ಬೆಂಗಳೂರು: ಸುಖಾಸುಮ್ಮನೆ ನೀರು ದುರ್ಬಳಕೆ ಮಾಡಿದ್ರೆ ಬೀಳತ್ತೆ ಬರೋಬ್ಬರಿ ₹5,000 ದಂಡ ವಿಧಿಸುವ ವಾರ್ನಿಂಗ್, ಎಲ್ಲಿ?
ಬೆಂಗಳೂರು, ಮಾರ್ಚ್, 06: ರಾಜ್ಯದಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಳ ಆಗುತ್ತಲೇ ಇದೆ. ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಬಿಸಿಲಿನ ಶಾಖಕ್ಕೆ ಜನರು ಬೇಸತ್ತು ಕೋಗಿದ್ದಾರೆ. ಅಲ್ಲದೆ ನಗರದಲ್ಲಿ ಈಗಾಗಲೇ ನೀರಿನ ಅಭಾವ ಕಾಡುತ್ತಿದೆ. ಆದ್ದರಿಂದ ಬೆಂಗಳೂರಿನ ಈ ಅಪಾರ್ಟ್ಮೆಂಟ್ ಯಾರೂ ನೀರನ್ನು ಸುಮ್ಮನೆ ದುರ್ಬಳಕೆ ಮಾಡುತ್ತಾರೋ ಅಂತಹವರ ವಿರುದ್ಧ ಸಮರ ಸಾರಲು ಮುಂದಾಗಿದೆ. ಹಾಗಾದರೆ ಆ ಕಠಿಣ ಕ್ರಮ ಏನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ನಗರದಲ್ಲಿ ನೀರಿನ ಅಭಾವ ನಗರ ವಾಸಿಗಳಿಗೆ ದಿನದಿನಕ್ಕೆ ಹೊಸ ಸವಾಲಾಗಿ ಪರಿಣಮಿಸುತ್ತಿದೆ. ಈ ಸಮಸ್ಯೆಯನ್ನು ನಿವಾರಿಸಲು ಸರ್ಕಾರ ತೆಗೆದುಕೊಳ್ಳುತ್ತಿರುವ ಪರಿಹಾರ ಉಪಕ್ರಮಗಳ ನಡುವೆಯೂ, ಬೆಂಗಳೂರು ಮಹಾನಗರದ ಹಲವು ಪ್ರದೇಶಗಳಲ್ಲಿ ಜನಜೀವನ ತೀವ್ರ ಅತಂತ್ರ ಸ್ಥಿತಿಗೆ ತಲುಪಿದೆ. ಇನ್ನು ನೀರಿನ ಟ್ಯಾಂಕರ್ಗಳನ್ನು ಆಶ್ರಯಸಿದ್ದವರಿಗೆ ಟ್ಯಾಂಕರ್ ನೀರು ಕೂಡ ಸಿಗದಂತಾಗಿದೆ. ಈ ನಡುವೆ, ಅಪಾರ್ಟ್ಮೆಂಟ್ಗಳು ವಿದಿಸುತ್ತಿರುವ ಕಠಿಣ ಕ್ರಮಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿವೆ.

ನಗರದ ವೈಟ್ಫೀಲ್ಡ್ ಪ್ರದೇಶದ ಹೌಸಿಂಗ್ ಸೊಸೈಟಿ ಕುಡಿಯುವ ನೀರಿನ ದುರ್ಬಳಕೆ ಯಾರು ಮಾಡುತ್ತಾರೋ ಅಂತಹವರಿಗೆ 5,000 ರೂಪಾಯಿ ದಂಡ ವಿಧಿಸುವುದಾಗಿ ತನ್ನ ನಿವಾಸಿಗಳಿಗೆ ಎಚ್ಚರಿಕೆ ನೀಡಿದೆ. ಅಷ್ಟೇ ಅಲ್ಲದೆ ಇದನ್ನು ಗಮನಿಸುವುದಕ್ಕೆ ಸೆಕ್ಯೂರಿಟಿ ಗಾರ್ಡ್ ಅನ್ನೂ ನಿಯೋಜಿಸಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಇನ್ನು ಇಲ್ಲಿನ ಅಪಾರ್ಟ್ಮೆಂಟ್ನ ಈ ಕ್ರಮ ಭಾರೀ ಚರ್ಚೆಗೆ ಕಾರಣವಾಗಿದೆ.
ಸೂಕ್ತ ಕ್ರಮಗಳಿವು
* ಹೌಸಿಂಗ್ ಸೊಸೈಟಿಯ ಪ್ರತಿ ಮನೆಯವರೂ ನೀರಿನ ಬಳಕೆಯನ್ನು ಶೇಕಡಾ 20ರಷ್ಟು ಕಡಿಮೆ ಮಾಡಬೇಕು. ಇದು ಎಲ್ಲರೂ ಸೇರಿ ತೆಗೆದುಕೊಂಡ ತೀರ್ಮಾನವಾಗಿದೆ.
* ನೀರಿನ ಬಳಕೆಯನ್ನು ಶೇಕಡ 20ರಷ್ಟು ಕಡಿಮೆ ಮಾಡುವುದು ಸಾಧ್ಯವಾಗದೇ ಹೋದರೆ 5,000 ರೂಪಾಯಿ ಹೆಚ್ಚುವರಿ ಶುಲ್ಕ ಪಾವತಿ ಮಾಡಬೇಕು.
* ನೀರಿನ ಪೂರೈಕೆಗೆ ಅನುಗುಣವಾಗಿ ನೀರಿನ ಲಭ್ಯತೆ ಇರಲಿದ್ದು, ಬೇಸಿಗೆಯ ಕೊನೇ ಹಂತದಲ್ಲಿ ನೀರಿನ ಬಳಕೆಯನ್ನು ಶೇಕಡ 40ರಷ್ಟು ಕಡಿಮೆ ಮಾಡಬೇಕಾಯಿತು.
* ನೀರಿನ ಬಳಕೆ ಕಡಿಮೆ ಮಾಡಿಸುವುದಕ್ಕೆ ಭದ್ರತಾ ಸಿಬ್ಬಂದಿ ನೇಮಕ ಮಾಡುತ್ತಿರುವುದಾಗಿಯೂ ಸೊಸೈಟಿ ಹೇಳಿದೆ.
ಬೆಂಗಳೂರಿನ ಹಲವಾರು ಹೌಸಿಂಗ್ ಸೊಸೈಟಿಗಳು ಸಹ ತಮ್ಮ ನಿವಾಸಿಗಳಿಗೆ ತಮ್ಮ ದೈನಂದಿನ ನೀರಿನ ಬಳಕೆಯ ಬಗ್ಗೆ ಜಾಗರೂಕರಾಗಿರಬೇಕು ಎಂದು ಸಲಹೆ ನೀಡಿವೆ. ಇನ್ನು ಬೆಂಗಳೂರಿನಲ್ಲಿ ಕುಡಿಯುವ ನೀರಿನ ಕೊರತೆಯನ್ನು ಪರಿಹರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಿರ್ಣಾಯಕ ಸಭೆ ನಡೆಸಿದರು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ನಾನು ಅದನ್ನು ಗಂಭೀರವಾಗಿ ನೋಡುತ್ತಿದ್ದೇನೆ. ನಾನು ಎಲ್ಲಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇನೆ. ನೀರು ಲಭ್ಯವಿರುವ ಸ್ಥಳಗಳನ್ನು ನಾವು ಗುರುತಿಸುತ್ತಿದ್ದೇವೆ. ಬೆಂಗಳೂರಿನಲ್ಲಿ 3,000ಕ್ಕೂ ಹೆಚ್ಚು ಕೊಳವೆ ಬಾವಿಗಳು ಬತ್ತಿಹೋಗಿವೆ. ಮಾರ್ಚ್ 7ರ ಗಡುವಿನೊಳಗೆ ಅಧಿಕಾರಿಗಳೊಂದಿಗೆ ನೋಂದಾಯಿಸಿಕೊಳ್ಳದಿದ್ದರೆ, ಸರ್ಕಾರವು ಅವರ ಟ್ಯಾಂಕರ್ಗಳನ್ನು ಮುಟ್ಟುಗೋಲು ಹಾಕಿಕೊಳ್ಳುತ್ತದೆ ಎಂದು ರಾಜ್ಯದ ನೀರಿನ ಟ್ಯಾಂಕರ್ ಮಾಲೀಕರಿಗೆ ಎಚ್ಚರಿಕೆ ನೀಡಿದರು.
-
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ










Click it and Unblock the Notifications