವು ದಿನಕ್ಕೆ 60 ಕೋಟಿ ರೂ. ಅಬಕಾರಿ ಸಂಗ್ರಹವನ್ನು ಸಂಗ್ರಹಿಸುತ್ತದೆ ಎಂದು ಮಾಹಿತಿ ನೀಡಿದರು.
ಜತೆ ಈ ಮದ್ಯ, ಹೋಟೆಲ್ ಉದ್ಯಮದ ಉಳಿವಿಗಾಗಿ ಈ ನಿರ್ಧಾರವನ್ನು ಪುನರ್ ಪರಿಶೀಲಿಸಬೇಕು. ಹೋಟೆಲ್ ಉದ್ಯಮಗಳ ಉಳಿವಿಗೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಚುನಾವಣಾಧಿಕಾರಿಗಳ ಈ ನಿರ್ಧಾರವು ಮರುಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಂಡರೆ, ಅತ್ಯಧಿಕ ವಹೀವಾಟಿನ ನಿರೀಕ್ಷೆಯಲ್ಲಿರುವ ಉದ್ಯಮಕ್ಕೆ ಅನುಕೂಲವಾಗಲಿದೆ. ಸಂಭವನೀಯ ನಷ್ಟ ತಪ್ಪಲಿದೆ ಎಂದು ಕೇಳಿಕೊಳ್ಳಲಾಗಿದೆ.
-
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ











Click it and Unblock the Notifications