Bengaluru Second Airport: ಬೆಂಗಳೂರು 2ನೇ ಏರ್ಪೋರ್ಟ್ಗಾಗಿ ಈ ಭಾಗದಲ್ಲಿ 4,500 ಎಕರೆ ಜಾಗ ಫಿಕ್ಸ್
ಬಹುನಿರೀಕ್ಷಿತ ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ಕಾರ್ಯ ಚುರುಕುಗೊಂಡಿದೆ. ಮೊದಲಿಗೆ ಮೂರು ಜಾಗಗಳನ್ನು ಗುರುತಿಸಿದ್ದ ರಾಜ್ಯ ಸರ್ಕಾರವು ಇದೀಗ ಹೊಸ ಏರ್ಪೋರ್ಟ್ ವಿಚಾರದಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ. ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣದ ಕಾರ್ಯಸಾಧ್ಯತಾ ಅಧ್ಯಯನ ಶೀಘ್ರದಲ್ಲೇ ಆರಂಭವಾಗಲಿದ್ದು, ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮವು ವಿವರವಾದ ಕಾರ್ಯಸಾಧ್ಯತಾ ಅಧ್ಯಯನಕ್ಕಾಗಿ ಸಲಹೆಗಾರರನ್ನು ನೇಮಿಸಲು ಟೆಂಡರ್ ಕರೆದಿದೆ.
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ಸದ್ಯ ಮೂರು ಸಂಭಾವ್ಯ ಸ್ಥಳಗಳನ್ನು ಗುರುತಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ತಾಂತ್ರಿಕ, ಪರಿಸರ, ಆರ್ಥಿಕ ಮತ್ತು ಕಾರ್ಯತಂತ್ರದ ಕಾರ್ಯಸಾಧ್ಯತೆಯನ್ನು ನಿರ್ಣಯಿಸಲು ಅಧ್ಯಯನಕ್ಕೆ ಮುಂದಾಗಿದೆ. ಸರಕು ಸೇರಿದಂತೆ 35 ವರ್ಷಗಳವರೆಗೆ ಸಂಚಾರ ಬೇಡಿಕೆಯನ್ನು ಇದರಲ್ಲಿ ನಿರೀಕ್ಷಿಸಲಾಗಿದೆ. ಅತ್ತ ಕರ್ನಾಟಕದ ಗಡಿಯ ಬಳಿ ಇರುವ ಹೊಸೂರಿನಲ್ಲಿ ತಮಿಳುನಾಡು ಮತ್ತೊಂದು ವಿಮಾನ ನಿಲ್ದಾಣವನ್ನು ವೇಗವಾಗಿ ನಿರ್ಮಿಸಲು ಮುಂದಾಗಿರುವುದರಿಂದ ಇತ್ತ ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಕಾರ್ಯ ಕೂಡ ಚುರುಕುಗೊಂಡಿದೆ.

ಯಾವ ಜಾಗ ಅಂತಿಮ?
ಕನಕಪುರ ರಸ್ತೆಯಲ್ಲಿ ಚೂಡಹಳ್ಳಿ ಮತ್ತು ಸೋಮನಹಳ್ಳಿ, ತುಮಕೂರು ಕಡೆಗೆ ಇರುವ ನೆಲಮಂಗಲ-ಕುಣಿಗಲ್ ರಸ್ತೆಯಲ್ಲಿರುವ ಜಾಗಗಳನ್ನು ಶಾರ್ಟ್ಲಿಸ್ಟ್ ಮಾಡಲಾಗಿದೆ. ಹೊಸ ವಿಮಾನ ನಿಲ್ದಾಣಕ್ಕಾಗಿ ಪ್ರತಿ ಸ್ಥಳದಲ್ಲಿ ಸುಮಾರು 4,500 ಎಕರೆಗಳನ್ನು ಗುರುತಿಸಲಾಗಿದೆ. ಇನ್ನು ಎರಡನೇ ಏರ್ಪೋರ್ಟ್ ವಿಚಾರವು ರಾಜಕೀಯವಾಗಿಯೂ ಗಮನ ಸೆಳೆಯುತ್ತಿದೆ. ಕನಕಪುರ ರಸ್ತೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಸಕ್ತಿ ತೋರಿದ್ದಾರೆ. ಇನ್ನು ಗೃಹ ಸಚಿವ ಜಿ.ಪರಮೇಶ್ವರ್ ಅವರು ತುಮಕೂರು ರಸ್ತೆಯಲ್ಲಿ ವಿಮಾನ ನಿಲ್ದಾಣ ಬರಬೇಕು ಎಂದು ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.
ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕೆ ಅತ್ಯಂತ ಸೂಕ್ತವಾದ ಸ್ಥಳವನ್ನು ಗುರುತಿಸಲು ಹಾಗೂ ವಿವರವಾದ ಕಾರ್ಯತಂತ್ರ ಮತ್ತು ತಾಂತ್ರಿಕ ಮೌಲ್ಯಮಾಪನಕ್ಕಾಗಿ ಸಲಹೆಗಾರರನ್ನು ನೇಮಿಸಿಕೊಳ್ಳಲು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಈಗ ಟೆಂಡರ್ ಕರೆಯುವ ಮೂಲಕ ಮುಂದಡಿ ಇಟ್ಟಿದೆ. ಎರಡನೇ ವಿಮಾನ ನಿಲ್ದಾಣದ ಸ್ಥಳವನ್ನು ಗುರುತಿಸುವಲ್ಲಿ ಈ ಕಾರ್ಯಸಾಧ್ಯತಾ ವರದಿಯು ಪ್ರಮುಖ ಪಾತ್ರ ವಹಿಸಲಿದೆ.
ಟೆಂಡರ್ ದಾಖಲೆಯ ಪ್ರಕಾರ ಕನಕಪುರ ರಸ್ತೆಯಲ್ಲಿನ ಎರಡು ಜಾಗಗಳು ಪಕ್ಕಪಕ್ಕದಲ್ಲಿದ್ದು, ಅತಿಕ್ರಮಿಸುವ ಭೂ ಪ್ರದೇಶಗಳನ್ನು ಹೊಂದಿವೆ. ಇವುಗಳನ್ನು ಸಂಯೋಜಿತ ನಿವೇಶನವಾಗಿ ಅವುಗಳ ಸಾಮರ್ಥ್ಯವನ್ನು ನಿರ್ಣಯಿಸಲು ಪ್ರತ್ಯೇಕವಾಗಿ ಮತ್ತು ಜಂಟಿಯಾಗಿ ಮೌಲ್ಯಮಾಪನ ಮಾಡಬೇಕಾಗಿದೆ. ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಕೂಡ ಪರಸ್ಪರ ಒಪ್ಪಿದ ಸಮಯಾವಧಿ ಮತ್ತು ವೆಚ್ಚಗಳಿಗೆ ಒಳಪಟ್ಟು, ನಿಯೋಜನೆಯ ಸಮಯದಲ್ಲಿ ಮೌಲ್ಯಮಾಪನಕ್ಕಾಗಿ ಮತ್ತೊಂದು ಜಾಗ ಸೇರಿಸುವ ಆಯ್ಕೆಯನ್ನು ಮುಕ್ತವಾಗಿಟ್ಟಿದೆ. ಅಲ್ಲದೆ ಪ್ರಾಥಮಿಕ ತಾಂತ್ರಿಕ ಮೌಲ್ಯಮಾಪನಗಳು ಮೂರೂ ತಾಣಗಳು ಕಾರ್ಯಸಾಧ್ಯವೆಂದು ಹೇಳಿದ್ದರೂ ಆದ್ಯತೆಯ ಸ್ಥಳವನ್ನು ಗುರುತಿಸಲು ವಿವರವಾದ ಕಾರ್ಯತಂತ್ರ ಮತ್ತು ತಾಂತ್ರಿಕ ಮೌಲ್ಯಮಾಪನದ ಅಗತ್ಯವಿದೆ ಎಂದು ಉಲ್ಲೇಖಿಸಲಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು












Click it and Unblock the Notifications