ದಿಢೀರ್ ಎಚ್ಚೆತ್ತ ಪಾಲಿಕೆಯಿಂದ 400 ಶೆಡ್ ತೆರವು, 1500 ಜನ ಬೀದಿಗೆ
ಬೆಂಗಳೂರು, ಆಗಸ್ಟ್ 20: ದಿಢೀರ್ ಎಚ್ಚೆತ್ತ ಬಿಬಿಎಂಪಿಯು ಬೆಂಗಳೂರಿನ ಬೆಳ್ಳಂದೂರು ಬಫರ್ ವಲಯದಲ್ಲಿದ್ದ 400 ಶೆಡ್ಗಳನ್ನು ಕೆಡವಿದ್ದು ಸುಮಾರು 1500ಕ್ಕೂ ಹೆಚ್ಚು ಮಂದಿ ನಿರಾಶ್ರಿತರಾಗಿದ್ದಾರೆ.
ಬೆಳ್ಳಂದೂರು ಕೆರೆ ಸಮೀಪದಲ್ಲಿರುವ ಕರಿಯಮ್ಮನ ಅಗ್ರಹಾರಕ್ಕೆ ಆಗಮಿಸಿದ ಪಾಲಿಕೆ ಅಧಿಕಾರಿಗಳು, ನಿವಾಸಿಗಳನ್ನು ಹೊರಗೆ ಕಳುಹಿಸಿ ಶೆಡ್ಗಳನ್ನು ಕೆಡವಿದ್ದಾರೆ, ಈ ಜಾಗ ಬಫರ್ ವಲಯದಲ್ಲಿರುವುದರಿಂದ ಕಾನೂನು ಉಲ್ಲಂಘನೆಯಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆದರೆ ಯಾವುದೇ ಸೂಚನೆ ಇಲ್ಲದೆ ಏಕಾಏಕಿ ಬಂದು ಶೆಡ್ಗಳನ್ನು ಕಿತ್ತುಹಾಕಿರುವುದರಿಂದ ನಿರಾಶ್ರಿತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಕೆಲ ನಿವಾಸಿಗಳು ಶೆಡ್ಗಳನ್ನು ಕೆವಲು ಬಿಡುವುದಿಲ್ಲ ಎಂದು ಧರಣಿ ಕೂತರೂ ಬಿಡದೆ ಅಧಿಖಾರಿಗಳು ಶೆಡ್ಗಳನ್ನು ಕೆವಿದರು, ಜೆಸಿಬಿಯಿಂದ ಶೆಡ್ಗಳ ತೆರವು ಕಾರ್ಯಾರಚಣೆ ನಡೆಯುವಾಗ ನಿವಾಸಿಗಳು ಪ್ರತಿಭಟನೆ ನಡೆಸಿದರು.

ಕಳೆದ ಎಂಟು ವರ್ಷಗಳಿಂದ ಈ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ, ಇಲ್ಲಿಯವರೆಗೆ ಬಿಬಿಎಂಪಿ ಆಕ್ಷೇಪಿಸಿರಲಿಲ್ಲ ಇದೀಗ ಏಕಾಏಕಿಯಾಗಿ ತೆರವು ಕ್ರಮಕ್ಕೆ ಮುಂದಾಗಿದ್ದಾರೆ, ತೆರವುಗೊಳಿಸುತ್ತಿದ್ದೇವೆ ಎಂದು ನೋಟಿಸ್ ಕೂಡ ನೀಡಿಲ್ಲ, ಇದಿರಿಂದ ಸುಮಾರು 1500ಕ್ಕೂ ಹೆಚ್ಚು ಮಂದಿ ಬೀದಿಪಾಲಾಗಿದ್ದಾರೆ. ಇದಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಈ ಶೆಡ್ಗಳಲ್ಲಿ ಆಟೋ ರಿಕ್ಷಾ ಚಾಲಕರು, ಕೂಲಿ ಕಾರ್ಮಿಕರು ವಾಸಿಸುತ್ತಿದ್ದಾರೆ, ಅವರಿಗೆ ಸೂರು ಕಟ್ಟಿಕೊಳ್ಳಲು ಕೂಡ ಸಾಧ್ಯವಿಲ್ಲ, ಮಳೆಗಾಲದಲ್ಲಿ ಸಮಯದಲ್ಲಿ ಈ ರೀತಿ ಮಾಡಿದರೆ ಎಲ್ಲರೂ ಎಲ್ಲಿಗೆ ಹೋಗಬೇಕು ಎಂದು ಅವರು ಪ್ರಶ್ನಿಸಿದ್ದಾರೆ.
-
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications