ಈ ಕಾರಣಕ್ಕೆ ಮುಂದಿನ ದಿನಗಳಲ್ಲಿ ಬೆಂಗಳೂರಲ್ಲಿ ಕನ್ನಡಿಗರಿಗೆ ಭಾರೀ ಸಂಕಷ್ಟ ಸಾಧ್ಯತೆ!
5 New Corporations in Bengaluru: ಬೆಂಗಳೂರು ಅಭಿವೃದ್ಧಿಯ ಜೊತೆ ಜೊತೆಗೆ ಬೆಂಗಳೂರಿನಲ್ಲಿ ಸಮಸ್ಯೆಗಳು ಸಹ ಹೆಚ್ಚಾಗುತ್ತಿವೆ. ಇದೀಗ ಬೆಂಗಳೂರಿನ ಅಭಿವೃದ್ಧಿಗಾಗಿ ಬೆಂಗಳೂರು ಪ್ರದೇಶವನ್ನು ಐದು ಮಹಾನಗರಗಳನ್ನಾಗಿ ವಿಭಜನೆ ಮಾಡಲಾಗುತ್ತಿದೆ. ಇದರಿಂದ ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಕನ್ನಡಿಗರಿಗೆ ಸಮಸ್ಯೆ ಆಗಲಿದೆ ಎನ್ನುವ ಚರ್ಚೆ ಜೋರಾಗಿದೆ. ನೆನ್ನೆ ರಾಜ್ಯ ಸರ್ಕಾರವು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ / ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯ ಬುಧವಾರ ಅಂಗೀಕಾರವಾಗಿರುವ ಬೆನ್ನಲೆಯಲ್ಲೇ ಈ ವಿಚಾರವಾಗಿ ಭಾರೀ ಚರ್ಚೆ ಶುರುವಾಗಿದೆ.
2025ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ದೊರಕಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ಸರ್ಕಾರದ ಹಸ್ತಕ್ಷೇಪ ಇಲ್ಲ ಎಂಬ ಸ್ಪಷ್ಟನೆಗೆ ತಿದ್ದುಪಡಿ ತರಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಕರ್ನಾಟಕ ವಿಧಾನಸಭೆಯಲ್ಲಿ ಹೇಳಿದ್ದಾರೆ. ಆದರೆ, ಐದು ಹೊಸ ನಗರ ಪಾಲಿಕೆಗಳ ರಚನೆಯಿಂದಾಗಿ ಬೆಂಗಳೂರಿನ ವಿವಿಧ ಪ್ರದೇಶಗಳ ಅಭಿವೃದ್ಧಿಗೆ ಹಿನ್ನಡೆ ಆಗಲಿದೆ. ಅಲ್ಲದೇ ತೆರಿಗೆ ಸಂಗ್ರಹದಲ್ಲಿ ಲೋಪವಾಗಲಿದೆ ಹಾಗೂ ಕನ್ನಡಿಗರಿಗೆ ಅನ್ಯಾಯವಾಗಲಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮಾಜಿ ವಿರೋಧ ಪಕ್ಷದ ನಾಯಕ ಪದ್ಮನಾಭ ರೆಡ್ಡಿ (ಬಿಜೆಪಿ ನಾಯಕ) ಅವರು ಹೇಳಿದ್ದಾರೆ.

ಈ ಸಂಬಂಧ ಅವರು ಕರ್ನಾಟಕ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿಗಳಿಗೆ ಪತ್ರವನ್ನೂ ಬರೆದಿದ್ದಾರೆ. ಈಗ ಬೆಂಗಳೂರಿನಲ್ಲಿ ರಚಿಸಿರುವ 5 ಪಾಲಿಕೆಗಳಿಂದ ಕೆಲವು ಪಾಲಿಕೆಗಳ ಆಡಳಿತದಲ್ಲಿ ಕನ್ನಡ ಭಾಷೆ ಕಣ್ಮರೆಯಾಗುವ ಸಾಧ್ಯತೆಗಳು ಜಾಸ್ತಿ ಕಾಣಿಸುತ್ತಿವೆ. ಇದರಿಂದ ಮುಂದಿನ ದಿನಗಳಲ್ಲಿ ಕಾನೂನು
ಸುವ್ಯವಸ್ಥೆಗಳು ಹಾಳಾಗುವ ಸಂಭವವಿರುತ್ತೆ. ಈಗ ರಚಿಸಿರುವ 5 ಪಾಲಿಕೆಗಳಿಂದ ಕೆಲವು ಪಾಲಿಕೆಗಳು ಆರ್ಥಿಕ ಹಿನ್ನಡೆ, ಕೆಲವು ಪಾಲಿಕೆಗಳು ಆರ್ಥಿಕವಾಗಿ ಸದೃಢವಾಗುತ್ತವೆ. ಇದರಿಂದ ಸಮಗ್ರ ಬೆಂಗಳೂರು ಅಭಿವೃದ್ಧಿಗೆ ತೊಂದರೆಯಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ವಿವಿಧ ಭಾಷೆಯವರ ಪ್ರಭಾವ ಇದೆ. ಬೆಂಗಳೂರು ಮಹಾನಗರ ಪಾಲಿಕೆಯನ್ನು ಐದು ಪಾಲಿಕೆಗಳನ್ನು ಮಾಡುವುದರಿಂದಾಗಿ ಕನ್ನಡಿಗರಿಗೆ ಹಿನ್ನಡೆ ಆಗಲಿದೆ. ಅಲ್ಲದೇ ಕನ್ನಡಿಗರು ತಮ್ಮ ಅಸ್ತಿತ್ವ ಹಾಗೂ ಅಧಿಕಾರವನ್ನು ಕಳೆದುಕೊಳ್ಳಲಿದ್ದಾರೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ. ಆದರೆ ಎಲ್ಲಾ ವಿರೋಧಗಳ ನಡುವೆಯೂ ಈ ತಿದ್ದುಪಡಿಯನ್ನು ಕರ್ನಾಟಕ ವಿಧಾನಸಭೆಯಲ್ಲಿ ಅಂಗೀಕಾರ ಮಾಡಲಾಗಿದೆ. ಚುನಾವಣೆ ನಡೆಸಬೇಕಾಗಿರುವ ಉದ್ದೇಶದಿಂದ ಬೆಂಗಳೂರಿನಲ್ಲಿ ಈಗಾಗಲೇ ಇರುವ 198 ವಾರ್ಡ್ಗಳಿಗೆ ಚುನಾವಣೆಯನ್ನು ಮಾಡಿ ಮುಂದಿನ ದಿನಗಳಲ್ಲಿ ನಿರ್ದಿಷ್ಟ ಬದಲಾವಣೆಗಳನ್ನು ಮಾಡಿಕೊಳ್ಳುವ ಯೋಜನೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಇದೆ.
ಇನ್ನು ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆಯನ್ನು ಬರೋಬ್ಬರಿ 6 ವರ್ಷಗಳಿಂದ ನಡೆಸಿಲ್ಲ. ಚುನಾವಣೆ ನಡೆಯದೆ ಬೆಂಗಳೂರಿನಲ್ಲಿ ಯಾವುದೇ ಪಾಲಿಕೆಯ ಸದಸ್ಯರು, ಮೇಯರ್ ಮತ್ತು ಉಪ ಮೇಯರ್ ಇಲ್ಲ. ಹೀಗಾಗಿ ಬೆಂಗಳೂರಿನ ಜನ ಎಲ್ಲಾ ಸಮಸ್ಯೆಗಳಿಗೂ ಆಯಾ ವಿಧಾನಸಭಾ ಕ್ಷೇತ್ರದ ಶಾಸಕರನ್ನೇ ಅವಲಂಬಿಸುವಂತಾಗಿದೆ. ಬೆಂಗಳೂರಿನ ಜನರಿಗೆ ಪಾಲಿಕೆಯ ಚುನಾವಣೆ ಇತ್ತು ಹಾಗೂ ಪಾಲಿಕೆಯ ಸದಸ್ಯರು ಇದ್ದರು ಎನ್ನುವುದೇ ಮರೆತು ಹೋಗುವಂತೆ ಆಗಿದೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ?












Click it and Unblock the Notifications