Rama cut-out fall: ಬೆಂಗಳೂರಿನಲ್ಲಿ ಧರೆಗುರುಳಿದ ಶ್ರೀರಾಮನ 40 ಅಡಿ ಎತ್ತರದ ಬೃಹತ್ ಕಟೌಟ್
ಬೆಂಗಳೂರು ಜನವರಿ 24: ದೇಶದೆಲ್ಲೆಡೆ ಶ್ರೀರಾಮ ನಾಮ ಜಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಅಯೋಧ್ಯೆಯಲ್ಲಿ ರಾಮ ಮಂದಿರದಲ್ಲಿ ಶ್ರೀರಾಮ ರಾರಾಜಿಸುತ್ತಿದ್ದಾನೆ. ಶ್ರೀರಾಮನನ್ನು ಕಣ್ತುಂಬಿಕೊಳ್ಳಲು ದೇಶಾದ್ಯಂತ ಭಕ್ತರು ಅಯೋಧ್ಯೆಗೆ ತೆರಳುತ್ತಿದ್ದಾರೆ. ಈ ನಡುವೆ ಬೆಂಗಳೂರಿನಲ್ಲಿ ಅಹಿತಕರ ಘಟನೆಯೊಂದು ನಡೆದಿದೆ.
ಬೆಂಗಳೂರಿನ ನಂದಿನ ಲೇಔಟ್ನ ಕೃಷ್ಣಾನಂದ ನಗರ ಸರ್ಕಲ್ನಲ್ಲಿ ಹಾಕಲಾಗಿದ್ದ 40 ಅಡಿಯ ರಾಮನ ಕಟೌಟ್ ಧರೆಗುರುಳಿದೆ. ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದ್ದು ರಾಮ ಭಕ್ತರಿಗೆ ಬೇಸರ ತಂದಿದೆ. ಈ ಕಟೌಟ್ ಉರುಳಿ ಬೀಳಲು ಕಾರಣ ಇನ್ನೂ ತಿಳಿದು ಬಂದಿಲ್ಲ. ಈ ಬೃಹತ್ ಕಟೌಟ್ ಸರಿಯಾಗಿ ಹಾಕಲಾಗಿದ್ದರೂ ಕೆಳಗೆ ಹೇಗೆ ಬಿತ್ತು ಎಂದು ಕೆಲವರು ಅನುಮಾನ ವ್ಯಕ್ತಪಡಿಸಿದ್ದಾರೆ.

ಅಯೋಧ್ಯೆಯಲ್ಲಿ ಬಾಲರಾಮ ಮೂರ್ತಿ ಪ್ರಾಣಪ್ರತಿಷ್ಠಾಪನೆಯ ಅದ್ದೂರಿ ಸಮಾರಂಭವನ್ನು ಸೋಮವಾರ ನೆರವೇರಿಸಲಾಯಿತು. ಇದಕ್ಕಾಗಿ ದೇಶಾದ್ಯಂತ ಭಕ್ತರು ಶ್ರೀರಾಮನನ್ನು ಬರಮಾಡಿಕೊಳ್ಳುತ್ತಾ ಹಬ್ಬವನ್ನೇ ಆಚರಿಸಿದ್ದಾರೆ. ರಸ್ತೆ, ಬೀದಿ, ಗಲ್ಲಿ, ಮನೆಗಳ ಮೇಲೂ ರಾಮನ ಫ್ಲೆಕ್ಸ್ ಹಾಕುವ ಮೂಲಕ ನಾನಾ ಕಾರ್ಯಕ್ರಮಗಳನ್ನು ಆಯೋಜಿಸಿ ಸಂಭ್ರಮಿಸಿದರು. ಅಯೋಧ್ಯೆ ರಾಮ ಮಂದಿರ ಉದ್ಘಾಟನೆಯನ್ನು ನೇರ ಪ್ರಸಾರದ ಮೂಲಕ ಕಣ್ತುಂಬಿಕೊಂಡರು. ಜೊತೆಗೆ ಹಲವೆಡೆ ಬೃಹತ್ ಕಟೌಟ್ಗಳನ್ನೂ ಹಾಕಲಾಗಿತ್ತು.
ಹೀಗೆ ಬೆಂಗಳೂರಿನಲ್ಲಿ ಹಾಕಲಾಗಿದ್ದ ಕಟೌಟ್ ಧರೆಗುರುಳಿ ಬಿದ್ದಿದೆ. ಅದೃಷ್ಟವಶಾತ್ ಕಟೌಟ್ ಬೀಳೋ ಸಮಯದಲ್ಲಿ ಯಾವುದೇ ವಾಹನಗಳು ಸ್ಥಳದಲ್ಲಿ ಇರಲಿಲ್ಲ. ಹೀಗಾಗಿ ಭಾರೀ ದುರಂತ ತಪ್ಪಿದೆ. ಇನ್ನೂ ಈ ಬಗ್ಗೆ ಮಾಹಿತಿ ಪಡೆದ ತಕ್ಷಣ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಈ ಕಟೌಟ್ ಗಾಳಿ ಬಿದ್ದಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಂದಹಾಗೆ ಈ ಕಟೌಟ್ ಅನ್ನು ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೂ ಮುನ್ನವೇ ಹಾಕಲಾಗಿತ್ತು. ಆದರೆ ಇದು ಏಕಾಏಕಿ ಗಾಳಿಗೆ ಬಿದ್ದಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಕಿಡಿಗೇಡಿಗಳು ಕಟೌಟ್ ಕೆಡವಿದ್ದಾರೆ ಎನ್ನುವ ಶಂಕೆ ಕೂಡ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ಪೊಲೀಸರು ಸ್ಥಳೀಯ ಸಿಸಿಟಿವಿ ಕ್ಯಾಮರಾಗಳನ್ನು ಪರಿಸೀಲನೆ ನಡೆಸಿದ್ದಾರೆ. ಜೊತೆಗೆ ಕಟೌಟ್ ಹಾಕಿದವರ ಮಾಹಿತಿ ಕೂಡ ಪಡೆಯಲಾಗುತ್ತಿದೆ.
-
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications