Get Updates
Get notified of breaking news, exclusive insights, and must-see stories!

ಬೆಂಗಳೂರು ನಗರದಲ್ಲಿ ಬರಲಿವೆ 50 ಹೊಸ ಇಂದಿರಾ ಕ್ಯಾಂಟೀನ್

ಬೆಂಗಳೂರು, ಜೂನ್ 04; ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪೂರ್ಣ ಬಹುಮತ ಪಡೆದು ಸರ್ಕಾರ ರಚನೆ ಮಾಡಿದೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಸರ್ಕಾರ ಮುನ್ನಡೆಸುತ್ತಿದ್ದಾರೆ. ಇಂದಿರಾ ಕ್ಯಾಂಟೀನ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸಿನ ಯೋಜನೆ. ಈಗ ಈ ಯೋಜನೆಯನ್ನು ಮತ್ತೆ ಕಾರ್ಯಗತಗೊಳಿಸುವ ಚರ್ಚೆ ಆರಂಭವಾಗಿದೆ.

ಬೆಂಗಳೂರು ನಗರದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಇಂದಿರಾ ಕ್ಯಾಂಟೀನ್ ಉಸ್ತುವಾರಿ ನೋಡಿಕೊಳ್ಳುತ್ತದೆ. ನಗರದಲ್ಲಿ ಹೊಸದಾಗಿ 50 ಇಂದಿರಾ ಕ್ಯಾಂಟೀನ್ ಆರಂಭಿಸಲು ಸಿದ್ಧತೆ ನಡೆದಿದೆ. ಈಗ ಕಾಂಗ್ರೆಸ್ ಸರ್ಕಾರವೇ ಅಸ್ತಿತ್ವದಲ್ಲಿ ಇರುವುದರಿಂದ ಕ್ಯಾಂಟೀನ್ ನಿರ್ವಹಣೆ ಮಾಡಲು ಅನುದಾನದ ಕೊರತೆ ಆಗುವುದಿಲ್ಲ ಎಂಬುದು ಲೆಕ್ಕಾಚಾರವಾಗಿದೆ.

50 New Indira Canteen To Come Up In Bengaluru City

2013ರ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು. 2017ರಲ್ಲಿ ಸಿದ್ದರಾಮಯ್ಯ ಇಂದಿರಾ ಕ್ಯಾಂಟೀನ್‌ ಯೋಜನೆಗೆ ಚಾಲನೆ ನೀಡಿದ್ದರು. ಆದರೆ ಬಳಿಕ ಇಂದಿರಾ ಕ್ಯಾಂಟೀನ್ ಯೋಜನೆಗೆ ಸರಿಯಾದ ಅನುದಾನ ಸಿಕ್ಕಿಲ್ಲ. ಬಡವರಿಗೆ ಕಡಿಮೆ ದರದಲ್ಲಿ ಆಹಾರ ಒದಗಿಸುವ ಉದ್ದೇಶದಿಂದ ಸ್ಥಾಪಿಸಲಾದ ಕ್ಯಾಂಟೀನ್‌ಗೆ ಬೀಗ ಜಡಿಯುವ ಪರಿಸ್ಥಿತಿ ನಿರ್ಮಾಣಗೊಂಡಿತು.

ವರದಿ ನೀಡಲು ಸೂಚನೆ; ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುತ್ತಿದ್ದಂತೆಯೇ ಇಂದಿರಾ ಕ್ಯಾಂಟೀನ್‌ಗಳ ಸ್ಥಿತಿಗತಿಗಳ ಬಗ್ಗೆ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವರದಿ ಆಧರಿಸಿ ಅವರು ಕ್ಯಾಂಟೀನ್‌ಗಳನ್ನು ಹೇಗೆ ಅಭಿವೃದ್ಧಿ ಮಾಡಬಹುದು ಎಂದು ಯೋಜನೆ ರೂಪಿಸಲಿದ್ದಾರೆ. ಇದರ ನಡುವೆಯೇ ಬೆಂಗಳೂರಿನಲ್ಲಿ 50 ಹೊಸ ಕ್ಯಾಂಟೀನ್ ತೆರೆಯಲು ಬಿಬಿಎಂಪಿ ಮುಂದಾಗಿದೆ.

ಬೆಂಗಳೂರು ನಗರದಲ್ಲಿ ವಾರ್ಡ್‌ಗೊಂದು ಇಂದಿರಾ ಕ್ಯಾಂಟೀನ್ ಎಂಬ ಘೋಷಣೆಯಲ್ಲಿ ಕ್ಯಾಂಟೀನ್ ನಿರ್ಮಾಣ ಮಾಡಲಾಗಿದೆ. ಅಲ್ಲದೇ 20ಕ್ಕೂ ಹೆಚ್ಚು ಮೊಬೈಲ್ ಕ್ಯಾಂಟೀನ್‌ಗಳಿವೆ. ಈಗ ಮತ್ತೆ ಹೊಸ 50 ಕ್ಯಾಂಟೀನ್ ತೆರೆಯಲು ಬಿಬಿಎಂಪಿ ಸಿದ್ದತೆ ನಡೆಸುತ್ತಿದೆ. ವಿಧಾನಸೌಧ, ವಿಕಾಸಸೌಧ, ಬಹುಮಹಡಿ ಕಟ್ಟಡ ಹೀಗೆ ಹೆಚ್ಚು ಜನರು ಸೇರುವ ಪ್ರದೇಶಗಳಲ್ಲಿ ಹೊಸ ಕ್ಯಾಂಟೀನ್ ನಿರ್ಮಾಣ ಮಾಡಲಾಗುತ್ತದೆ ಎನ್ನುವ ಮಾಹಿತಿ ಇದೆ.

50 New Indira Canteen To Come Up In Bengaluru City

2019ರ ತನಕ ಇಂದಿರಾ ಕ್ಯಾಂಟೀನ್‌ಗಳು ಯಶಸ್ವಿಯಾಗಿ ನಡೆದವು. ಬಳಿಕ ಆಹಾರದ ಗುಣಮಟ್ಟ, ಹೆಸರು ಬದಲಾವಣೆ, ಗ್ರಾಹಕರಿಗೆ ನೀಡುವ ಆಹಾರದದಲ್ಲಿ ಕಳ್ಳಲೆಕ್ಕ ಹೀಗೆ ವಿವಿಧ ವಿವಾದಗಳು ಕೇಳಿ ಬಂದವು. ಕ್ರಮೇಣ ಯೋಜನೆಯ ಜನಪ್ರಿಯತೆ ಕಡಿಮೆಯಾಗುತ್ತಾ ಬಂತು. ಆಗ ಪ್ರತಿಪಕ್ಷದಲ್ಲಿದ್ದ ಕಾಂಗ್ರೆಸ್ ಯೋಜನೆ ಸ್ಥಗಿತಗೊಳಿಸಬಾರದು ಎಂದು ಬಿಜೆಪಿ ಸರ್ಕಾರವನ್ನು ಒತ್ತಾಯಿಸಿತ್ತು.

2017-18ರಲ್ಲಿ ಇಂದಿರಾ ಕ್ಯಾಂಟೀನ್‌ಗೆ ಕಾಂಗ್ರೆಸ್ ಸರ್ಕಾರ 100 ಕೋಟಿ, 2018-19ರಲ್ಲಿ ಮೈತ್ರಿ ಸರ್ಕಾರ 145 ಕೋಟಿ ಅನುದಾನ ನೀಡಿತ್ತು. ಆದರೆ ಬಳಿಕ ಬಿಜೆಪಿ ಸರ್ಕಾರ ಅನುದಾನ ನೀಡಿಲ್ಲ ಎಂಬುದು ಆರೋಪವಾಗಿದೆ. 2023ರ ವಿಧಾನಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ಬಿಜೆಪಿ ಅಟಲ್ ಆಹಾರ ಕೇಂದ್ರ ತೆರೆಯುತ್ತೇವೆ ಎಂದು ಭರವಸೆ ಕೊಟ್ಟಿತ್ತು. ಆದರೆ ಪಕ್ಷ ಅಧಿಕಾರಕ್ಕೆ ಬರಲಿಲ್ಲ.

198 ವಾರ್ಡ್‌ಗಳನ್ನು ಹೊಂದಿರುವ ಬಿಬಿಎಂಪಿಯ ವ್ಯಾಪ್ತಿ ಈಗ 243 ವಾರ್ಡ್‌ಗಳಿಗೆ ಏರಿಕೆಯಾಗುತ್ತಿದೆ. ಆದ್ದರಿಂದ ಬೆಂಗಳೂರು ನಗರದಲ್ಲಿ 50 ಹೊಸ ಇಂದಿರಾ ಕ್ಯಾಂಟೀನ್ ತೆರೆಯುವುದು ಬಿಬಿಎಂಪಿಯ ಯೋಜನೆಯಾಗಿದೆ. ಕ್ಯಾಂಟೀನ್‌ನಲ್ಲಿ ಆಹಾರದ ಮೆನು ಬದಲಾವಣೆ ಮಾಡಿ ರಾಗಿ ಮುದ್ದೆ, ಜೋಳದ ರೊಟ್ಟಿಯನ್ನು ಸಹ ನೀಡಲು ಕಾಂಗ್ರೆಸ್ ಸರ್ಕಾರ ಪ್ರಸ್ತಾವನೆ ಸಿದ್ಧಗೊಳಿಸಿದೆ.

ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಇಂದಿರಾ ಕ್ಯಾಂಟೀನ್ ಪುನಶ್ಚೇತನ ಮಾಡಲಿದ್ದೇವೆ ಎಂದು ಭರವಸೆ ನೀಡಿತ್ತು. ಹಣಕಾಸು ಸಚಿವರು ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಜುಲೈ ಮೊದಲ ವಾರದಲ್ಲಿ ಬಜೆಟ್ ಮಂಡನೆ ಮಾಡಲಿದ್ದಾರೆ. ಆಗ ಇಂದಿರಾ ಕ್ಯಾಂಟೀನ್‌ಗೆ ಅನುದಾನ ಘೋಷಣೆ ಮಾಡುವ ನಿರೀಕ್ಷೆ ಇದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+