ಬೆಂಗಳೂರು ರಸ್ತೆಗುಂಡಿ ಮುಚ್ಚುವುದಕ್ಕೆ 5 ವಿಶೇಷ ತಂಡ ರಚನೆ!
ಬೆಂಗಳೂರಿನಲ್ಲಿ ಪ್ರತಿ ಬಾರಿಯೂ ಮಳೆಗಾಲದಲ್ಲಿ ರಸ್ತೆಗುಂಡಿಗಳು ನಿರ್ಮಾಣವಾಗುತ್ತವೆ. ಪ್ರತಿ ಬಾರಿಯೂ ರಸ್ತೆಗುಂಡಿಗಳನ್ನು ಮುಚ್ಚುವ ಮೂಲಕ ಸುಗಮ ಸಂಚಾರಕ್ಕೆ ಸ್ಥಳೀಯ ಆಡಳಿತವು ಅನುವು ಮಾಡಿಕೊಡುತ್ತಿತ್ತು. ಆದರೆ ಈ ಬಾರಿ ರಸ್ತೆಗುಂಡಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ರಸ್ತೆಗುಂಡಿಗಳನ್ನು ಮುಚ್ಚುವ ಕ್ರಮದಲ್ಲೂ ನಿರ್ದಿಷ್ಟ ನಿಯಮ ಪಾಲನೆ ಮಾಡಲಾಗುತ್ತಿಲ್ಲ ಎನ್ನುವ ಆರೋಪ ಸಹ ಕೇಳಿ ಬಂದಿದೆ.
ಇದೀಗ ಈ ವಿಚಾರವಾಗಿ ಮಾತನಾಡಿರುವ ಗ್ರೇಟರ್ ಬೆಂಗಳೂರು ಆಡಳಿತದ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು, ಹೆಚ್ಚು ತಂಡಗಳನ್ನು ನಿಯೋಜಿಸಿಕೊಂಡು ತ್ವರಿತಗತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವುದು ಸೇರಿದಂತೆ ಕೆಲವೊಂದು ಪ್ರಮುಖ ನಿರ್ದೇಶನಗಳನ್ನು ನೀಡಿದ್ದಾರೆ.

ಗ್ರೇಟರ್ ಬೆಂಗಳೂರು ಆಡಳಿತ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಸಲುವಾಗಿ ವರ್ಚುವಲ್ ಮೂಲಕ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದ ಆರ್ಟಿರಿಯಲ್ ಮತ್ತು ಸಬ್-ಆರ್ಟಿರಿಯಲ್ ರಸ್ತೆಗಳಲ್ಲಿ ಬಾಕಿಯಿರುವ ಗುಂಡಿಗಳನ್ನು ಆದ್ಯತೆಯ ಮೇರೆಗೆ ಮುಚ್ಚುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪ್ರಮುಖ ರಸ್ತೆಗಳಲ್ಲಿ ಗುಂಡಿಗಳನ್ನು ಮುಚ್ಚುವುದರ ಜೊತೆಗೆ ವಾರ್ಡ್ ಮಟ್ಟದ ರಸ್ತೆಗಳಲ್ಲಿ ಗುಂಡಿಗಳನ್ನು ಮುಚ್ಚಲು ನಿಯೋಜನೆಗೊಂಡಿರುವ ಗುತ್ತಿಗೆದಾರರಿಂದ ತ್ವರಿತವಾಗಿ ಕೆಲಸ ಮಾಡಿಸಲು ಸೂಚಿಸಿದ್ದಾರೆ.
ಅಲ್ಲದೇ ಪಾಲಿಕೆಯ ಡಾಂಬರು ಮಿಶ್ರಣ ಘಟಕದಿಂದ 5 ನಗರ ಪಾಲಿಕೆಗಳಿಗೆ ಇಂಡೆಂಟ್ಗೆ ಅನುಗುಣವಾಗಿ ಡಾಂಬರು ಮಿಶ್ರಣ ಪೂರೈಕೆ ಆಗುತ್ತಿಲ್ಲ. ಈ ಕುರಿತು ಅಗತ್ಯ ಕ್ರಮ ಕೈಗೊಂಡು ಇಂಡೆಂಟ್ಗೆ ಅನುಗುಣವಾಗಿ ಡಾಂಬರು ಮಿಶ್ರಣ ಪೂರೈಸುವಂತೆ ಗುತ್ತಿಗೆದಾರರಿಗೆ ನಿರ್ದೇಶನ ಕೊಟ್ಟಿದ್ದಾರೆ.
ಹೆಚ್ಚು ತಂಡಗಳನ್ನು ನಿಯೋಜಿಸಿ ರಸ್ತೆ ಗುಂಡಿಗಳನ್ನು ಮುಚ್ಚಿ: ಡಾಂಬರು ಮಿಶ್ರಣ ಘಟಕದಿಂದ ಆರ್ಟಿರಿಯಲ್ ಮತ್ತು ಸಬ್-ಆರ್ಟಿರಿಯಲ್ ರಸ್ತೆಗಳಿಗಾಗಿ ಡಾಂಬರು ಪೂರೈಕೆ ನಡೆಯುತ್ತಿದ್ದು, ಸದ್ಯಕ್ಕೆ 8 ತಂಡಗಳು ಕಾರ್ಯನಿರ್ವಹಿಸುತ್ತಿವೆ. ಅದರ ಜೊತೆಗೆ ಹೆಚ್ಚುವರಿಯಾಗಿ 5 ತಂಡಗಳನ್ನು ನಿಯೋಜಿಸಿ, ಅವಶ್ಯಕತೆ ಇರುವ ಪ್ರದೇಶಗಳಲ್ಲಿ ಬಳಸಿಕೊಂಡು ಕಾಲಮಿತಿಯೊಳಗಾಗಿ ಗುಂಡಿಗಳನ್ನು ಮುಚ್ಚುವಂತೆ ಸೂಚನೆ ಕೊಡಲಾಗಿದೆ.
ಒಂದು ತಂಡದಲ್ಲಿ ಒಂದು ರೋಲರ್, ಒಂದು ಟ್ರ್ಯಾಕ್ಟರ್ ಹಾಗೂ 20 ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದು, ರಸ್ತೆ ಗುಂಡಿಗಳನ್ನು ಗುಣಮಟ್ಟದಿಂದ ಮುಚ್ಚುವಂತೆ ಸೂಚನೆ ನೀಡಿದರು. ನಗರದಲ್ಲಿ ಬಾಕಿಯಿರುವ ರಸ್ತೆ ಗುಂಡಿಗಳನ್ನು ಶೀಘ್ರಗತಿಯಲ್ಲಿ ಮುಚ್ಚುವ ಸಲುವಾಗಿ ಪ್ರತಿನಿತ್ಯ 30 ಲೋಡ್ಗಳ ಡಾಂಬರು ಮಿಶ್ರಣವನ್ನು ಘಟಕದಿಂದ ಪೂರೈಸುವಂತೆ ಗುತ್ತಿಗೆದಾರರಿಗೆ ನಿರ್ದೇಶನ ಕೊಟ್ಟಿದ್ದಾರೆ.
ಪ್ರಮುಖ ರಸ್ತೆಗಳಲ್ಲಿ ರಾತ್ರಿ ವೇಳೆ ಗುಂಡಿಗಳನ್ನು ಮುಚ್ಚಿ: ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಿರುವುದರಿಂದ ರಾತ್ರಿ ವೇಳೆಯಲ್ಲಿ ಅಗತ್ಯ ಡಾಂಬರು ಪಡೆದು ಗುಂಡಿಗಳನ್ನು ಮುಚ್ಚುವಂತೆ ಸೂಚಿಸಿದರು. ಜೊತೆಗೆ, ವಾರ್ಡ್ ರಸ್ತೆಗಳಿಗೆ ಪಾಲಿಕೆಯ ಡಾಂಬರು ಮಿಶ್ರಣ ಘಟಕದಿಂದಲೇ ಡಾಂಬರು ಪೂರೈಕೆ ಮಾಡಲು ನಿರ್ಣಯ ಕೈಗೊಳ್ಳುವುದಾಗಿ ತಿಳಿಸಿದರು.
ಸಭೆಯಲ್ಲಿ ನಗರ ಪಾಲಿಕೆ ಆಯುಕ್ತರಾದ ರಾಜೇಂದ್ರ ಚೋಳನ್, ಪೊಮ್ಮಲ ಸುನೀಲ್ ಕುಮಾರ್, ಕೆ.ಎನ್. ರಮೇಶ್, ಡಾ. ರಾಜೇಂದ್ರ ಕೆ.ವಿ., ಅಪರ ಆಯುಕ್ತರಾದ ಆರ್. ಲತಾ, ದಲ್ಜಿತ್ ಕುಮಾರ್, ಲೋಖಂಡೆ ಸ್ನೇಹಲ್ ಸುಧಾಕರ್ ಸೇರಿದಂತೆ ಹಲವರು ಹಾಜರಿದ್ದರು.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications