ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಈವರೆಗೆ 460 ದೂರುಗಳು, ಎಲ್ಲಿ ಹೆಚ್ಚು ತಿಳಿಯಿರಿ
ಬೆಂಗಳೂರು, ಏಪ್ರಿಲ್. 13: ಮೇ ಹತ್ತರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಾಗಿದೆ. ಆದರೂ, ಕೂಡ ಸಿವಿಜಿಲ್ ಆ್ಯಪ್ನಲ್ಲಿ ಏಪ್ರಿಲ್ 11ರವರೆಗೆ ಮಾದರಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ 460 ದೂರುಗಳು ದಾಖಲಾಗಿವೆ.
ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಮಂಗಳವಾರದವರೆಗೆ 1,018 ಎಫ್ಐಆರ್ಗಳು ದಾಖಲಾಗಿದ್ದು, ಮಾದಕ ದ್ರವ್ಯ, ಮದ್ಯ, ಅಮೂಲ್ಯ ಲೋಹಗಳು ಮತ್ತು ಇತರ ಉಡುಗೊರೆಗಳು ಸೇರಿದಂತೆ 51 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಾದರಿ ನೀತಿ ಸಂಹಿತೆ ಜಾರಿಯಾದ ನಂತರ 24 ಗಂಟೆಗಳ ಸಹಾಯವಾಣಿ ಸೇವೆಯನ್ನು ತೆರೆಯಲಾಗಿದೆ.

ದಾಖಲಾಗಿರುವ ಈ 460 ದೂರುಗಳಲ್ಲಿ 389 ಅಸಲಿ ಎಂದು ಚುನಾವಣಾಧಿಕಾರಿಗಳು ಗುರುತಿಸಿದ್ದಾರೆ. ಬೆಂಗಳೂರು ಡಿಇಒ ಮತ್ತು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಬಿಡುಗಡೆ ಮಾಡಿದ ದೈನಂದಿನ ಬುಲೆಟಿನ್ ಪ್ರಕಾರ ಕೇಂದ್ರ ಬೆಂಗಳೂರಿನಿಂದ (309) ಅತಿ ಹೆಚ್ಚು ದೂರುಗಳನ್ನು ಸ್ವೀಕರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ಆರ್ಡಬ್ಲ್ಯೂಎ ಸದಸ್ಯೆ ಪೂರ್ಣಿಮಾ ಶೆಟ್ಟಿ, ಸಿ-ವಿಜಿಲ್ ಆ್ಯಪ್ ಬಗ್ಗೆ ಅನೇಕ ನಾಗರಿಕರು ಕುತೂಹಲ ಹೊಂದಿದ್ದಾರೆ. ದೂರುದಾರರ ಗುರುತುಗಳು ಅನಾಮಧೇಯವಾಗಿ ಉಳಿಯುವುದರಿಂದ, ಅವರು ತಮ್ಮ ದೂರುಗಳನ್ನು ಯಾವುದೇ ಆತಂಕವಿಲ್ಲದೆ ದಾಖಲಿಸುತ್ತಿದ್ದಾರೆ. ಆದರೂ, ಜನರಲ್ಲಿ ಈ ಅಪ್ಲಿಕೇಶನ್ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು. ಮಾದರಿ ನೀತಿ ಸಂಹಿತೆ ಉಲ್ಲಂಘನೆಗಳ ವಿರುದ್ಧ ದೂರು ಸಲ್ಲಿಸಬೇಕು ಎಂದು ಹೇಳಿದ್ದಾರೆ.

ಈ ಸಿವಿಜಿಲ್ ಆ್ಯಪ್ನೊಂದಿಗೆ ಇಡೀ ರಾಜ್ಯವನ್ನು ಜಿಯೋ ಫೆನ್ಸ್ ಮಾಡಲಾಗಿದೆ ಎಂದು ಜಿಲ್ಲಾ ದೂರು ನಿಗಾ ಘಟಕದ ನೋಡಲ್ ಅಧಿಕಾರಿ ಪ್ರತೀಕ್ ಬಯಾಲ್ ವಿವರಿಸಿದ್ದಾರೆ. ಯಾವುದೇ ವ್ಯಕ್ತಿಯು ಫೋಟೋಗಳು, ವಿಡಿಯೋಗಳು ಮತ್ತು ಆಡಿಯೊ ಕ್ಲಿಪ್ಗಳನ್ನು ಅಪ್ಲೋಡ್ ಮಾಡುವ ಮೂಲಕ ತಮ್ಮ ದೂರುಗಳನ್ನು ನೋಂದಾಯಿಸಬಹುದು. ಇದರ ವಿಶೇಷತೆಯೆಂದರೇ ದೂರುದಾರರ ಗುರುತುಗಳನ್ನು ಬಹಿರಂಗಪಡಿಸಲಾಗುವುದಿಲ್ಲ.
ದೂರು ದಾಖಲಾದ 100 ನಿಮಿಷಗಳಲ್ಲಿ ಕ್ರಮ ಕೈಗೊಂಡು ದೂರನ್ನು ಮುಕ್ತಾಯಗೊಳಿಸಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿರುವ ಕರಪತ್ರಗಳು, ಹಣ, ಪೋಸ್ಟರ್ಗಳು ಅಥವಾ ಇತರ ವಸ್ತುಗಳನ್ನು ವಿತರಿಸುವ ದೂರುಗಳನ್ನು ಪೋರ್ಟಲ್ನಲ್ಲಿ ನೋಂದಾಯಿಸಬಹುದು. ನಾಗರಿಕರು ಹೆಚ್ಚು ಜಾಗೃತರಾಗಿ ಪೋರ್ಟಲ್ನಲ್ಲಿ ದೂರುಗಳನ್ನು ಸಲ್ಲಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಚುನಾವಣಾಧಿಕಾರಿಗಳು 17.36 ಕೋಟಿ ರೂಪಾಯಿ ದಾಖಲೆ ಇಲ್ಲದ ನಗದು ಹಾಗೂ ಉಡುಗೊರೆ ನೀಡಲು ಸಾಗಿಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಮಾರ್ಚ್ 29 ನೀತಿ ಸಂಹಿತೆ ಜಾರಿಯಾದಾಗಿನಿಂದ ಇಲ್ಲಿಯವರೆಗೆ ಚುನಾವಣಾ ಆಯೋಗದ ಅಧಿಕಾರಿಗಳಿಂದ ಒಟ್ಟು 126.14 ಕೋಟಿ ರೂಪಾಯಿ ನಗದು ಮತ್ತಿತರ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.
ರಾಜ್ಯದೆಲ್ಲೆಡೆ ಚುನಾವಣಾ ಅಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದರೂ ಕೂಡ ಚುನಾವಣಾ ಅಕ್ರಮಗಳು ನಡೆಯುವುದು ತಪ್ಪಿಲ್ಲ. ಬೆಂಗಳೂರು ನಗರವೊಂದರಲ್ಲೇ ಸುಮಾರು 100 ಚೆಕ್ಪೋಸ್ಟ್ ನಿರ್ಮಿಸಿದ್ದಾರೆ. ರಾಜ್ಯದಲ್ಲಿ ಒಟ್ಟು 126.14 ಕೋಟಿ ರೂ.ನಗದು ಮತ್ತಿತರ ವಸ್ತುಗಳನ್ನು ವಶಕ್ಕೆ ಪಡೆದುದರಲ್ಲಿ ಬೆಂಗಳೂರಿನದ್ದೇ ಸಿಂಹಪಾಲು ಇದೆ. ಬೆಂಗಳೂರಿನಲ್ಲಿ ಮಾರ್ಚ್ 29 ರಿಂದ ಈವರೆಗೆ ಬೆಂಗಳೂರಿನಲ್ಲಿ 53.83 ಕೋಟಿ ರೂ. ಹಣ, ಮದ್ಯ, ಉಚಿತವಾಗಿ ನೀಡಲು ಸಾಗಿಸುತ್ತಿದ್ದ ಉಡುಗೊರೆಗಳನ್ನು ಜಪ್ತಿ ಮಾಡಲಾಗಿದೆ.
-
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ












Click it and Unblock the Notifications