ಬೆಂಗಳೂರು ನಗರದ 5 ಕೋವಿಡ್ ಆರೈಕೆ ಕೇಂದ್ರಗಳಿಗೆ ಬೀಗ
ಬೆಂಗಳೂರು, ಆಗಸ್ಟ್ 11 : ಬೆಂಗಳೂರು ನಗರದಲ್ಲಿನ ಒಟ್ಟು ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 75,428. ನಗರದಲ್ಲಿ ಒಟ್ಟು ಸರ್ಕಾರ ನಡೆಸುವ 11 ಕೋವಿಡ್ ಆರೈಕೆ ಕೇಂದ್ರಗಳಿವೆ. ಇವುಗಳಲ್ಲಿ ನೂರಾರು ಹಾಸಿಗೆಗಳು ಖಾಲಿ ಇವೆ.
Recommended Video
ಸರ್ಕಾರ ನಗರದಲ್ಲಿರುವ 5 ಕೋವಿಡ್ ಆರೈಕೆ ಕೇಂದ್ರಗಳನ್ನು ಮುಚ್ಚಲು ತೀರ್ಮಾನ ಕೈಗೊಂಡಿದೆ. ಒಂದು ವೇಳೆ ಆರೈಕೆ ಕೇಂದ್ರಗಳನ್ನು ಮುಚ್ಚಿದರೆ ನಗರದಲ್ಲಿ ಪ್ರಸ್ತುತ ಲಭ್ಯವಿರುವ 4,267 ಹಾಸಿಗೆಗಳ ಪೈಕಿ 2,614 ಹಾಸಿಗೆಗಳು ಲಭ್ಯವಾಗುವುದಿಲ್ಲ.
ಬೆಂಗಳೂರು ನಗರದಲ್ಲಿರುವ ಕೋವಿಡ್ ಆರೈಕೆ ಕೇಂದ್ರಗಳ ಉಸ್ತುವಾರಿಯನ್ನು ಐಎಎಸ್ ಅಧಿಕಾರಿ ರಾಜೇಂದ್ರ ಕಟಾರಿಯಾ ನೋಡಿಕೊಳ್ಳುತ್ತಿದ್ದಾರೆ. "ನಗರದ ಕೋವಿಡ್ ಆರೈಕೆ ಕೇಂದ್ರದಲ್ಲಿ ಶೇ 20ರಷ್ಟು ಬೆಡ್ ಖಾಲಿ ಇದೆ. ಆದ್ದರಿಂದ, ಕೇಂದ್ರಗಳನ್ನು ಮುಚ್ಚುವ ಆಲೋಚನೆ ಇದೆ" ಎಂದರು.
ನಗರದಲ್ಲಿ ಸೋಮವಾರ 1,243 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ನಗರದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 75,428. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 32,985.

ಅಂಕಿ ಸಂಖ್ಯೆಗಳು ಹೇಳುವುದೇನು?
ಬೆಂಗಳೂರು ನಗರದ 11 ಕೋವಿಡ್ ಆರೈಕೆ ಕೇಂದ್ರಗಳಲ್ಲಿ 790 ರಿಂದ 1,100 ಹಾಸಿಗೆಗಳು ಮೊದಲ ದಿನದಿಂದಲೂ ಖಾಲಿ ಇವೆ. ಆದ್ದರಿಂದ ಕೆಲವು ಕೋವಿಡ್ ಆರೈಕೆ ಕೇಂದ್ರಗಳನ್ನು ಮುಚ್ಚಲು ತೀರ್ಮಾನ ಕೈಗೊಳ್ಳಲಾಗಿದೆ.

ಸುಮಾರು 300 ಜನರು ಡಿಸ್ಚಾರ್ಜ್
ಸರಾಸರಿ ಅಂಕಿ ಅಂಶಗಳ ಪ್ರಕಾರ ಬೆಂಗಳೂರು ನಗರದಲ್ಲಿ ಪ್ರತಿದಿನ 300 ಜನರು ಡಿಸ್ಚಾರ್ಜ್ ಆಗುತ್ತಿದ್ದಾರೆ. 400 ಹೊಸ ಕೋವಿಡ್ ಪ್ರಕರಣಗಳು ದಾಖಲಾಗುತ್ತಿವೆ. ಪ್ರತಿದಿನ ಶೇ 15ರಷ್ಟು ಪ್ರಕರಣಗಳನ್ನು ಮಾತ್ರ ಕೋವಿಡ್ ಆರೈಕೆ ಕೇಂದ್ರಕ್ಕೆ ಕಳಿಸಲಾಗುತ್ತಿದೆ.

ಖರ್ಚು ಕಡಿಮೆಯಾಗಲಿದೆ
ಕೋವಿಡ್ ಆರೈಕೆ ಕೇಂದ್ರದ ಬಾಡಿಗೆ, ಸಿಬ್ಬಂದಿಗಳ ವೇತನ, ನಿರ್ವಹಣೆ ವೆಚ್ಚ, ಆಹಾರದ ಖರ್ಚು ಮುಂತಾದ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಕೆಲವು ಕೋವಿಡ್ ಆರೈಕೆ ಕೇಂದ್ರಗಳನ್ನು ಮುಚ್ಚಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

10 ಸಾವಿರ ಹಾಸಿಗೆ ಆರೈಕೆ ಕೇಂದ್ರ
ಬೆಂಗಳೂರು ಹೊರವಲಯದ ಬಿಐಇಸಿಯಲ್ಲಿ 10 ಸಾವಿರ ಹಾಸಿಗೆಗಳ ಆರೈಕೆ ಕೇಂದ್ರವಿದೆ. ಇಲ್ಲಿ 5 ಸಾವಿರ ಬೆಡ್ಗಳು ರೋಗಿಗಳಿಗೆ ಸಿದ್ಧವಾಗಿದೆ. ಆದರೆ, 1500 ಬೆಡ್ಗಳನ್ನು ಮಾತ್ರ ಬಳಕೆ ಮಾಡಿಕೊಳ್ಳಲಾಗುತ್ತಿದೆ.
-
Buttermilk Summer Benefits: ಪ್ರತಿದಿನ ಮಜ್ಜಿಗೆ ಕುಡಿಯುವವರು ತಪ್ಪದೇ ತಿಳಿದುಕೊಳ್ಳಬೇಕಾದ ವಿಷಯಗಳು -
ಸರ್ಕಾರಿ ಕಚೇರಿಗಳಲ್ಲಿ ಇನ್ಮುಂದೆ ಕರಿದ ತಿಂಡಿ, ಟೀ-ಕಾಫಿ ಬ್ಯಾನ್: ಸಿರಿಧಾನ್ಯಗಳಿಗೆ ಆದ್ಯತೆ ನೀಡುವಂತೆ ಆರೋಗ್ಯ ಇಲಾಖೆ ಸೂಚನೆ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ದುಬಾರಿ ಆ್ಯಂಟಿ ಏಜಿಂಗ್ ಕ್ರೀಮ್ಗಿಂತ ಈ ತರಕಾರಿಯೇ ಪರಿಣಾಮಕಾರಿಯಂತೆ: ಚಿರಯೌವನ ತ್ವಚೆಗೆ ನೈಸರ್ಗಿಕ ಉಪಾಯ -
ನಿಮ್ಮ ಮನೆ ದಿಕ್ಕು ಸರಿಯೇ? ರಾಶಿ ಪ್ರಕಾರ ವಾಸ್ತು ಸೂಚನೆಗಳು ಇಲ್ಲಿವೆ -
Summer Heat Alert: ಮಕ್ಕಳ ಆರೋಗ್ಯ ಕಾಪಾಡಲು ಪೋಷಕರಿಗೆ 7 ಮುಖ್ಯ ಸಲಹೆಗಳು -
ರಾಶಿಯಷ್ಟೇ ಅಲ್ಲ, ದಿಕ್ಕು ಕೂಡಾ ಮುಖ್ಯ: ರಾಶಿಗನುಗುಣವಾಗಿ ನಿಮ್ಮ ಅದೃಷ್ಟ ದಿಕ್ಕು ಯಾವುದು ಗೊತ್ತಾ? -
ಬೇಸಿಗೆಯಲ್ಲಿ ಸೌತೆಕಾಯಿ ತಿನ್ನಲು ಟಾಪ್ 5 ಕಾರಣಗಳು: ಆರೋಗ್ಯಕ್ಕೆ ಅದ್ಭುತ ಲಾಭಗಳು -
ಮೊಡವೆ ಕಲೆಗಳನ್ನು ಸಂಪೂರ್ಣವಾಗಿ ತೆಗೆದುಹಾಕುವ ಸಿಂಪಲ್ ಟ್ರಿಕ್ಸ್ : ಬೇಸಿಗೆಯಲ್ಲಿ ಅನುಸರಿಸಿ ಈ 9 ಟಿಪ್ಸ್ -
ಮನೆ ಕಟ್ಟುವಾಗ ವಾಸ್ತು ಪಾಲಿಸದಿದ್ದರೆ ಏನಾಗುತ್ತದೆ? ಇಲ್ಲಿವೆ 5 ಪ್ರಮುಖ ನಿಯಮಗಳು












Click it and Unblock the Notifications